ಜಿಲ್ಲೆಗಳು

ಸಮರ್ಪಕ ವಿದ್ಯುತ್ ಪೂರೈಸುವಂತೆ ಒತ್ತಾಯಿಸಿ ಗ್ರಾಮಸ್ಥರ ಪ್ರತಿಭಟನೆ

ಹನೂರು: ತಾಲೂಕಿನ ಮಾಲಿಂಗನತ್ತ ಗ್ರಾಮಕ್ಕೆ ನಿರಂತರ ಜ್ಯೋತಿ ಯೋಜನೆಯಡಿ ಸಮರ್ಪಕ ವಿದ್ಯುತ್ ಸರಬರಾಜು ಮಾಡುವಂತೆ ಗ್ರಾಮಸ್ಥರು ಸೋಮವಾರ ಬೆಳಗ್ಗೆ ಪ್ರತಿಭಟನೆ ನಡೆಸಿರುವ ಘಟನೆ ಜರುಗಿದೆ.

ಹನೂರು ತಾಲೂಕಿನ ಲೊಕ್ಕನಹಳ್ಳಿ ಹೋಬಳಿಯ ಪಿಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಮಾಲಿಂಗನತ್ತ ಗ್ರಾಮದಲ್ಲಿ ಸುಮಾರು 60 ಕುಟುಂಬಗಳಿದ್ದು 250 ಕ್ಕೂ ಹೆಚ್ಚು  ಜನಸಂಖ್ಯೆಯನ್ನು ಹೊಂದಿದೆ.

ಲೊಕ್ಕನಹಳ್ಳಿ ಹೋಬಳಿಯ ಎಲ್ಲಾ ಗ್ರಾಮಗಳಿಗೆ ನಿರಂತರ ಜ್ಯೋತಿ ಯೋಜನೆಯಡಿ  ನಿರಂತರ ವಿದ್ಯುತ್ ನೀಡಲು  ಕಾಮಗಾರಿ ಕೈಗೊಳ್ಳಲಾಗಿದೆ. ಆದರೆ ಪಿಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವನಗುಡಿ, ನಲ್ಲಿಮರದ ದೊಡ್ಡಿ, ಹಾವಿನ ಮೂಲೆ ಸೇರಿದಂತೆ ಮಾಲಿಂಗನತ್ತ ಗ್ರಾಮದ ನಿವಾಸಿಗಳು ನಿರಂತರ ವಿದ್ಯುತ್ ಯೋಜನೆಯಿಂದ ವಂಚಿತರಾಗಿದ್ದಾರೆ. ಈ ಗ್ರಾಮಗಳ ಮುಖಾಂತರವೇ ಇತರೆ ಗ್ರಾಮಗಳಿಗೆ ನಿರಂತರ ಯೋಜನೆ ಯಡಿ  ವಿದ್ಯುತ್ ಪೂರೈಕೆಯಾಗುತ್ತಿದೆ ಆದರೆ ಈ ಗ್ರಾಮಗಳಿಗೆ ಸಂಪರ್ಕ ನೀಡದೆ ಮುಂದಿನ ಗ್ರಾಮಗಳಿಗೆ ವಿದ್ಯುತ್ ನೀಡಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ .

ಗ್ರಾಮದ ನಿವಾಸಿ ಸೆಂದಿಲ್  ಕುಮಾರ್ ಮಾತನಾಡಿ ನಮ್ಮ ಗ್ರಾಮಕ್ಕೆ ನಿರಂತರ ಜ್ಯೋತಿ ಯೋಜನೆಯಡಿ ವಿದ್ಯುತ್ ಸಮರ್ಪಕವಾಗಿ ಪೂರೈಕೆ ಮಾಡದೇ ಇರುವುದರಿಂದ ವಿದ್ಯಾರ್ಥಿಗಳು ಸೇರಿದಂತೆ ಮಹಿಳೆಯರಿಗೆ ತುಂಬಾ ತೊಂದರೆಯಾಗಿದೆ. ದಿನದ 24 ಗಂಟೆಯಲ್ಲಿ ಕೇವಲ ಏಳು ಗಂಟೆ ಮಾತ್ರ ವಿದ್ಯುತ್ ಪೂರೈಕೆ ಮಾಡುತ್ತಿದ್ದಾರೆ. ಗಾಳಿ ಮಳೆ ಹಾಗೂ ಇನ್ನಿತರ ತುರ್ತು ಸಂದರ್ಭಗಳಲ್ಲಿ ವಿದ್ಯುತ್ ಪೂರೈಕೆ ಯಾಗದೆ ವಿದ್ಯಾರ್ಥಿಗಳ ಓದಿಗೆ ತೀವ್ರ ತೊಂದರೆ ಆಗಿದೆ. ಕೆಲವೊಮ್ಮೆ ಕುಡಿಯುವ ನೀರಿಗೂ ಅಹಂಕಾರ ಉಂಟಾಗಿದೆ ಸಂಬಂಧ ಪಟ್ಟ ಸೆಸ್ಕಾಂ ಹಿರಿಯ ಅಧಿಕಾರಿಗಳು ಇತ್ತ ಗಮನ ಹರಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ವಿದ್ಯಾರ್ಥಿ ಜಡೆ ಸ್ವಾಮಿ ಮಾತನಾಡಿ ಗ್ರಾಮದಲ್ಲಿ ವಿದ್ಯುತ್ ಸಮರ್ಪಕವಾಗಿ ಪೂರೈಕೆ ಆಗುತ್ತಿಲ್ಲ ಇದರಿಂದ ನಮ್ಮ ವಿದ್ಯಾಭ್ಯಾಸಕ್ಕೆ  ತೊಂದರೆ ಆಗಿದೆ ದಯವಿಟ್ಟು ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಲೋಕನಹಳ್ಳಿ ಹೋಬಳಿಯ ಎಲ್ಲಾ ಗ್ರಾಮಗಳಿಗೆ ನಿರಂತರ ವಿದ್ಯುತ್ ಯೋಜನೆ ಯಡಿ ವಿದ್ಯುತ್ ಪೂರೈಸಲು ಡಿಪಿಆರ್ ಸಿದ್ದಪಡಿಸಿ ಅನುಮೋದನೆಗಾಗಿ ಕಳುಹಿಸಲಾಗಿದೆ. ಟೆಂಡರ್ ಮುಗಿದ ನಂತರ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು. ಎಂದು ಸೆಸ್ಕಾಂ ಎಇಇ ಶಂಕರ್ ಆಂದೋಲನ ಟಿವಿಗೆ ಮಾಹಿತಿ ನೀಡಿದ್ದಾರೆ.

