ಗುಂಡ್ಲುಪೇಟೆ : ಕನ್ನಡ ಚಿತ್ರರಂಗದ ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಅಪಮಾನ ಮಾಡಿರುವುದನ್ನು ಖಂಡಿಸಿ ಆರೋಪಿಯನ್ನು ಕೂಡಲೇ ಗಡಿಪಾರು ಮಾಡುವಂತೆ ಒತ್ತಾಯಿಸಿ ತಾಲೂಕಿನ ಬೇಗೂರು ಗ್ರಾಮದ ಆರ್ಯ ಈಡಿಗ ಜನಾಂಗ ಹಾಗೂ ಕರ್ನಾಟಕ ರಕ್ಷಣಾ ಕನ್ನಡ ಕಹಳೆ ಸಂಘಟನೆ ಮತ್ತು ಅಪ್ಪು ಅಭಿಮಾನಿಗಳ ಬಳಗ ಬೇಗೂರು ಇವರುಗಳ ವತಿಯಿಂದ ದೂರು ಸಲ್ಲಿಸಲಾಯಿತು.
ಆರೋಪಿಯದ ಮೈಸೂರಿನ ಲಿಂಗದೇವರು ಕೊಪ್ಪಲು ಗ್ರಾಮದ ಮಲ್ಲಿಕಾರ್ಜುನ ಅಲಿಯಾಸ್ ಪುಟ್ಟು ಎಂಬಾತನು ಸಾಮಾಜಿಕ ಜಾಲತಾಣದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಕುರಿತು ಅವಮಾನಕಾರಿ ಹೇಳಿಕೆ ನೀಡಿರುವುದು ಕನ್ನಡ ಕುಲಕ್ಕೆ ಅಪಮಾನ ಮಾಡಿದಂತಾಗಿದೆ, ಇದು ನಮ್ಮ ಹಾಗೂ ಅಪ್ಪು ಅಭಿಮಾನಿಗಳ ಮನಸ್ಸಿಗೆ ಬಹಳ ನೋವುಂಟು ಮಾಡಿರುವ ಹಿನ್ನೆಲೆ ಕೂಡಲೇ ಆತನನ್ನು ಬಂಧಿಸಿ ಗಡಿಪಾರು ಮಾಡಬೇಕೆಂದು ಆಗ್ರಹಿಸುವ ಮೂಲಕ ಠಾಣೆಯ ಎಎಸ್ಐ ಜಯರಾಮ್ ಅವರಿಗೆ ಲಿಖಿತ ರೂಪದಲ್ಲಿ ದೂರು ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ಕನ್ನಡ ಕಹಳೆ ಸಂಘಟನೆ ಜಿಲ್ಲಾಧ್ಯಕ್ಷ ಗೋಪಿ ಬೇಗೂರು ಹೋಬಳಿ ಆರ್ಯ ಈಡಿಗ ಸಮುದಾಯದ ಯಜಮಾನರುಗಳಾದ ಸುರೇಶ್, ಲೋಕೇಶ್,ಸೋಮಹಳ್ಳಿ ಮಂಜು, ಪರ್ಮಿ,ಸೀನ, ಮಣಿ , ಶಕೀ , ವಿಶು,ವಾಸು, ಯೋಗೇಶ್,ಆನಂದ್,ಮುಂತಾದವರು ಹಾಜರಿದ್ದರು
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…