ಜಿಲ್ಲೆಗಳು

ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಜನಸಂಪರ್ಕ ಸಭೆ ಸದ್ಬಳಕೆ ಮಾಡಿಕೊಳ್ಳಿ: AEE ಶಂಕರ್

ಹನೂರು : ಟಿ. ಸಿ ಸೇರಿದಂತೆ ಇನ್ನಿತರ ಸೆಸ್ಕಾಂ ಇಲಾಖೆ ಸಂಬಂಧಿಸಿದ ಸಮಸ್ಯೆಗಳಿದ್ದರೆ ರೈತರು ಮಾಹಿತಿ ನೀಡಿ ಸಮಸ್ಯೆ ಇತ್ಯರ್ಥ ಪಡಿಸಿಕೊಳ್ಳಬೇಕು ಎಂದು ಹನೂರು ಸೆಸ್ಕಾಂ ಎಇಇ ಶಂಕರ್ ತಿಳಿಸಿದರು.

ಪಟ್ಟಣದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜನ ಸಂಪರ್ಕ ಸಭೆಯಲ್ಲಿ ಅವರು ಮಾತನಾಡಿದರು.

ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬೋರ್ (ಬಾವಿ) ವಿದ್ಯುತ್ ಬಿಲ್ ಪಾವತಿ ವಿಳಂಬ ಆಗುತ್ತಿದೆ ದುರ್ಬಳಕೆ ಕಂಡು ಬಂದಲ್ಲಿ ಕಾನೂನು ಕ್ರಮ ಜರುಗಿಸಬೇಕಾಗುತ್ತದ. 105 ಟಿಸಿ ಅಳವಡಿಸಲಾಗಿದ್ದು ಕಾಡಂಚಿನ ಗ್ರಾಮಗಳಲ್ಲಿ ಟಿಸಿ ಸಮಸ್ಯೆ ಇರುವುದು ಗಮನಕ್ಕೆ ಬಂದಿದೆ. ಈಗಾಗಲೇ ಅನುದಾನ ಬಿಡುಗಡೆ ಆಗಿದ್ದು ಮುಂದಿನ ದಿನಗಳಲ್ಲಿ ಎಲ್ಲವೂ ಸರಿಯಾಗಲಿದೆ. ರೈತರ ದೂರು ಆಲಿಸಿ ಅದನ್ನು ದಾಖಲು ಮಾಡಿಕೊಳ್ಳಲಾಗುತ್ತಿದ್ದು ಅದರಂತೆಯೇ ಸೂಕ್ತ ಸೂಕ್ತ ಕ್ರಮವಹಿಸಲಾಗುವುದು ಎಂದು ಹೇಳಿದರು

ಹನೂರು ತಾಲೂಕಿನ ವಿವಿಧ ಕಡೆಗಳಲ್ಲಿ ವಿದ್ಯುತ್ ಪರಿವರ್ತಕ ಸಮಸ್ಯೆ ಇದೆ. ಇದನ್ನು ಸರಿಪಡಿಸಲು ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ. ಹೆಲ್ಪ್ ಲೈನ್ ಸಂಖ್ಯೆಗೆ ಕರೆ ಮಾಡಿದರೆ ಕರೆ ಸ್ವೀಕರವಾಗುತ್ತಿಲ್ಲ . 63ಕೆವಿ ವಿದ್ಯುತ್ ಸಮಸ್ಯೆ ಟಿಸಿ ಬಳಿ ಗಿಡಗಂಟಿ ತೆರವುಗೊಳಿಸಬೇಕು ಎಂದು ರೈತ ಮುಖಂಡರಾದ ಬೊಮ್ಮೇಗೌಡ, ಕೆ.ವಿ.ಸಿದ್ದಪ್ಪ, ಮಣಿಗಾರ್ ಪ್ರಸಾದ್ ಒತ್ತಾಯಿಸಿದರು.

