ಚಾಮರಾಜನಗರ: ಜಮೀನಿನಲ್ಲಿ ಕಳಚಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ ತುಳಿದು ರೈತ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಂದಕವಾಡಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಾಗರಾಜು(55) ಮೃತಪಟ್ಟ ರೈತ.
ಎಂದಿನಂತೆ ಜಮೀನಿಗೆ ಹೋಗಿದ್ದರು. ಸೋಮವಾರ ರಾತ್ರಿ 7.45ಗಂಟೆಯಾದರೂ ಮನೆಗೆ ವಾಪಸ್ಸಾಗಿರಲಿಲ್ಲ. ಅನುಮಾನಗೊಂಡು ಅವರ ಅಳಿಯ ಜಮೀನಿಗೆ ಹೋಗಿ ನೋಡಿದಾಗ ರಾತ್ರಿ 8.30ರಲ್ಲಿ ಸತ್ತಿರುವ ವಿಚಾರ ಗೊತ್ತಾಗಿದೆ.
ಜಮೀನಿನ ಮೂಲಕ ಹಾದು ಹೋಗಿರುವ ಸೆಕೆಂಡರಿ ಲೈನ್ ಕಳಚಿ ಬಿದ್ದಿದ್ದು ಅದನ್ನು ನೋಡದೆ ಕಾಲಿಟ್ಟು ಸಾವನ್ನಪ್ಪಿದ್ದಾರೆ.ಘಟನಾ ಸ್ಥಳಕ್ಕೆ ಸೆಸ್ಕ್ ಎಇಇ ಶಶಿಧರ್, ಶಾಖಾಧಿಕಾರಿ ಮರಿಸ್ವಾಮಿ ಮೊದಲಾದವರು ಭೇಟಿ ನೀಡಿದ್ದರು. ಇಲಾಖೆ ನಿಯಮಾನುಸಾರ ಮೃತರ ಕುಟುಂಬಕ್ಕೆ 5ಲಕ್ಷ ರೂ.ಪರಿಹಾರ ನೀಡಲು ಅವಕಾಶವಿದ್ದು ಇಷ್ಟರಲ್ಲಿಯೇ ನೀಡುವುದಾಗಿ ಹಿರಿಯ ಅಧಿಕಾರಿಯೊಬ್ಬರು ಪತ್ರಿಕೆಗೆ ತಿಳಿಸಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…