 

andolanait

Recent Posts

ಓದುಗರ ಪತ್ರ: ಬಜೆಟ್ ಪರಿಸರ ಸಂರಕ್ಷಣೆಗೆ ಒತ್ತು ನೀಡಲಿ

ಬಜೆಟ್ ಪೂರ್ವ ಸಭೆಯಲ್ಲಿ ಪ್ರಸ್ತಾಪಗೊಂಡ ಹಸಿರು ಗೋಡೆ ಯೋಜನೆ ರಾಜ್ಯದ ಪರಿಸರ ರಕ್ಷಣೆಗೆ ಆಪದ್ಬಾಂಧವನಂತಿದೆ. ಉತ್ತರ ಕರ್ನಾಟಕದಲ್ಲಿ ಮರುಭೂಮೀಕರಣ ತಡೆಗಟ್ಟಲು…

41 mins ago

ಓದುಗರ ಪತ್ರ: ರಾಜರ ಯೋಜನೆ ಮಾದರಿಯಲ್ಲಿ ಗ್ರೇಟರ್ ಮೈಸೂರು ನಿರ್ಮಿಸಿ

ದೇಶಕ್ಕೇ ಮಾದರಿಯಾಗಿರುವ ಮೈಸೂರನ್ನು ನಿರ್ಮಿಸಿದ ಮೈಸೂರು ಸಂಸ್ಥಾನದ ಮಹಾರಾಜರುಗಳು ಅನುಸರಿಸಿದ ಯೋಜನೆಗಳ ಮಾದರಿಯಲ್ಲೇ, ಗ್ರೇಟರ್ ಮೈಸೂರನ್ನು ನಿರ್ಮಾಣ ಮಾಡಬೇಕು ಎಂದು…

43 mins ago

ಓದುಗರ ಪತ್ರ: ಸಿಗ್ನಲ್‌ನಲ್ಲಿ ವಾಹನಗಳ ಎಂಜಿನ್ ಆಫ್ ಮಾಡಿ

ಪ್ರತಿನಿತ್ಯ ನಗರದ ವಿವಿಧ ವೃತ್ತಗಳ ಸಿಗ್ನಲ್ ಬಳಿ ಕಾಯುವ ವಾಹನ ಸವಾರರು ೧೦೦ ಸೆಕೆಂಡಿಗಿಂತಲೂ ಹೆಚ್ಚು ಕಾಲ ನಿಂತರೆ ನಮ್ಮ…

46 mins ago

ಓದುಗರ ಪತ್ರ: ಹುಂಡಿ ಹಣ ಸಮಾಜ ಸೇವಾ ಕಾರ್ಯಕ್ಕೆ ಬಳಕೆಯಾಗಲಿ

ಮೈಸೂರು ನಗರದ ಸುತ್ತಮುತ್ತ ಇರುವ ವಿವಿಧ ದೇವಾಲಯಗಳನ್ನು ನಿರ್ವಹಿಸುತ್ತಿರುವ ಟ್ರಸ್ಟ್‌ಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಹುಂಡಿಯ ಹಣ ಹಾಗೂ ಭಕ್ತರು ನೀಡುವ…

48 mins ago

ರಿಪೇರಿಯಾಗದ ಆಟೋ; ಬೀದಿಗೆ ಬೀಳುತ್ತಿದೆ ಕಸ

ಕೆಟ್ಟು ೨-೩ ತಿಂಗಳಾದರೂ ದುರಸ್ತಿ ಭಾಗ್ಯವಿಲ್ಲ; ಬೇಗ ರಿಪೇರಿ ಮಾಡಿಸಲು ನಾಗರಿಕರ ಆಗ್ರಹ  ಚಾಮರಾಜನಗರ: ನಗರದಲ್ಲಿ ನೈರ್ಮಲ್ಯ ಕಾಪಾಡಲು ನಗರಸಭೆಯು…

52 mins ago

ಮೈವಿವಿ ಪ್ರಸಾರಾಂಗ ಪುಸ್ತಕ ಮಾರಾಟಕ್ಕೆ ಉತ್ತಮ ಸ್ಪಂದನೆ

ಚಿರಂಜೀವಿ ಸಿ. ಹುಲ್ಲಹಳ್ಳಿ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗವು ಆಯೋಜಿಸಿರುವ ವಿಶೇಷ ರಿಯಾಯಿತಿ ಪುಸ್ತಕ ಮಾರಾಟಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

55 mins ago