ಜಿಲ್ಲೆಗಳು

ನಾಳೆ ಮೊಳಗಲಿದೆ ಪ್ರಜಾಧ್ವನಿ : ಚಾ.ನಗರ, ಮೈಸೂರಿನಲ್ಲಿ ಕೈ ಸಮಾವೇಶ

ಮೈಸೂರು: ಸಂಕ್ರಾಂತಿಯ ಬಳಿಕ ರಾಜ್ಯ ರಾಜಕೀಯದಲ್ಲಿ ಚುನಾವಣೆ ಚಟುವಟಿಕೆ ಬಿರುಸುಗೊಂಡಿದೆ. ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಮೂರೂ ರಾಜಕೀಯ ಪಕ್ಷಗಳು ಮೈಕೊಡವಿ ಎದ್ದು ನಿಂತಿವೆ. ಯಾತ್ರೆಗಳ ಪರ್ವ ಆರಂಭವಾಗಿದೆ. ಮೂರೂ ಪಕ್ಷಗಳು ಮತದಾರರ ಮನೆ ಬಾಗಿಲು ತಟ್ಟುವ ಕಾರ್ಯ ಆರಂಭಿಸಿವೆ. ಕಾಂಗ್ರೆಸ್ ‘ಪ್ರಜಾಧ್ವನಿ’ ಬಸ್ ಯಾತ್ರೆ ಮೂಲಕ ಸದ್ದು ಮಾಡುತ್ತಿದೆ.
ಕಾಂಗ್ರೆಸ್ ಸಿದ್ದರಾಮಮಯ್ಯ -75  ದಾವಣಗೆರೆ ಸಮಾವೇಶದ ಮೂಲಕ ಕಾಂಗ್ರೆಸ್ ಚುನಾವಣಾ ಪ್ರಚಾರಕ್ಕೆ ನಾಂದಿ ಹಾಡಿ, ಶಕ್ತಿಪ್ರದರ್ಶನ ಮಾಡಿತ್ತು. ನಂತರ, ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ಯಾತ್ರೆ ಮೂಲಕ ಸಂಚಲನ ಉಂಟುಮಾಡಿತ್ತು. ಆನಂತರ ಚಿತ್ರದುರ್ಗದಲ್ಲಿ ಐಕ್ಯತಾ ಸಮಾವೇಶ, ಬೆಂಗಳೂರಿನಲ್ಲಿ ನಾ ನಾಯಕಿ ಸಮಾವೇಶ ನಡೆಸಿ ಮತ ಧ್ರುವೀಕರಣಕ್ಕೆ ಚಾಲನೆ ನೀಡಿತ್ತು. ಇದೀಗ ‘ಪ್ರಜಾಧ್ವನಿ’ ಯಾತ್ರೆ ಮೂಲಕ ರಾಜ್ಯದ 224 ಕ್ಷೇತ್ರಗಳನ್ನೂ ತಲುಪುವ ಕಾರ್ಯ ಮಾಡುತ್ತಿದೆ.
ಈಗಾಗಲೇ ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ, ಮಧ್ಯ ಕರ್ನಾಟಕದಲ್ಲಿ ‘ಪ್ರಜಾಧ್ವನಿ’ ಯಾತ್ರೆ ಯಶಸ್ವಿಯಾಗಿದ್ದು, 26, 27ರಂದು ಹಳೇ ಮೈಸೂರು ಭಾಗವಾದ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಪ್ರವಾಸ ಹಮ್ಮಿಕೊಂಡಿದೆ. ಉಚಿತ ಕೊಡುಗೆಗಳನ್ನು ಘೋಷಿಸುತ್ತಿರುವ ಕಾಂಗ್ರೆಸ್ ಈಗಾಗಲೇ 200 ಯೂನಿಟ್ ಉಚಿತ ವಿದ್ಯುತ್, ಪ್ರತಿ ಕುಟುಂಬದ ಯಜಮಾನನಿಗೆ ಮಾಸಿಕ 2,000 ರೂ. ಪ್ರತಿ ಬಿಪಿಎಲ್ ಕುಟಂಬಕ್ಕೆ ತಲಾ 10 ಕೆ.ಜಿ.ಅಕ್ಕಿ ನೀಡುವುದಾಗಿ ಪ್ರಕಟಿಸಿದೆ.
ಮೈಸೂರಿನಲ್ಲಿ ಕಾಂಗ್ರೆಸ್ ಕಚೇರಿ ಮುಂಭಾಗ ಇರುವ ಜೆ.ಕೆ.ಮೈದಾನದಲ್ಲಿ ಮಧ್ಯಾಹ್ನ 3 ಗಂಟೆಗೆ ಪ್ರಜಾಧ್ವನಿ ಯಾತ್ರೆ ನಡೆಯಲಿದೆ. ಚಾಮರಾಜನಗರದಲ್ಲಿ ಬೆಳಿಗ್ಗೆ 11 ಗಂಟೆಗೆ ಸಂತೆಮರಳ್ಳಿ ವೃತ್ತದ ಬಳಿ ಇರುವ ರೇಷ್ಮೆ ಕಾರ್ಖಾನೆ ಹತ್ತಿರದ ಮೈದಾನದಲ್ಲಿ ಆಯೋಜಿಸಲಾಗಿದೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ಅವರ ಉಸ್ತುವಾರಿಯಲ್ಲಿ ಮೈಸೂರು, ಚಾಮರಾಜನಗರ ಸಮಾವೇಶ ಆಯೋನೆಗೊಂಡಿದ್ದು, ಈಗಾಗಲೇ ಪೂರ್ವಭಾವಿ ಸಭೆಗಳು ನಡೆದಿವೆ. ಇದು ಸಿದ್ದರಾಮಯ್ಯನವರ ತವರು ಜಿಲ್ಲೆ (ಅವಿಭಜಿತ ಮೈಸೂರು, ಚಾಮರಾಜನಗರ) ಯಾಗಿದ್ದು ಕಾಂಗ್ರೆಸ್ ಶಕ್ತಿಪ್ರದರ್ಶನದ ವೇದಿಕೆ ಆಗಲಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ವಿಧಾನಸಭೆಯ ವಿರೋದಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಮುಂತಾದವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

10 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

12 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

13 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

15 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

16 hours ago