ಮೈಸೂರು: ಅಂಚೆ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ.
ಹೌದು. 18 ರಿಂದ 25 ವರ್ಷದೊಳಗಿನವರು ವಾರ್ಷಿಕವಾಗಿ 399 ರೂಗಳನ್ನು ಪಾವತಿ ಮಾಡಿದರೆ, 10ಲಕ್ಷ ರೂಪಾಯಿಗಳ ಅಪಘಾತ ವಿಮೆ ಅನುಕೂಲವನ್ನುಪಡೆಯಬಹುದಾಗಿದೆ. ಈ ಮೂಲಕ ಅಂಚೆ ಇಲಾಖೆಯು ಆಕಸ್ಮಿಕ ಅವಘಡಗಳಿಗೆ ತುತ್ತಾಗುವ ಜನಸಾಮಾನ್ಯರಿಗೆ ನೆರವು ನೀಡಲು ಮುಂದಾಗಿದೆ.
ಈ ವಿಮೆಯು ಫಲಾನುಭವಿಗಳು ಆಕಸ್ಮಿಕವಾಗಿ ಅಪಘಾತಕ್ಕೆ ತುತ್ತಾದರೆ ಅಥವಾ ಅಂಚೆ ಇಲಾಖೆಯು ಸೂಚಿಸಿರುವ ಅವಘಡದ ಸನ್ನಿವೇಶಗಳಿಗೆ ಒಳಗಾದರೆ ಆರ್ಥಿಕ ನೆರವು ಸಿಗಲಿದೆ.
ಈ ವಿಮಾ ಯೋಜನೆಯು ಫಲಾನುಭವಿ ಆಕಸ್ಮಿಕವಾಗಿ ಸಾವನ್ನಪ್ಪಿದ್ದರೆ ಅವರ ಕುಟುಂಬಸ್ಥರಿಗೆ ವಿಮೆ ಮೊತ್ತ, ಶಾಶ್ವತ ಅಂಗವೈಕಲ್ಯವಾದರೆ ಆರ್ಥಿಕ ಸಹಾಯ, ಆಸ್ಪತ್ರೆ ಖರ್ಚು ವೆಚ್ಚ ಸಿಗಲಿದೆ. ಅಲ್ಲದೆ, ಮೃತರ ಮಕ್ಕಳ ಶಿಕ್ಷಣಕ್ಕಾಗಿ ನೆರವು ದೊರಕಲಿದೆ. ಈ ಸಂಬಂಧ ಸಮೀಪದ ಅಂಚೆ ಕಚೇರಿಯಲ್ಲಿ ಇಂಡಿಯಾ ಪೋಸ್ಟ್ ಪೇಮೆಂಟ್ ಖಾತೆ ತೆರೆದು ಈ ವಿಮಾ ಯೋಜನೆ ಲಾಭ ಪಡೆದುಕೊಳ್ಳಬಹುದೆಂದು ತಿಳಿಸಲಾಗಿದೆ.
ಬೆಂಗಳೂರು: ರಾಜ್ಯಾದ್ಯಂತ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಮತ್ತೊಮ್ಮೆ ಗಂಭೀರ ಸಂಕಷ್ಟದ ಅಂಚಿಗೆ ತಲುಪಿದೆ. ನಾಲ್ಕು ನಿಗಮಗಳ ಸಾರಿಗೆ ನೌಕರರು ಮತ್ತೆ…
ಮೈಸೂರು: ಮಳವಳ್ಳಿಯಲ್ಲಿ ನಡೆಯಲಿರುವ ಶಿವರಾತ್ರೀಶ್ವರ ಶಿವಯೋಗಿಗಳ ಜಯಂತೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದು ಮೈಸೂರಿಗೆ ಆಗಮಿಸಿದರು. ಮೈಸೂರಿನ…
ಮೈಸೂರು: ಮೈಸೂರು ಮಹಾನಗರ ಪಾಲಿಕೆ ಹಾಗೂ ಪಶು ಸಂಗೋಪನಾ ಇಲಾಖೆ ವತಿಯಿಂದ ಇಂದು ಬೀದಿ ನಾಯಿಗಳನ್ನು ದತ್ತು ನೀಡುವ ಕಾರ್ಯಕ್ರಮವನ್ನು…
ಮೈಸೂರು: ರಾಜ್ಯ ಸರ್ಕಾರದ ದುರಾಡಳಿತದಿಂದ ರಾಜ್ಯದಲ್ಲಿ 2800 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.…
ಮೈಸೂರು: ಆರ್ಸಿಬಿ ಅಭಿಮಾನಿಗಳಿಗೆ ಕೆಎಸ್ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಗುಡ್ನ್ಯೂಸ್ ನೀಡಿದ್ದು, ಈ ಬಾರಿಯ ಐಪಿಎಲ್ ಉದ್ಘಾಟನಾ ಪಂದ್ಯ ಬೆಂಗಳೂರಿನಲ್ಲಿ…
ಬೆಂಗಳೂರು: ಮಗಳಿಗಾಗಿ ಪತ್ನಿ ಹಾಗೂ ನಟಿ ಚೈತ್ರಾರಾಮ್ ಅವರನ್ನು ನಿರ್ಮಾಪಕ ಹರ್ಷವರ್ಧನ್ ಕಿಡ್ನ್ಯಾಪ್ ಮಾಡಿದ ಘಟನೆ ನಡೆದಿದ್ದು, ಪ್ರಕರಣ ಸುಖಾಂತ್ಯವಾಗಿದೆ.…