ಜಿಲ್ಲೆಗಳು

ಪವರ್ ಸ್ಟಾರ್ ಗೆ ಅಪಮಾನ ಖಂಡಿಸಿ ಠಾಣೆಗೆ ದೂರು

ಗುಂಡ್ಲುಪೇಟೆ : ಕನ್ನಡ ಚಿತ್ರರಂಗದ ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಅಪಮಾನ ಮಾಡಿರುವುದನ್ನು ಖಂಡಿಸಿ ಆರೋಪಿಯನ್ನು ಕೂಡಲೇ ಗಡಿಪಾರು ಮಾಡುವಂತೆ ಒತ್ತಾಯಿಸಿ ತಾಲೂಕಿನ ಬೇಗೂರು ಗ್ರಾಮದ ಆರ್ಯ ಈಡಿಗ ಜನಾಂಗ ಹಾಗೂ ಕರ್ನಾಟಕ ರಕ್ಷಣಾ ಕನ್ನಡ ಕಹಳೆ ಸಂಘಟನೆ ಮತ್ತು ಅಪ್ಪು ಅಭಿಮಾನಿಗಳ ಬಳಗ ಬೇಗೂರು ಇವರುಗಳ ವತಿಯಿಂದ ದೂರು ಸಲ್ಲಿಸಲಾಯಿತು.

 

ಆರೋಪಿಯದ ಮೈಸೂರಿನ ಲಿಂಗದೇವರು ಕೊಪ್ಪಲು ಗ್ರಾಮದ ಮಲ್ಲಿಕಾರ್ಜುನ ಅಲಿಯಾಸ್ ಪುಟ್ಟು ಎಂಬಾತನು ಸಾಮಾಜಿಕ ಜಾಲತಾಣದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಕುರಿತು ಅವಮಾನಕಾರಿ ಹೇಳಿಕೆ ನೀಡಿರುವುದು ಕನ್ನಡ ಕುಲಕ್ಕೆ ಅಪಮಾನ ಮಾಡಿದಂತಾಗಿದೆ, ಇದು ನಮ್ಮ ಹಾಗೂ ಅಪ್ಪು ಅಭಿಮಾನಿಗಳ ಮನಸ್ಸಿಗೆ ಬಹಳ ನೋವುಂಟು ಮಾಡಿರುವ ಹಿನ್ನೆಲೆ ಕೂಡಲೇ ಆತನನ್ನು ಬಂಧಿಸಿ ಗಡಿಪಾರು ಮಾಡಬೇಕೆಂದು ಆಗ್ರಹಿಸುವ ಮೂಲಕ ಠಾಣೆಯ ಎಎಸ್ಐ ಜಯರಾಮ್ ಅವರಿಗೆ ಲಿಖಿತ ರೂಪದಲ್ಲಿ ದೂರು ನೀಡಿದರು.

 

ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ಕನ್ನಡ ಕಹಳೆ ಸಂಘಟನೆ ಜಿಲ್ಲಾಧ್ಯಕ್ಷ ಗೋಪಿ ಬೇಗೂರು ಹೋಬಳಿ ಆರ್ಯ ಈಡಿಗ ಸಮುದಾಯದ ಯಜಮಾನರುಗಳಾದ  ಸುರೇಶ್, ಲೋಕೇಶ್,ಸೋಮಹಳ್ಳಿ ಮಂಜು, ಪರ್ಮಿ,ಸೀನ, ಮಣಿ , ಶಕೀ , ವಿಶು,ವಾಸು, ಯೋಗೇಶ್,ಆನಂದ್,ಮುಂತಾದವರು ಹಾಜರಿದ್ದರು

andolanait

Recent Posts

ಓದುಗರ ಪತ್ರ: ಮೈಸೂರಿನಲ್ಲಿ ಮಳೆ ನೀರು ಕೊಯ್ಲು ಥೀಮ್ ಪಾರ್ಕ್ ಕನ್ನಡಿಯೊಳಗಿನ ಗಂಟು

ಮೈಸೂರು ನಗರದಲ್ಲಿ ಮಳೆನೀರು ಕೊಯ್ಲು ಥೀಮ್ ಪಾರ್ಕ್ ಸ್ಥಾಪಿಸುವ ಹಿಂದಿನ ಹಾಗೂ ಈಗಿನ ಸರ್ಕಾರಗಳ ಭರವಸೆ ಇನ್ನೂ ಕನ್ನಡಿಯೊಳಗಿನ ಗಂಟಾಗಿಯೇ…

39 mins ago

ಓದುಗರ ಪತ್ರ: ಅಂಕೇಗೌಡರಿಗೆ ಸಿಕ್ಕ ಪದ್ಮಶ್ರೀ ಸಾರಸ್ವತ ಲೋಕಕ್ಕೆ ಸಂದ ಗೌರವ

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಹರಳಹಳ್ಳಿಯ ಪುಸ್ತಕ ಪ್ರೇಮಿ ೭೮ ವರ್ಷದ ಅಂಕೇಗೌಡ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿರುವುದು ಕನ್ನಡ…

41 mins ago

ಓದುಗರ ಪತ್ರ: ರಾಮಕೃಷ್ಣನಗರಕ್ಕೆ ಮತ್ತಷ್ಟು ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ರಾಮಕೃಷ್ಣನಗರ ಮಾರ್ಗಕ್ಕೆ ಪ್ರತಿದಿನ ನಗರ ಸಾರಿಗೆ ಬಸ್ಸುಗಳು ಸಂಚರಿಸುತ್ತವೆ. ಆದರೆ ಈ ಮಾರ್ಗದಲ್ಲಿ ಓಡಾಡುವ ಬಸ್ಸುಗಳ ಸಂಖ್ಯೆ ಮಾತ್ರ…

43 mins ago

ವಿಜೃಂಭಣೆಯಿಂದ ನಡೆದ ಸಂತೆ ಮಾಸ್ತಮ್ಮನವರ ಜಾತ್ರೆ

ಸರಗೂರು: ಪಟ್ಟಣದಲ್ಲಿ ಗ್ರಾಮದೇವತೆ ಶ್ರೀ ಸಂತೆ ಮಾಸ್ತಮ್ಮನವರ ೩೧ನೇ ಜಾತ್ರಾ ಮಹೋತ್ಸವ ಹಾಗೂ ಕೊಂಡೋತ್ಸವ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು. ಜಾತ್ರಾ…

45 mins ago

ಕಬಿನಿ ಹಿನ್ನೀರಿನ ರೆಸಾರ್ಟ್‌ಗಳ ದಾಖಲಾತಿ ಪರಿಶೀಲನೆ

ರೆಸಾರ್ಟ್‌ಗಳು, ಹೋಂಸ್ಟೇಗಳಿಗೆ ಅಕ್ರಮ ರೆಸಾರ್ಟ್‌ಗಳ ತನಿಖಾ ಸಮಿತಿಯವರ ದಿಢೀರ್ ಭೇಟಿ ಹೆಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಹಿನ್ನೀರಿನ ನಾಗರಹೊಳೆ ಮತ್ತು ಬಂಡೀಪುರ…

49 mins ago

ಬೀದಿ ನಾಯಿ ಪುನರ್ವಸತಿ ಕೇಂದ್ರ ಸ್ಥಾಪನೆಗೆ ವಿರೋಧ

ಕೆ.ಬಿ.ಶಂಶುದ್ಧೀನ್ ಗ್ರಾಮಕ್ಕೆ ಹುಲಿ, ಚಿರತೆಗಳು ಲಗ್ಗೆಯಿಡುವ ಆತಂಕ; ಹೋರಾಟದ ಎಚ್ಚರಿಕೆ ನೀಡಿದ ಹಕ್ಕೆ ಗ್ರಾಮಸ್ಥರು ಕುಶಾಲನಗರ: ಬೀದಿ ನಾಯಿಗಳ ಹಾವಳಿ…

52 mins ago