ನ್ಯಾಷನಲ್ ಫೆಡರೇಷನ್ ಆಫ್ ಪೋಸ್ಟಲ್ ಎಂಪ್ಲಾಯಿಸ್ನ ೧೨ನೇ ಫೆಡರಲ್ ಕೌನ್ಸಿಲ್ ಅಧಿವೇಶನ ಉದ್ಘಾಟನೆ
ಮೈಸೂರು: ಅಂಚೆ ಇಲಾಖೆಯನ್ನು ಖಾಸಗೀಕರಣ ಮಾಡುವ ಹುನ್ನಾರಗಳು ನಡೆಯುತ್ತಿದ್ದು, ಸಾರ್ವಜನಿಕರ ಸ್ವತ್ತಾದ ಅಂಚೆ ಇಲಾಖೆಯನ್ನು ಉಳಿಸಿಕೊಳ್ಳಬೇಕಾದದ್ದು ಪ್ರತಿಯೊಬ್ಬ ಅಂಚೆ ನೌಕರನ ಜವಾಬ್ದಾರಿಯಾಗಿರುವ ಕಾರಣ ಅಗತ್ಯ ಹೋರಾಟ ನಡೆಸಬೇಕು ಎಂದು ಸಿಐಟಿಯು ರಾಷ್ಟ್ರೀಯ ಕಾರ್ಯದರ್ಶಿ ಕೆ.ಎನ್.ಉಮೇಶ್ ಸಲಹೆ ನೀಡಿದರು.
ನಗರದ ಜೆಎಲ್ಬಿ ರಸ್ತೆಯಲ್ಲಿರುವ ಗೋವಿಂದರಾವ್ ಮೆಮೋರಿಯಲ್ ಹಾಲ್ನಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ನ್ಯಾಷನಲ್ ಫೆಡರೇಷನ್ ಆಫ್ ಪೋಸ್ಟಲ್ ಎಂಪ್ಲಾಯೀಸ್ನ ೧೨ನೇ ಫೆಡರಲ್ ಕೌನ್ಸಿಲ್ ಅಧಿವೇಶನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಂಚೆ ಇಲಾಖೆಯನ್ನು ಆರು ಘಟಕಗಳನ್ನಾಗಿ ವಿಭಜಿಸಲು ಯೋಜನೆಯನ್ನು ಸಿದ್ಧಪಡಿಸಲಾಗಿದೆ. ಇದೊಂದು ಅವೈಜ್ಞಾನಿಕ ಕ್ರಮವಾಗಿದೆ. ಒಂದೆಡೆ ಲಾಭ ಮತ್ತೊಂದೆಡೆ ನಷ್ಟದಲ್ಲಿರುವ ಬೇರೆ ಬೇರೆ ಬ್ಯಾಂಕ್ಗಳನ್ನು ಒಟ್ಟಿಗೆ ಸೇರಿಸುವ ಕೆಲಸ ಮಾಡುತ್ತಿರುವ ಸರ್ಕಾರ ಅಂಚೆ ಇಲಾಖೆಯನ್ನು ಆರು ಘಟಕಗಳಾಗಿ ವಿಭಜಿಸಲು ಹೊರಟಿರುವುದು ಹಾಸ್ಯಾಸ್ಪದವಾಗಿದೆ ಎಂದು ವ್ಯಂಗ್ಯವಾಡಿದರು.
೧೯೯೧ರಲ್ಲಿ ಆರಂಭವಾದ ಉದಾರೀಕರಣದ ಫಲವಾಗಿ ದೇಶದಲ್ಲಿಂದು ಎಲ್ಲಾ ಸಾರ್ವಜನಿಕ ರಂಗದ ಉದ್ಯಮಗಳನ್ನು ಒಂದೊಂದಾಗಿ ಖಾಸಗೀಕರಣ ಮಾಡುವ ಪ್ರಕ್ರಿಯೆ ಶುರುವಾಗಿದೆ. ಇದಕ್ಕಾಗಿ ಒಂದು ಇಲಾಖೆಯನ್ನೇ ತೆರೆಯಲಾಗಿದೆ. ನವರತ್ನಗಳು ಎಂದು ಕರೆಯಲಾಗುವ ಸಾರ್ವಜನಿಕ ಉದ್ದಿಮೆಗಳನ್ನು ಮಾರಾಟ ಅಥವಾ ಖಾಸಗೀಕರಣ ಮಾಡಲು ಹೊರಟಿರುವುದು ಸರ್ಕಾರದ ಆರ್ಥಿಕ ದಿವಾಳಿತನದ ಸಂಕೇತವಾಗಿದೆ ಎಂದು ವಿಷಾಧಿಸಿದರು.
