ಚಾಮರಾಜನಗರ: ಜಮೀನಿನಲ್ಲಿ ಕಳಚಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ ತುಳಿದು ರೈತ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಂದಕವಾಡಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಾಗರಾಜು(55) ಮೃತಪಟ್ಟ ರೈತ.
ಎಂದಿನಂತೆ ಜಮೀನಿಗೆ ಹೋಗಿದ್ದರು. ಸೋಮವಾರ ರಾತ್ರಿ 7.45ಗಂಟೆಯಾದರೂ ಮನೆಗೆ ವಾಪಸ್ಸಾಗಿರಲಿಲ್ಲ. ಅನುಮಾನಗೊಂಡು ಅವರ ಅಳಿಯ ಜಮೀನಿಗೆ ಹೋಗಿ ನೋಡಿದಾಗ ರಾತ್ರಿ 8.30ರಲ್ಲಿ ಸತ್ತಿರುವ ವಿಚಾರ ಗೊತ್ತಾಗಿದೆ.
ಜಮೀನಿನ ಮೂಲಕ ಹಾದು ಹೋಗಿರುವ ಸೆಕೆಂಡರಿ ಲೈನ್ ಕಳಚಿ ಬಿದ್ದಿದ್ದು ಅದನ್ನು ನೋಡದೆ ಕಾಲಿಟ್ಟು ಸಾವನ್ನಪ್ಪಿದ್ದಾರೆ.ಘಟನಾ ಸ್ಥಳಕ್ಕೆ ಸೆಸ್ಕ್ ಎಇಇ ಶಶಿಧರ್, ಶಾಖಾಧಿಕಾರಿ ಮರಿಸ್ವಾಮಿ ಮೊದಲಾದವರು ಭೇಟಿ ನೀಡಿದ್ದರು. ಇಲಾಖೆ ನಿಯಮಾನುಸಾರ ಮೃತರ ಕುಟುಂಬಕ್ಕೆ 5ಲಕ್ಷ ರೂ.ಪರಿಹಾರ ನೀಡಲು ಅವಕಾಶವಿದ್ದು ಇಷ್ಟರಲ್ಲಿಯೇ ನೀಡುವುದಾಗಿ ಹಿರಿಯ ಅಧಿಕಾರಿಯೊಬ್ಬರು ಪತ್ರಿಕೆಗೆ ತಿಳಿಸಿದರು.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…