ಮೈಸೂರು: ನಗರದಲ್ಲಿ ಭಯೋತ್ಪಾದನಾ ಚಟುವಟಿಕೆಗಳಿಗೆ ಬೆಂಬಲ ಕೊಡುವ ಗುಮಾನಿ ಇರುವುದರಿಂದ ನಗರದ ಕೆಲವು ಪ್ರದೇಶಗಳಲ್ಲಿ ಕೂಬಿಂಗ್ ಅಪರೇಷನ್ ಮಾಡಬೇಕಾಗಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸದಸ್ಯ ಪ್ರತಾಪ್ ಸಿಂಹ ಹೇಳಿದರು.
ಕುಕ್ಕರ್ಬ್ಲಾಸ್ ಆಗಿದೆ ಅಂತ ಪೊಲೀಸರು ಸುಮ್ಮನಿರದೆ ಅನುಮಾನಪಟ್ಟು ತನಿಖೆಗೆ ಇಳಿದ ಮೇಲೆ ಬಾಂಬ್ ಸ್ಫೋಟಿಸುವ ಸಂಚು ನಡೆದಿತ್ತು ಎನ್ನುವ ಮಾಹಿತಿ ಕೇಳಿಬಂದಿತ್ತು. ಹಾಗಾಗಿ, ನಗರದಲ್ಲಿ ಅಶಾಂತಿ ಹುಟ್ಟಿಸುವ ಕೆಲಸಕ್ಕೆ ಕೈ ಹಾಕಿರುವ ಶಕ್ತಿಗಳನ್ನು ಮಟ್ಟ ಹಾಕಬೇಕಾಗಿದೆ ಎಂದು ತಿಳಿಸಿದರು.
೨೦೧೧ರಲ್ಲಿ ಹುಣಸೂರಿನ ವಿದ್ಯಾರ್ಥಿಗಳಿಬ್ಬರನ್ನು ಅಪಹರಣ ಮಾಡಿ ಒತ್ತೆಯಾಳಾಗಿ ಇಟ್ಟುಕೊಂಡು ಹಣ ಕೊಡದಿದ್ದಮೇಲೆ ಹತ್ಯೆ ಮಾಡಲಾಯಿತು. ೨೦೧೫ರಲ್ಲಿ ಕ್ಯಾತಮಾರನಹಳ್ಳಿ ರಾಜು ಹತ್ಯೆ, ಶಾಸಕ ತನ್ವೀರ್ಸೇಠ್ ಕೊಲೆಯತ್ನ,ಕೊಡಗಿನ ಕುಟ್ಟಪ್ಪ ಹತ್ಯೆ,ಮಂಗಳೂರಿನ ಪ್ರವೀಣ್ಪೂಜಾರಿ ಹತ್ಯೆ ಪ್ರಕರಣಗಳಲ್ಲಿ ಪಿಎಫ್ಐ, ಎಸ್ಡಿಪಿಐ ಕಾರ್ಯಕರ್ತರ ಕೈವಾಡವಿರುವುದು ಸಾಬೀತಾಗಿದೆ ಎಂದು ಆರೋಪಿಸಿದರು.
ದಕ್ಷಿಣಕನ್ನಡ ಭಾಗದಲ್ಲಿ ನಡೆಯುತ್ತಿದ್ದ ಹತ್ಯೆಗಳನ್ನು ಮೈಸೂರಿಗೂ ವಿಸ್ತರಿಸುವ ಸಂಚು ನಡೆದಿದೆ.ಈಗ ಮಾನವ ಬಾಂಬ್ ಸ್ಫೋಟಿಸುವ ಕೃತ್ಯದಲ್ಲಿ ತೊಡಗಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಶಾಂತಿನಗರ, ಗೌಸಿಯಾನಗರ, ಕಲ್ಯಾಣಗಿರಿ,ರಾಜೀವ್ನಗರ ಭಾಗಗಳಲ್ಲಿಕೂಬಿಂಗ್ ಅಪರೇಷನ್ ಮಾಡಿ ಅಲ್ಲಿ ನಡೆಯುತ್ತಿರುವ ಚಟುವಟಿಕೆಗಳ ಬಗ್ಗೆ ನಿಗಾ ಇಡಬೇಕು ಎಂದು ಒತ್ತಾಯಿಸಿದರು.
ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಭಾಷೆಯನ್ನು ಕಡ್ಡಾಯವಾಗಿ ಕಲಿಯಬೇಕು ಎಂಬ ಹಿನ್ನೆಲೆಯಲ್ಲಿ, ಮಲಯಾಳಂ ಭಾಷಾ ಮಸೂದೆ ೨೦೨೫ ಅನ್ನು…
ನಮ್ಮ ರಾಜ್ಯದ ಗಡಿಭಾಗಗಳಲ್ಲಿನ ಅನ್ಯಭಾಷಾ ಮಾಧ್ಯಮ ಶಾಲೆಗಳಲ್ಲಿ (ತಮಿಳು, ಮರಾಠಿ, ಮಲಯಾಳಂ, ಉರ್ದು, ತೆಲುಗು) ಕನ್ನಡವನ್ನು ಪ್ರಥಮ ಭಾಷೆಯನ್ನಾಗಿ ಕಡ್ಡಾಯಗೊಳಿ…
ಮಂಡ್ಯ ಸೀಮೆಯ ಆರ್ಥಿಕ, ಸಾಮಾಜಿಕ, ಕೈಗಾರಿಕೆ, ನೀರಾವರಿ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿ ಕಾರ್ಯದಲ್ಲಿ ಮೈಸೂರು ರಾಜವಂಶಸ್ಥರ ಕೊಡುಗೆ ಅಪಾರ.…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಪಶ್ಚಿಮ ಬಂಗಾಳದ ರಾಜಕಾರಣ ಎಂದರೆ ಅದು ಬೀದಿ ಕಾಳಗ. ಈ ಬೀದಿ ಕಾಳಗದ ರಾಜಕಾರಣ…
ಕೃಷ್ಣ ಸಿದ್ದಾಪುರ ಕಳಪೆ ರಸ್ತೆ ಕಾಮಗಾರಿ; ೩೦ ಲಕ್ಷ ರೂ. ಅನುದಾನ ವ್ಯರ್ಥ ಸಿದ್ದಾಪುರ: ಇಲ್ಲಿನ ಕರಡಿಗೋಡು ಗ್ರಾಮದಲ್ಲಿ ರಸ್ತೆ…
ಮಹಾದೇಶ್ ಎಂ.ಗೌಡ ಕುಡಿಯುವ ನೀರು, ಚರಂಡಿ, ಸಾರಿಗೆ ವ್ಯವಸ್ಥೆ ಕಲ್ಪಿಸಲು ಗ್ರಾಮಸ್ಥರ ಆಗ್ರಹ ಹನೂರು: ಕುಡಿಯುವ ನೀರಿಗೆ ಹಾಹಾಕಾರ, ಶಾಲೆಗೆ…