ಜಿಲ್ಲೆಗಳು

ಅಂತೂ ಇಂತೂ ಮಾಲಿಂಗನತ್ತ ಗ್ರಾಮಕ್ಕೆ ವಿದ್ಯುತ್ ಪೂರೈಕೆ

ಹನೂರು :ತಾಲ್ಲೂಕಿನ ಮಾಲಿಂಗನತ್ತ ಗ್ರಾಮದಲ್ಲಿ ಸೆಸ್ಕ್ ಅಧಿಕಾರಿಗಳು ಕ್ರಮ ಕೈಗೊಂಡ ಪರಿಣಾಮ ಅಂತೂ ಇಂತೂ ನಿರಂತರ ವಿದ್ಯುತ್ ಯೋಜನೆಯಡಿ ವಿದ್ಯುತ್ ಪೂರೈಸಲಾಗಿದೆ.

ಸೋಮವಾರ ಮಾಲಿಂಗನತ್ತ ಗ್ರಾಮದ ಮೂಲಕ ಇತರೆ ಗ್ರಾಮಗಳಿಗೆ ನಿರಂತರ ಜ್ಯೋತಿ ವಿದ್ಯುತ್ ಯೋಜನೆಯಡಿ ಪೂರೈಕ ಮಾಡಲಾಗುತ್ತಿದೆ. ಆದರೆ ನಮ್ಮ ಗ್ರಾಮದಲ್ಲಿಯೇ ವಿದ್ಯುತ್ ಸಮಸ್ಯೆ ತಾಂಡವಾಡುತ್ತಿದೆ ಇದರಿಂದ ವಿದ್ಯಾರ್ಥಿಗಳಿಗೆ, ರೈತರಿಗೆ, ಗೃಹಣಿಯರಿಗೆ ತುಂಬಾ ತೊಂದರೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ನಿರಂತರ ವಿದ್ಯುತ್ ಯೋಜನೆ ಯಡಿ ಸಮರ್ಪಕ ವಿದ್ಯುತ್ ಸರಬರಾಜು ಮಾಡುವಂತೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು.

ಸೆಸ್ಕ್ ಇಇ ವಸಂತಕುಮಾರ್‌ ಸೇರಿದಂತೆ ಇತರ ಅಧಿಕಾರಿಗಳು

ವಿದ್ಯುತ್ ಸಮಸ್ಯೆಯ ಬಗ್ಗೆ ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕರಾದ ಜಯ ವಿಭವ ಸ್ವಾಮಿ ರವರಿಗೆ ದೂರವಾಣಿ ಮುಖಾಂತರ ತಿಳಿಸಲಾಗಿತ್ತು. ತಕ್ಷಣ ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಸೆಸ್ಕ್ ವ್ಯವಸ್ಥಾಪಕರು ಕೊಳ್ಳೇಗಾಲ ಉಪ ವಿಭಾಗದ ಪ್ರಭಾರ ಇಇ ವಸಂತ್ ಕುಮಾರ್ ರವರನ್ನು ಸ್ಥಳಕ್ಕೆ ಕಳುಹಿಸಿ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಆದೇಶ ನೀಡಿದ್ದರು.

ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಇಇ ವಸಂತ್ ಕುಮಾರ್ ರವರು ಹನೂರು ವಿಭಾಗದ ಎಇಇಶಂಕರ್ ರವರನ್ನು ಸ್ಥಳಕ್ಕೆ ಕರೆಯಿಸಿಕೊಂಡು ತಕ್ಷಣ ಸಮಸ್ಯೆಯನ್ನು ತಾತ್ಕಾಲಿಕವಾಗಿ ಬಗೆಹರಿಸುವಂತೆ ಸೂಚಿಸಿ ಕಾಮಗಾರಿ ಪ್ರಾರಂಭಿಸಿದ್ದರು. ಎಚ್ಚೆತ್ತ ಶಂಕರ್ ರವರು ನಿರಂತರ ವಿದ್ಯುತ್ ಯೋಜನೆಯಡಿ ವಿದ್ಯುತ್ ಪೂರೈಕೆ ಮಾಡಲು ಕ್ರಮ ಕೈಗೊಂಡಿದ್ದಾರೆ.

NJY ಬೇರ್ಪಡಿಸಿ ಸರಿಯಾದ ಮಾರ್ಗ ರೂಪಿಸಲು ಕಾಮಗಾರಿಗೆ ಅಂದಾಜು ಪಟ್ಟಿ ತಯಾರಿಸಲಾಗಿದೆ ಆದರೆ ತುರ್ತು ಅವಶ್ಯಕತೆ ಹಾಗೂ ಗ್ರಾಮಸ್ಥರ ಮನವಿ ಪರಿಗಣಿಸಿ ತಾತ್ಕಾಲಿಕವಾಗಿ 24*7 ನಿರಂತರ ಜ್ಯೋತಿ ವಿದ್ಯುತ್ ಸಂಪರ್ಕ ಹಾಗೂ ಸರಬರಾಜು ನೀಡಲು ಸೋಮವಾರದಿಂದಲೇ ಕ್ರಮ ವಹಿಸಲಾಗಿದೆ ಮಂಗಳವಾರ ಸಂಜೆ ಒಳಗೆ ಕಾಮಗಾರಿ ಮುಕ್ತಾಯಗೊಳಿಸಲು ಪ್ರಯತ್ನಿಸುತ್ತೇವೆ ಎಂದು ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಜಯ ವಿಭವ ಸ್ವಾಮಿ ಆಂದೋಲನ ಟಿವಿಗೆ ಮಾಹಿತಿ ನೀಡಿದ್ದಾರೆ.

ಆದೋಲನ ಟಿವಿ ವರದಿ ಫಲಶೃತಿ
ಮಹಾದೇಶ್ ಎಂ ಗೌಡ .ಹನೂರು ತಾ. ವರದಿಗಾರರು

 

andolanait

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

9 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

9 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

9 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

9 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

22 hours ago