ಗುಂಡ್ಲುಪೇಟೆ : ಕನ್ನಡ ಚಿತ್ರರಂಗದ ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಅಪಮಾನ ಮಾಡಿರುವುದನ್ನು ಖಂಡಿಸಿ ಆರೋಪಿಯನ್ನು ಕೂಡಲೇ ಗಡಿಪಾರು ಮಾಡುವಂತೆ ಒತ್ತಾಯಿಸಿ ತಾಲೂಕಿನ ಬೇಗೂರು ಗ್ರಾಮದ ಆರ್ಯ ಈಡಿಗ ಜನಾಂಗ ಹಾಗೂ ಕರ್ನಾಟಕ ರಕ್ಷಣಾ ಕನ್ನಡ ಕಹಳೆ ಸಂಘಟನೆ ಮತ್ತು ಅಪ್ಪು ಅಭಿಮಾನಿಗಳ ಬಳಗ ಬೇಗೂರು ಇವರುಗಳ ವತಿಯಿಂದ ದೂರು ಸಲ್ಲಿಸಲಾಯಿತು.
ಆರೋಪಿಯದ ಮೈಸೂರಿನ ಲಿಂಗದೇವರು ಕೊಪ್ಪಲು ಗ್ರಾಮದ ಮಲ್ಲಿಕಾರ್ಜುನ ಅಲಿಯಾಸ್ ಪುಟ್ಟು ಎಂಬಾತನು ಸಾಮಾಜಿಕ ಜಾಲತಾಣದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಕುರಿತು ಅವಮಾನಕಾರಿ ಹೇಳಿಕೆ ನೀಡಿರುವುದು ಕನ್ನಡ ಕುಲಕ್ಕೆ ಅಪಮಾನ ಮಾಡಿದಂತಾಗಿದೆ, ಇದು ನಮ್ಮ ಹಾಗೂ ಅಪ್ಪು ಅಭಿಮಾನಿಗಳ ಮನಸ್ಸಿಗೆ ಬಹಳ ನೋವುಂಟು ಮಾಡಿರುವ ಹಿನ್ನೆಲೆ ಕೂಡಲೇ ಆತನನ್ನು ಬಂಧಿಸಿ ಗಡಿಪಾರು ಮಾಡಬೇಕೆಂದು ಆಗ್ರಹಿಸುವ ಮೂಲಕ ಠಾಣೆಯ ಎಎಸ್ಐ ಜಯರಾಮ್ ಅವರಿಗೆ ಲಿಖಿತ ರೂಪದಲ್ಲಿ ದೂರು ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ಕನ್ನಡ ಕಹಳೆ ಸಂಘಟನೆ ಜಿಲ್ಲಾಧ್ಯಕ್ಷ ಗೋಪಿ ಬೇಗೂರು ಹೋಬಳಿ ಆರ್ಯ ಈಡಿಗ ಸಮುದಾಯದ ಯಜಮಾನರುಗಳಾದ ಸುರೇಶ್, ಲೋಕೇಶ್,ಸೋಮಹಳ್ಳಿ ಮಂಜು, ಪರ್ಮಿ,ಸೀನ, ಮಣಿ , ಶಕೀ , ವಿಶು,ವಾಸು, ಯೋಗೇಶ್,ಆನಂದ್,ಮುಂತಾದವರು ಹಾಜರಿದ್ದರು
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…
ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್ ಗಿಫ್ಟ್ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…
ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದು ಭೇಟಿ ನೀಡಿ…
ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್ ಅವರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…
ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…