ಜಿಲ್ಲೆಗಳು

ಅಂಚೆ ಇಲಾಖೆಯಿಂದ ಭಾರಿ ಮೊತ್ತದ ಅಪಘಾತ ವಿಮೆ

ಮೈಸೂರು: ಅಂಚೆ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ.
ಹೌದು. 18 ರಿಂದ 25 ವರ್ಷದೊಳಗಿನವರು ವಾರ್ಷಿಕವಾಗಿ 399 ರೂಗಳನ್ನು  ಪಾವತಿ  ಮಾಡಿದರೆ, 10ಲಕ್ಷ ರೂಪಾಯಿಗಳ ಅಪಘಾತ ವಿಮೆ ಅನುಕೂಲವನ್ನುಪಡೆಯಬಹುದಾಗಿದೆ. ಈ ಮೂಲಕ ಅಂಚೆ ಇಲಾಖೆಯು ಆಕಸ್ಮಿಕ ಅವಘಡಗಳಿಗೆ ತುತ್ತಾಗುವ ಜನಸಾಮಾನ್ಯರಿಗೆ ನೆರವು ನೀಡಲು ಮುಂದಾಗಿದೆ.

ಈ ವಿಮೆಯು ಫಲಾನುಭವಿಗಳು ಆಕಸ್ಮಿಕವಾಗಿ ಅಪಘಾತಕ್ಕೆ ತುತ್ತಾದರೆ ಅಥವಾ ಅಂಚೆ ಇಲಾಖೆಯು ಸೂಚಿಸಿರುವ ಅವಘಡದ ಸನ್ನಿವೇಶಗಳಿಗೆ ಒಳಗಾದರೆ ಆರ್ಥಿಕ ನೆರವು ಸಿಗಲಿದೆ.
ಈ ವಿಮಾ ಯೋಜನೆಯು ಫಲಾನುಭವಿ ಆಕಸ್ಮಿಕವಾಗಿ ಸಾವನ್ನಪ್ಪಿದ್ದರೆ ಅವರ ಕುಟುಂಬಸ್ಥರಿಗೆ ವಿಮೆ ಮೊತ್ತ, ಶಾಶ್ವತ ಅಂಗವೈಕಲ್ಯವಾದರೆ ಆರ್ಥಿಕ ಸಹಾಯ, ಆಸ್ಪತ್ರೆ ಖರ್ಚು ವೆಚ್ಚ ಸಿಗಲಿದೆ. ಅಲ್ಲದೆ, ಮೃತರ ಮಕ್ಕಳ ಶಿಕ್ಷಣಕ್ಕಾಗಿ ನೆರವು ದೊರಕಲಿದೆ.  ಈ ಸಂಬಂಧ ಸಮೀಪದ ಅಂಚೆ ಕಚೇರಿಯಲ್ಲಿ ಇಂಡಿಯಾ ಪೋಸ್ಟ್ ಪೇಮೆಂಟ್ ಖಾತೆ ತೆರೆದು ಈ ವಿಮಾ ಯೋಜನೆ ಲಾಭ ಪಡೆದುಕೊಳ್ಳಬಹುದೆಂದು ತಿಳಿಸಲಾಗಿದೆ.

andolanait

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

8 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

8 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

8 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

8 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

9 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago