ಜಿಲ್ಲೆಗಳು

ವಿದ್ಯುತ್ ತಂತಿ ತುಳಿದು ರೈತ ಸಾವು

ಚಾಮರಾಜನಗರ: ಜಮೀನಿನಲ್ಲಿ ಕಳಚಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ ತುಳಿದು ರೈತ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಂದಕವಾಡಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನಾಗರಾಜು(55) ಮೃತಪಟ್ಟ ರೈತ.
ಎಂದಿನಂತೆ ಜಮೀನಿಗೆ ಹೋಗಿದ್ದರು. ಸೋಮವಾರ ರಾತ್ರಿ 7.45ಗಂಟೆಯಾದರೂ ಮನೆಗೆ ವಾಪಸ್ಸಾಗಿರಲಿಲ್ಲ. ಅನುಮಾನಗೊಂಡು ಅವರ ಅಳಿಯ ಜಮೀನಿಗೆ ಹೋಗಿ ನೋಡಿದಾಗ ರಾತ್ರಿ 8.30ರಲ್ಲಿ ಸತ್ತಿರುವ ವಿಚಾರ ಗೊತ್ತಾಗಿದೆ.
ಜಮೀನಿನ ಮೂಲಕ ಹಾದು ಹೋಗಿರುವ ಸೆಕೆಂಡರಿ ಲೈನ್ ಕಳಚಿ ಬಿದ್ದಿದ್ದು ಅದನ್ನು ನೋಡದೆ ಕಾಲಿಟ್ಟು ಸಾವನ್ನಪ್ಪಿದ್ದಾರೆ.ಘಟನಾ ಸ್ಥಳಕ್ಕೆ ಸೆಸ್ಕ್ ಎಇಇ ಶಶಿಧರ್, ಶಾಖಾಧಿಕಾರಿ ಮರಿಸ್ವಾಮಿ ಮೊದಲಾದವರು ಭೇಟಿ ನೀಡಿದ್ದರು. ಇಲಾಖೆ ನಿಯಮಾನುಸಾರ ಮೃತರ ಕುಟುಂಬಕ್ಕೆ 5ಲಕ್ಷ ರೂ.ಪರಿಹಾರ ನೀಡಲು ಅವಕಾಶವಿದ್ದು ಇಷ್ಟರಲ್ಲಿಯೇ ನೀಡುವುದಾಗಿ ಹಿರಿಯ ಅಧಿಕಾರಿಯೊಬ್ಬರು ಪತ್ರಿಕೆಗೆ ತಿಳಿಸಿದರು.

andolanait

Recent Posts

ಸೈದ್ಧಾಂತಿಕ ಬದ್ಧತೆ; ಪಕ್ಷದ ಸಿದ್ಧಾಂತದಲ್ಲಿ ರಾಜಿ ಸಲ್ಲದು ; ಡಿಕೆಶಿಗೆ ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…

8 hours ago

ಹೊಸ ಸಚಿವ ಸಂಪುಟ ರಚನೆ ಬಗ್ಗೆ ಖರ್ಗೆ ಹೇಳಿದಿಷ್ಟು…

ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…

11 hours ago

ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ನಾಯಕರ ನಡುವೆ ಪೈಪೋಟಿ

ಬೆಂಗಳೂರು : ಡಿ.ಕೆ.ಶಿವಕುಮಾರ್‌ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…

14 hours ago

ಶಾಲೆ ಶುರುವಾಗಿದೆ; ಮನಸು ಯಾಕೋ ಹೂ ಬಿಟ್ಟಿದೆ…

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…

17 hours ago

ಭಾನುವಾರದ ಹಾಡುಪಾಡು | ಶಾಲೆಯೆಂಬ ಕಟ್ಟಡಗಳಿಗೆ ಜೀವ ಬರುವ ಹೊತ್ತು…..

ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…

17 hours ago

ಭಾನುವಾರದ ಹಾಡುಪಾಡು | ಜೂನ್ ಬಂತು ಎಂದರೆ ಶಿಕ್ಷಕರಿಗೆ ಸುಗ್ಗಿ ಕಾಲ

ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…

17 hours ago