ಮೈಸೂರು: ಅಂಚೆ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ.
ಹೌದು. 18 ರಿಂದ 25 ವರ್ಷದೊಳಗಿನವರು ವಾರ್ಷಿಕವಾಗಿ 399 ರೂಗಳನ್ನು ಪಾವತಿ ಮಾಡಿದರೆ, 10ಲಕ್ಷ ರೂಪಾಯಿಗಳ ಅಪಘಾತ ವಿಮೆ ಅನುಕೂಲವನ್ನುಪಡೆಯಬಹುದಾಗಿದೆ. ಈ ಮೂಲಕ ಅಂಚೆ ಇಲಾಖೆಯು ಆಕಸ್ಮಿಕ ಅವಘಡಗಳಿಗೆ ತುತ್ತಾಗುವ ಜನಸಾಮಾನ್ಯರಿಗೆ ನೆರವು ನೀಡಲು ಮುಂದಾಗಿದೆ.
ಈ ವಿಮೆಯು ಫಲಾನುಭವಿಗಳು ಆಕಸ್ಮಿಕವಾಗಿ ಅಪಘಾತಕ್ಕೆ ತುತ್ತಾದರೆ ಅಥವಾ ಅಂಚೆ ಇಲಾಖೆಯು ಸೂಚಿಸಿರುವ ಅವಘಡದ ಸನ್ನಿವೇಶಗಳಿಗೆ ಒಳಗಾದರೆ ಆರ್ಥಿಕ ನೆರವು ಸಿಗಲಿದೆ.
ಈ ವಿಮಾ ಯೋಜನೆಯು ಫಲಾನುಭವಿ ಆಕಸ್ಮಿಕವಾಗಿ ಸಾವನ್ನಪ್ಪಿದ್ದರೆ ಅವರ ಕುಟುಂಬಸ್ಥರಿಗೆ ವಿಮೆ ಮೊತ್ತ, ಶಾಶ್ವತ ಅಂಗವೈಕಲ್ಯವಾದರೆ ಆರ್ಥಿಕ ಸಹಾಯ, ಆಸ್ಪತ್ರೆ ಖರ್ಚು ವೆಚ್ಚ ಸಿಗಲಿದೆ. ಅಲ್ಲದೆ, ಮೃತರ ಮಕ್ಕಳ ಶಿಕ್ಷಣಕ್ಕಾಗಿ ನೆರವು ದೊರಕಲಿದೆ. ಈ ಸಂಬಂಧ ಸಮೀಪದ ಅಂಚೆ ಕಚೇರಿಯಲ್ಲಿ ಇಂಡಿಯಾ ಪೋಸ್ಟ್ ಪೇಮೆಂಟ್ ಖಾತೆ ತೆರೆದು ಈ ವಿಮಾ ಯೋಜನೆ ಲಾಭ ಪಡೆದುಕೊಳ್ಳಬಹುದೆಂದು ತಿಳಿಸಲಾಗಿದೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…