ಜಿಲ್ಲೆಗಳು

ಮೈಸೂರಿನಲ್ಲೂ ಶೋಧ ಕಾರ್ಯ ಕೈಗೊಳ್ಳಲು ಪ್ರತಾಪ್‌ ಸಿಂಹ ಒತ್ತಾಯ

ಮೈಸೂರು: ನಗರದಲ್ಲಿ ಭಯೋತ್ಪಾದನಾ ಚಟುವಟಿಕೆಗಳಿಗೆ ಬೆಂಬಲ ಕೊಡುವ ಗುಮಾನಿ ಇರುವುದರಿಂದ ನಗರದ ಕೆಲವು ಪ್ರದೇಶಗಳಲ್ಲಿ ಕೂಬಿಂಗ್ ಅಪರೇಷನ್ ಮಾಡಬೇಕಾಗಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸದಸ್ಯ ಪ್ರತಾಪ್ ಸಿಂಹ ಹೇಳಿದರು.

ಕುಕ್ಕರ್‌ಬ್ಲಾಸ್ ಆಗಿದೆ ಅಂತ ಪೊಲೀಸರು ಸುಮ್ಮನಿರದೆ ಅನುಮಾನಪಟ್ಟು ತನಿಖೆಗೆ ಇಳಿದ ಮೇಲೆ ಬಾಂಬ್ ಸ್ಫೋಟಿಸುವ ಸಂಚು ನಡೆದಿತ್ತು ಎನ್ನುವ ಮಾಹಿತಿ ಕೇಳಿಬಂದಿತ್ತು. ಹಾಗಾಗಿ, ನಗರದಲ್ಲಿ ಅಶಾಂತಿ ಹುಟ್ಟಿಸುವ ಕೆಲಸಕ್ಕೆ ಕೈ ಹಾಕಿರುವ ಶಕ್ತಿಗಳನ್ನು ಮಟ್ಟ ಹಾಕಬೇಕಾಗಿದೆ ಎಂದು ತಿಳಿಸಿದರು.

೨೦೧೧ರಲ್ಲಿ ಹುಣಸೂರಿನ ವಿದ್ಯಾರ್ಥಿಗಳಿಬ್ಬರನ್ನು ಅಪಹರಣ ಮಾಡಿ ಒತ್ತೆಯಾಳಾಗಿ ಇಟ್ಟುಕೊಂಡು ಹಣ ಕೊಡದಿದ್ದಮೇಲೆ ಹತ್ಯೆ ಮಾಡಲಾಯಿತು. ೨೦೧೫ರಲ್ಲಿ ಕ್ಯಾತಮಾರನಹಳ್ಳಿ ರಾಜು ಹತ್ಯೆ, ಶಾಸಕ ತನ್ವೀರ್‌ಸೇಠ್ ಕೊಲೆಯತ್ನ,ಕೊಡಗಿನ ಕುಟ್ಟಪ್ಪ ಹತ್ಯೆ,ಮಂಗಳೂರಿನ ಪ್ರವೀಣ್‌ಪೂಜಾರಿ ಹತ್ಯೆ ಪ್ರಕರಣಗಳಲ್ಲಿ ಪಿಎಫ್‌ಐ, ಎಸ್‌ಡಿಪಿಐ ಕಾರ್ಯಕರ್ತರ ಕೈವಾಡವಿರುವುದು ಸಾಬೀತಾಗಿದೆ ಎಂದು ಆರೋಪಿಸಿದರು.

ದಕ್ಷಿಣಕನ್ನಡ ಭಾಗದಲ್ಲಿ ನಡೆಯುತ್ತಿದ್ದ ಹತ್ಯೆಗಳನ್ನು ಮೈಸೂರಿಗೂ ವಿಸ್ತರಿಸುವ ಸಂಚು ನಡೆದಿದೆ.ಈಗ ಮಾನವ ಬಾಂಬ್ ಸ್ಫೋಟಿಸುವ ಕೃತ್ಯದಲ್ಲಿ ತೊಡಗಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಶಾಂತಿನಗರ, ಗೌಸಿಯಾನಗರ, ಕಲ್ಯಾಣಗಿರಿ,ರಾಜೀವ್‌ನಗರ ಭಾಗಗಳಲ್ಲಿಕೂಬಿಂಗ್ ಅಪರೇಷನ್ ಮಾಡಿ ಅಲ್ಲಿ ನಡೆಯುತ್ತಿರುವ ಚಟುವಟಿಕೆಗಳ ಬಗ್ಗೆ ನಿಗಾ ಇಡಬೇಕು ಎಂದು ಒತ್ತಾಯಿಸಿದರು.

andolana

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

7 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

8 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

9 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

9 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

24 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago