ಮೈಸೂರು: ನಗರದಲ್ಲಿ ಭಯೋತ್ಪಾದನಾ ಚಟುವಟಿಕೆಗಳಿಗೆ ಬೆಂಬಲ ಕೊಡುವ ಗುಮಾನಿ ಇರುವುದರಿಂದ ನಗರದ ಕೆಲವು ಪ್ರದೇಶಗಳಲ್ಲಿ ಕೂಬಿಂಗ್ ಅಪರೇಷನ್ ಮಾಡಬೇಕಾಗಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸದಸ್ಯ ಪ್ರತಾಪ್ ಸಿಂಹ ಹೇಳಿದರು.
ಕುಕ್ಕರ್ಬ್ಲಾಸ್ ಆಗಿದೆ ಅಂತ ಪೊಲೀಸರು ಸುಮ್ಮನಿರದೆ ಅನುಮಾನಪಟ್ಟು ತನಿಖೆಗೆ ಇಳಿದ ಮೇಲೆ ಬಾಂಬ್ ಸ್ಫೋಟಿಸುವ ಸಂಚು ನಡೆದಿತ್ತು ಎನ್ನುವ ಮಾಹಿತಿ ಕೇಳಿಬಂದಿತ್ತು. ಹಾಗಾಗಿ, ನಗರದಲ್ಲಿ ಅಶಾಂತಿ ಹುಟ್ಟಿಸುವ ಕೆಲಸಕ್ಕೆ ಕೈ ಹಾಕಿರುವ ಶಕ್ತಿಗಳನ್ನು ಮಟ್ಟ ಹಾಕಬೇಕಾಗಿದೆ ಎಂದು ತಿಳಿಸಿದರು.
೨೦೧೧ರಲ್ಲಿ ಹುಣಸೂರಿನ ವಿದ್ಯಾರ್ಥಿಗಳಿಬ್ಬರನ್ನು ಅಪಹರಣ ಮಾಡಿ ಒತ್ತೆಯಾಳಾಗಿ ಇಟ್ಟುಕೊಂಡು ಹಣ ಕೊಡದಿದ್ದಮೇಲೆ ಹತ್ಯೆ ಮಾಡಲಾಯಿತು. ೨೦೧೫ರಲ್ಲಿ ಕ್ಯಾತಮಾರನಹಳ್ಳಿ ರಾಜು ಹತ್ಯೆ, ಶಾಸಕ ತನ್ವೀರ್ಸೇಠ್ ಕೊಲೆಯತ್ನ,ಕೊಡಗಿನ ಕುಟ್ಟಪ್ಪ ಹತ್ಯೆ,ಮಂಗಳೂರಿನ ಪ್ರವೀಣ್ಪೂಜಾರಿ ಹತ್ಯೆ ಪ್ರಕರಣಗಳಲ್ಲಿ ಪಿಎಫ್ಐ, ಎಸ್ಡಿಪಿಐ ಕಾರ್ಯಕರ್ತರ ಕೈವಾಡವಿರುವುದು ಸಾಬೀತಾಗಿದೆ ಎಂದು ಆರೋಪಿಸಿದರು.
ದಕ್ಷಿಣಕನ್ನಡ ಭಾಗದಲ್ಲಿ ನಡೆಯುತ್ತಿದ್ದ ಹತ್ಯೆಗಳನ್ನು ಮೈಸೂರಿಗೂ ವಿಸ್ತರಿಸುವ ಸಂಚು ನಡೆದಿದೆ.ಈಗ ಮಾನವ ಬಾಂಬ್ ಸ್ಫೋಟಿಸುವ ಕೃತ್ಯದಲ್ಲಿ ತೊಡಗಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಶಾಂತಿನಗರ, ಗೌಸಿಯಾನಗರ, ಕಲ್ಯಾಣಗಿರಿ,ರಾಜೀವ್ನಗರ ಭಾಗಗಳಲ್ಲಿಕೂಬಿಂಗ್ ಅಪರೇಷನ್ ಮಾಡಿ ಅಲ್ಲಿ ನಡೆಯುತ್ತಿರುವ ಚಟುವಟಿಕೆಗಳ ಬಗ್ಗೆ ನಿಗಾ ಇಡಬೇಕು ಎಂದು ಒತ್ತಾಯಿಸಿದರು.
ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್ ಎಕ್ಸ್ಪ್ರೆಸ್ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಟಿವಿಕೆ ಪಕ್ಷವು ಇದೀಗ ಸರ್ಕಾರ ರಚನೆ ಮಾಡಲು ಮುಂದಾಗಿದೆ. ಚೆನ್ನೈನ ಪಣಿಯೂರಿನಲ್ಲಿರುವ…
ಬೆಂಗಳೂರು: ತಮಿಳುನಾಡಿನ ಮತದಾರರು ಬದಲಾವಣೆ ಬಯಸಿದ್ದರು. ಅದರಂತೆ ಬದಲಾವಣೆಗೆ ಮತ ಹಾಕಿದ್ದಾರೆ. ಈ ಫಲಿತಾಂಶ ತುಂಬಾ ಆಶ್ಚರ್ಯಕರವಾಗಿದೆ ಎಂದು ಸಿಎಂ…
ಚೆನ್ನೈ: ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್ ಅವರಿಂದು ತಮಿಳುನಾಡು ಸಿಎಂ ಹುದ್ದಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಲೋಕಭವನದಲ್ಲಿರುವ…
ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಮೈಸೂರಿನ ಉದಯಗಿರಿಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಉದಯಗಿರಿ ಪೊಲೀಸ್ ಠಾಣೆಯಿಂದ ಕೇವಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಮಾಪುರ ವ್ಯಾಪ್ತಿಯಲ್ಲಿ ಜಮೀನುಗಳಲ್ಲಿ ಇರುತ್ತಿದ್ದ ನೀರೆತ್ತುವ ಪಂಪ್ ಸೆಟ್ ಮೋಟಾರ್ಗಳನ್ನು…