ಜಿಲ್ಲೆಗಳು

ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಜನಸಂಪರ್ಕ ಸಭೆ ಸದ್ಬಳಕೆ ಮಾಡಿಕೊಳ್ಳಿ: AEE ಶಂಕರ್

ಹನೂರು : ಟಿ. ಸಿ ಸೇರಿದಂತೆ ಇನ್ನಿತರ ಸೆಸ್ಕಾಂ ಇಲಾಖೆ ಸಂಬಂಧಿಸಿದ ಸಮಸ್ಯೆಗಳಿದ್ದರೆ ರೈತರು ಮಾಹಿತಿ ನೀಡಿ ಸಮಸ್ಯೆ ಇತ್ಯರ್ಥ ಪಡಿಸಿಕೊಳ್ಳಬೇಕು ಎಂದು ಹನೂರು ಸೆಸ್ಕಾಂ ಎಇಇ ಶಂಕರ್ ತಿಳಿಸಿದರು.

ಪಟ್ಟಣದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜನ ಸಂಪರ್ಕ ಸಭೆಯಲ್ಲಿ ಅವರು ಮಾತನಾಡಿದರು.

ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬೋರ್ (ಬಾವಿ) ವಿದ್ಯುತ್ ಬಿಲ್ ಪಾವತಿ ವಿಳಂಬ ಆಗುತ್ತಿದೆ ದುರ್ಬಳಕೆ ಕಂಡು ಬಂದಲ್ಲಿ ಕಾನೂನು ಕ್ರಮ ಜರುಗಿಸಬೇಕಾಗುತ್ತದ. 105 ಟಿಸಿ ಅಳವಡಿಸಲಾಗಿದ್ದು ಕಾಡಂಚಿನ ಗ್ರಾಮಗಳಲ್ಲಿ ಟಿಸಿ ಸಮಸ್ಯೆ ಇರುವುದು ಗಮನಕ್ಕೆ ಬಂದಿದೆ. ಈಗಾಗಲೇ ಅನುದಾನ ಬಿಡುಗಡೆ ಆಗಿದ್ದು ಮುಂದಿನ ದಿನಗಳಲ್ಲಿ ಎಲ್ಲವೂ ಸರಿಯಾಗಲಿದೆ. ರೈತರ ದೂರು ಆಲಿಸಿ ಅದನ್ನು ದಾಖಲು ಮಾಡಿಕೊಳ್ಳಲಾಗುತ್ತಿದ್ದು ಅದರಂತೆಯೇ ಸೂಕ್ತ ಸೂಕ್ತ ಕ್ರಮವಹಿಸಲಾಗುವುದು ಎಂದು ಹೇಳಿದರು

ಹನೂರು ತಾಲೂಕಿನ ವಿವಿಧ ಕಡೆಗಳಲ್ಲಿ ವಿದ್ಯುತ್ ಪರಿವರ್ತಕ ಸಮಸ್ಯೆ ಇದೆ. ಇದನ್ನು ಸರಿಪಡಿಸಲು ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ. ಹೆಲ್ಪ್ ಲೈನ್ ಸಂಖ್ಯೆಗೆ ಕರೆ ಮಾಡಿದರೆ ಕರೆ ಸ್ವೀಕರವಾಗುತ್ತಿಲ್ಲ . 63ಕೆವಿ ವಿದ್ಯುತ್ ಸಮಸ್ಯೆ ಟಿಸಿ ಬಳಿ ಗಿಡಗಂಟಿ ತೆರವುಗೊಳಿಸಬೇಕು ಎಂದು ರೈತ ಮುಖಂಡರಾದ ಬೊಮ್ಮೇಗೌಡ, ಕೆ.ವಿ.ಸಿದ್ದಪ್ಪ, ಮಣಿಗಾರ್ ಪ್ರಸಾದ್ ಒತ್ತಾಯಿಸಿದರು.

ಸಭೆಯಲ್ಲಿ ಸೆಸ್ಕಾಂ ಇಲಾಖೆಯ ಸಹಾಯಕ ಇಂಜಿನಿಯರ್ ರಂಗಸ್ವಾಮಿ, ರಾಜು ಮತ್ತಿತರಿದ್ದರು.

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

1 hour ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

3 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

4 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

6 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

7 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

7 hours ago