ಜಿಲ್ಲೆಗಳು

ಪವರ್ ಸ್ಟಾರ್ ಗೆ ಅಪಮಾನ ಖಂಡಿಸಿ ಠಾಣೆಗೆ ದೂರು

ಗುಂಡ್ಲುಪೇಟೆ : ಕನ್ನಡ ಚಿತ್ರರಂಗದ ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಅಪಮಾನ ಮಾಡಿರುವುದನ್ನು ಖಂಡಿಸಿ ಆರೋಪಿಯನ್ನು ಕೂಡಲೇ ಗಡಿಪಾರು ಮಾಡುವಂತೆ ಒತ್ತಾಯಿಸಿ ತಾಲೂಕಿನ ಬೇಗೂರು ಗ್ರಾಮದ ಆರ್ಯ ಈಡಿಗ ಜನಾಂಗ ಹಾಗೂ ಕರ್ನಾಟಕ ರಕ್ಷಣಾ ಕನ್ನಡ ಕಹಳೆ ಸಂಘಟನೆ ಮತ್ತು ಅಪ್ಪು ಅಭಿಮಾನಿಗಳ ಬಳಗ ಬೇಗೂರು ಇವರುಗಳ ವತಿಯಿಂದ ದೂರು ಸಲ್ಲಿಸಲಾಯಿತು.

 

ಆರೋಪಿಯದ ಮೈಸೂರಿನ ಲಿಂಗದೇವರು ಕೊಪ್ಪಲು ಗ್ರಾಮದ ಮಲ್ಲಿಕಾರ್ಜುನ ಅಲಿಯಾಸ್ ಪುಟ್ಟು ಎಂಬಾತನು ಸಾಮಾಜಿಕ ಜಾಲತಾಣದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಕುರಿತು ಅವಮಾನಕಾರಿ ಹೇಳಿಕೆ ನೀಡಿರುವುದು ಕನ್ನಡ ಕುಲಕ್ಕೆ ಅಪಮಾನ ಮಾಡಿದಂತಾಗಿದೆ, ಇದು ನಮ್ಮ ಹಾಗೂ ಅಪ್ಪು ಅಭಿಮಾನಿಗಳ ಮನಸ್ಸಿಗೆ ಬಹಳ ನೋವುಂಟು ಮಾಡಿರುವ ಹಿನ್ನೆಲೆ ಕೂಡಲೇ ಆತನನ್ನು ಬಂಧಿಸಿ ಗಡಿಪಾರು ಮಾಡಬೇಕೆಂದು ಆಗ್ರಹಿಸುವ ಮೂಲಕ ಠಾಣೆಯ ಎಎಸ್ಐ ಜಯರಾಮ್ ಅವರಿಗೆ ಲಿಖಿತ ರೂಪದಲ್ಲಿ ದೂರು ನೀಡಿದರು.

 

ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ಕನ್ನಡ ಕಹಳೆ ಸಂಘಟನೆ ಜಿಲ್ಲಾಧ್ಯಕ್ಷ ಗೋಪಿ ಬೇಗೂರು ಹೋಬಳಿ ಆರ್ಯ ಈಡಿಗ ಸಮುದಾಯದ ಯಜಮಾನರುಗಳಾದ  ಸುರೇಶ್, ಲೋಕೇಶ್,ಸೋಮಹಳ್ಳಿ ಮಂಜು, ಪರ್ಮಿ,ಸೀನ, ಮಣಿ , ಶಕೀ , ವಿಶು,ವಾಸು, ಯೋಗೇಶ್,ಆನಂದ್,ಮುಂತಾದವರು ಹಾಜರಿದ್ದರು

andolanait

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

6 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

8 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

17 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

17 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

17 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

17 hours ago