ಮೈಸೂರು: ಅಂಚೆ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ.
ಹೌದು. 18 ರಿಂದ 25 ವರ್ಷದೊಳಗಿನವರು ವಾರ್ಷಿಕವಾಗಿ 399 ರೂಗಳನ್ನು ಪಾವತಿ ಮಾಡಿದರೆ, 10ಲಕ್ಷ ರೂಪಾಯಿಗಳ ಅಪಘಾತ ವಿಮೆ ಅನುಕೂಲವನ್ನುಪಡೆಯಬಹುದಾಗಿದೆ. ಈ ಮೂಲಕ ಅಂಚೆ ಇಲಾಖೆಯು ಆಕಸ್ಮಿಕ ಅವಘಡಗಳಿಗೆ ತುತ್ತಾಗುವ ಜನಸಾಮಾನ್ಯರಿಗೆ ನೆರವು ನೀಡಲು ಮುಂದಾಗಿದೆ.
ಈ ವಿಮೆಯು ಫಲಾನುಭವಿಗಳು ಆಕಸ್ಮಿಕವಾಗಿ ಅಪಘಾತಕ್ಕೆ ತುತ್ತಾದರೆ ಅಥವಾ ಅಂಚೆ ಇಲಾಖೆಯು ಸೂಚಿಸಿರುವ ಅವಘಡದ ಸನ್ನಿವೇಶಗಳಿಗೆ ಒಳಗಾದರೆ ಆರ್ಥಿಕ ನೆರವು ಸಿಗಲಿದೆ.
ಈ ವಿಮಾ ಯೋಜನೆಯು ಫಲಾನುಭವಿ ಆಕಸ್ಮಿಕವಾಗಿ ಸಾವನ್ನಪ್ಪಿದ್ದರೆ ಅವರ ಕುಟುಂಬಸ್ಥರಿಗೆ ವಿಮೆ ಮೊತ್ತ, ಶಾಶ್ವತ ಅಂಗವೈಕಲ್ಯವಾದರೆ ಆರ್ಥಿಕ ಸಹಾಯ, ಆಸ್ಪತ್ರೆ ಖರ್ಚು ವೆಚ್ಚ ಸಿಗಲಿದೆ. ಅಲ್ಲದೆ, ಮೃತರ ಮಕ್ಕಳ ಶಿಕ್ಷಣಕ್ಕಾಗಿ ನೆರವು ದೊರಕಲಿದೆ. ಈ ಸಂಬಂಧ ಸಮೀಪದ ಅಂಚೆ ಕಚೇರಿಯಲ್ಲಿ ಇಂಡಿಯಾ ಪೋಸ್ಟ್ ಪೇಮೆಂಟ್ ಖಾತೆ ತೆರೆದು ಈ ವಿಮಾ ಯೋಜನೆ ಲಾಭ ಪಡೆದುಕೊಳ್ಳಬಹುದೆಂದು ತಿಳಿಸಲಾಗಿದೆ.
ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…
ನವದೆಹಲಿ: ಬೈಸರನ್ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…
ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ…
ಶ್ರೀರಂಗಪಟ್ಟಣ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ…
ತಿರುವನಂತಪುರಂ: ಕೇರಳದ ತ್ರಿಶೂರ್ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ…