ಗುಂಡ್ಲುಪೇಟೆ : ಕನ್ನಡ ಚಿತ್ರರಂಗದ ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಅಪಮಾನ ಮಾಡಿರುವುದನ್ನು ಖಂಡಿಸಿ ಆರೋಪಿಯನ್ನು ಕೂಡಲೇ ಗಡಿಪಾರು ಮಾಡುವಂತೆ ಒತ್ತಾಯಿಸಿ ತಾಲೂಕಿನ ಬೇಗೂರು ಗ್ರಾಮದ ಆರ್ಯ ಈಡಿಗ ಜನಾಂಗ ಹಾಗೂ ಕರ್ನಾಟಕ ರಕ್ಷಣಾ ಕನ್ನಡ ಕಹಳೆ ಸಂಘಟನೆ ಮತ್ತು ಅಪ್ಪು ಅಭಿಮಾನಿಗಳ ಬಳಗ ಬೇಗೂರು ಇವರುಗಳ ವತಿಯಿಂದ ದೂರು ಸಲ್ಲಿಸಲಾಯಿತು.
ಆರೋಪಿಯದ ಮೈಸೂರಿನ ಲಿಂಗದೇವರು ಕೊಪ್ಪಲು ಗ್ರಾಮದ ಮಲ್ಲಿಕಾರ್ಜುನ ಅಲಿಯಾಸ್ ಪುಟ್ಟು ಎಂಬಾತನು ಸಾಮಾಜಿಕ ಜಾಲತಾಣದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಕುರಿತು ಅವಮಾನಕಾರಿ ಹೇಳಿಕೆ ನೀಡಿರುವುದು ಕನ್ನಡ ಕುಲಕ್ಕೆ ಅಪಮಾನ ಮಾಡಿದಂತಾಗಿದೆ, ಇದು ನಮ್ಮ ಹಾಗೂ ಅಪ್ಪು ಅಭಿಮಾನಿಗಳ ಮನಸ್ಸಿಗೆ ಬಹಳ ನೋವುಂಟು ಮಾಡಿರುವ ಹಿನ್ನೆಲೆ ಕೂಡಲೇ ಆತನನ್ನು ಬಂಧಿಸಿ ಗಡಿಪಾರು ಮಾಡಬೇಕೆಂದು ಆಗ್ರಹಿಸುವ ಮೂಲಕ ಠಾಣೆಯ ಎಎಸ್ಐ ಜಯರಾಮ್ ಅವರಿಗೆ ಲಿಖಿತ ರೂಪದಲ್ಲಿ ದೂರು ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ಕನ್ನಡ ಕಹಳೆ ಸಂಘಟನೆ ಜಿಲ್ಲಾಧ್ಯಕ್ಷ ಗೋಪಿ ಬೇಗೂರು ಹೋಬಳಿ ಆರ್ಯ ಈಡಿಗ ಸಮುದಾಯದ ಯಜಮಾನರುಗಳಾದ ಸುರೇಶ್, ಲೋಕೇಶ್,ಸೋಮಹಳ್ಳಿ ಮಂಜು, ಪರ್ಮಿ,ಸೀನ, ಮಣಿ , ಶಕೀ , ವಿಶು,ವಾಸು, ಯೋಗೇಶ್,ಆನಂದ್,ಮುಂತಾದವರು ಹಾಜರಿದ್ದರು
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…
ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…