ಸಭೆಯಲ್ಲಿ ಸೆಸ್ಕಾಂ ಇಲಾಖೆಯ ಸಹಾಯಕ ಇಂಜಿನಿಯರ್ ರಂಗಸ್ವಾಮಿ, ರಾಜು ಮತ್ತಿತರಿದ್ದರು.

andolanait

Recent Posts

ಮಾಲ್ದಾರೆ ಅರಣ್ಯ ಮಾರ್ಗದಲ್ಲಿ ಪ್ರವಾಸಿಗರಿಗೆ ಹುಲಿ ದರ್ಶನ

ಮಡಿಕೇರಿ: ಸಿದ್ದಾಪುರದಿಂದ ಮೈಸೂರಿಗೆ ಸಂಪರ್ಕ ಕಲ್ಪಿಸುವ ಮಾಲ್ದಾರೆ ಗ್ರಾಮ ಸಮೀಪದ ಕುಶಾಲನಗರ ಹಾಗೂ ದೇವಮತಿ ಅರಣ್ಯ ಪ್ರದೇಶದಲ್ಲಿ ಪ್ರವಾಸಿಗರಿಗೆ ಹುಲಿಯೊಂದು…

5 mins ago

ಬಿಜೆಪಿಗೆ ಮರಳುವ ಚಿಂತನೆ ಮಾಡಿಲ್ಲ: ಎಸ್.ಟಿ.ಸೋಮಶೇಖರ್‌

ಬೆಂಗಳೂರು: ನಾನು ಬಿಜೆಪಿಗೆ ಮರಳುವ ಚಿಂತನೆ ಮಾಡಿಲ್ಲ. ಕಾಂಗ್ರೆಸ್‌ಗೆ ಹೋಗುತ್ತೇನೆ ಎಂದು ಶಾಸಕ ಎಸ್.ಟಿ.ಸೋಮಶೇಖರ್‌ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

58 mins ago

ಬಿಹಾರದ ನಳಂದಾ ದೇಗುಲದಲ್ಲಿ ಕಾಲ್ತುಳಿತ: 8 ಮಂದಿ ಸಾವು

ನಳಂದಾ: ಬಿಹಾರದ ನಳಂದಾ ಜಿಲ್ಲೆಯ ಶೀತಲಾ ದೇವಸ್ಥಾನದ ಧಾರ್ಮಿಕ ಸಮಾರಂಭವೊಂದರಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಂದಿ ಮಹಿಳೆಯರು ಸಾವನ್ನಪ್ಪಿದ್ದಾರೆ.…

1 hour ago

ಕೌಟುಂಬಿಕ ಕಲಹ: ಬೆಂಗಳೂರಿನಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆ

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊತ್ತನೂರು ಪೊಲೀಸ್‌ ಠಾಣೆ ವ್ಯಾಪ್ತಿಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ…

2 hours ago

ಉಜ್ವಲ ಹೋಯ್ತು, ಈಗ ಸೌದೆ ಯೋಜನೆ ಸ್ಟಾರ್ಟ್‌: ಡಿಸಿಎಂ ಡಿ.ಕೆ.ಶಿವಕುಮಾರ್‌ ವಾಗ್ದಾಳಿ

ಬೆಂಗಳೂರು: ಸೌದೆ ಮುಕ್ತ ಭಾರತ ಮಾಡ್ತೀವಿ ಎಂದು ಹೇಳಿ ಎಲ್ಲಾ ಕಡೆ ಗ್ಯಾಸ್‌ ತಂದರು. ಹಳ್ಳಿಗಳಲ್ಲೂ ಗ್ಯಾಸ್‌ ಬಂತು. ಈಗ…

2 hours ago

ಇರಾನ್‌ನ ಇಸ್ಫಹಾನ್‌ನಲ್ಲಿ ಸರಣಿ ಸ್ಫೋಟ

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ತನ್ನ ಪ್ರತೀಕಾರ ಮುಂದುವರಿಸಿದೆ. ಇರಾನ್‌ನ ಇಸ್ಪಹಾನ್‌ ನಗರದಲ್ಲಿರುವ ಮಿಲಿಟರಿ ಕೇಂದ್ರದ ಮೇಲೆ…

2 hours ago