ಕರ್ನಾಟಕ ವೃತ್ತದ ಚೀಫ್ ಪೋಸ್ಟ್ ವಾಸ್ಟರ್ ಜನರಲ್ ಎಸ್.ರಾಜೇಂದ್ರಕುವಾರ್ ಮಾತನಾಡಿ, ಬದಲಾಗುತ್ತಿರುವ ಗ್ರಾಹಕರ ಮನೋಭಾವಕ್ಕೆ ತಕ್ಕಂತೆ ಸೇವೆಗಳನ್ನು ಒದಗಿಸಬೇಕಾಗಿರುವುದು ಇಂದಿನ ಅವಶ್ಯಕತೆಯಾಗಿದೆ. ಈ ನಿಟ್ಟಿನಲ್ಲಿ ಅಂಚೆ ಇಲಾಖೆಯ ಸಿಬ್ಬಂದಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು.
ನ್ಯಾಷನಲ್ ಫೆಡರೇಷನ್ ಆಫ್ ಪೋಸ್ಟಲ್ ಎಂಪ್ಲಾಯಿಸ್ನ ವಿಶ್ರಾಂತ ಸೆಕ್ರೆಟರಿ ಜನರಲ್ ಆರ್.ಎನ್.ಪರಾಶರ್ ಹೊಸ ಪಿಂಚಣಿ ನೀತಿಯನ್ನು ರದ್ದುಪಡಿಸಿ, ಹಳೇ ಪಿಂಚಣಿ ಯೋಜನೆಯನ್ನು ತಕ್ಷಣ ಜಾರಿಗೆ ತರಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು. ಕರ್ನಾಟಕ ವೃತ್ತದ ನ್ಯಾಷನಲ್ ಫೆಡರೇಷನ್ ಆಫ್ ಪೋಸ್ಟಲ್ ಎಂಪ್ಲಾಯಿಸ್ನ ಅಧ್ಯಕ್ಷ ಎ.ಶ್ರೀನಿವಾಸ್ ಮತ್ತಿತರರು ಹಾಜರಿದ್ದರು.
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಶೀಘ್ರದಲ್ಲೇ ಒಳ್ಳೆಯ ಸ್ಥಾನ ಸಿಗಲಿದೆ ಎಂದು ಕುಣಿಗಲ್ ಶಾಸಕ ಡಾ.ರಂಗನಾಥ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ…
ಹುಬ್ಬಳ್ಳಿ: ಬೇಸಿಗೆಯ ಹಿನ್ನೆಲೆಯಲ್ಲಿ ರಣಬಿಸಿಲ ಝಳ ಹೆಚ್ಚಾಗಿದ್ದು, ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಈ ಬಗ್ಗೆ ಆರೋಗ್ಯ ಸಚಿವ…
ಮೈಸೂರು: ಮೈಸೂರಿನ ಹಳೆ ಕೆಸರೆ ವರುಣ ನಾಲೆಯ ಅಂಡರ್ ಬ್ರಿಡ್ಜ್ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಶವದ ಮೇಲೆ…
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನ್ಕಕೆ ಸೂರ್ಯನ ಪ್ರತಾಪ ಹೆಚ್ಚಾಗುತ್ತಿದ್ದು, ಇಡೀ ಕರ್ನಾಟಕವೇ ಬಿಸಿಲಿನ ಕೆಂಡದಂತಾಗಿದೆ.. ಬಿಸಿಲಿನ ಝಳ ಹೆಚ್ಚಾಗಿರುವ ಕಾರಣ…
ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿಯ ಸೂತ್ರವನ್ನು ಹೆಣೆಯುವಲ್ಲಿ ಕರ್ನಾಟಕ ಸರ್ಕಾರ ಕೊನೆಗೂ ಯಶಸ್ವಿಯಾಗಿದೆ. ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ಬಲಗೈ, ಎಡಗೈಗೆ ತಲಾ…
ಪ್ರೊ.ಶಬ್ಬೀರ್ ಮುಸ್ತಾಫಾ ಜಿ.ಪಿ.ಬಸವರಾಜು ಸಮುದಾಯದ ನಂಬಿಕೆಯನ್ನು ಉಳಿಸಿಕೊಳ್ಳಬೇಕಾದದ್ದು ಕಾಂಗ್ರೆಸ್ ಪಕ್ಷದ ಹೊಣೆ ಭಾರತದಂಥ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಚುನಾವಣೆ ಎನ್ನುವುದು ನಿರಂತರ…