ಜಿಲ್ಲೆಗಳು

ಟಿಪ್ಪು ವೈಭವೀಕರಣ ನಿಲ್ಲಿಸಿ ಟಿಪ್ಪು ವಿರುದ್ದ ಮತ್ತೆ ಕಿಡಿಕಾರಿದ ಪ್ರತಾಪ್ ಸಿಂಹ

ಕೊಡಗು : ಟಿಪ್ಪು ಯಾವ ಯುದ್ದದಲ್ಲಿ ಹೋರಾಡಿದ್ದ? ಹುಲಿ ಜತೆ ಪೋಸ್ ಕೊಡೋ ಫೋಟೋ ಹಾಕಿ ಟಿಪ್ಪು ವೈಭವೀಕರಣ ಮಾಡಬೇಡಿ. ಕನ್ನಡವನ್ನು ಕಗ್ಗೊಲೆ ಮಾಡಿದ ವ್ಯಕ್ತಿಯ ಪ್ರತಿಮೆ ಮಾಡುತ್ತೀರಾ ಎಂದು ಸಂಸದ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದರು.

ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಸಿದ್ದರಾಮಯ್ಯ ಕನ್ನಡ ಸಂಸ್ಕೖತಿ ಇಲಾಖೆ ಮೂಲಕ ಟಿಪ್ಪು ಜಯಂತಿ ಮಾಡಿಸಿದ್ದರು. ಇದು ಅರಣ್ಯ ಇಲಾಖೆಯು ವೀರಪ್ಪನ್ ಜಯಂತಿ ಮಾಡಿದಂತಾಗುತ್ತದೆ ಎಂದು ವ್ಯಂಗ್ಯವಾಡಿದರು.

ಯುದ್ದದಲ್ಲಿ ಟಿಪ್ಪು ರಾಕೇಟ್ ಬಳಕೆ ಮಾಡಿದ ಉದಾಹರಣೆಯೇ ಇಲ್ಲ. ಕ್ರೌರ್ಯಕ್ಕೆ ದ್ಯೋತಕವಾಗಿದ್ದಾನೆ ಟಿಪ್ಪು. ಕಾಗಕ್ಕ ಗುಬ್ಬಕ್ಕ ಕಥೆ ಕಟ್ಟಿ ಟಿಪ್ಪು ವೈಭವೀಕರಣ ಮಾಡಬೇಡಿ ಎಂದು ಆಕ್ರೋಶ ವ್ಯಕ್ತಪಡಿದರು.

ಯಾವ ಹುಲಿ ಜತೆ ಟಿಪ್ಪು ಹೋರಾಟ ಮಾಡಿದ್ದಾನೆ. ಮನುಷ್ಯ ಹುಲಿ ಜತೆ ಹೋರಾಟ ಮಾಡಲು ಸಾಧ್ಯವೇ? ಆಂಗ್ಲೋ ಮೈಸೂರು ಯುದ್ದದಲ್ಲಿ ಟಿಪ್ಪು ಮನೆಯಿಂದ ಹೊರಗಡೆಯೇ ಬರಲಿಲ್ಲ. ಹೈದರಾಲಿ ಯುದ್ದ ಮಾಡಿದ ಉದಾಹರಣೆಯಿದೆ. ಟಿಪ್ಪು ಯಾವ ಯುದ್ದದಲ್ಲಿ ಹೋರಾಡಿದ್ದಾನೆ. ಕಟ್ಟು ಕಥೆಗಳ ಮೂಲಕ ಟಿಪ್ಪುವನ್ನು ಕನ್ನಡದ ಹೋರಾಟಗಾರ ಎಂದು ಹೇಳುವುದನ್ನು ನಿಲ್ಲಿಸಿ ಎಂದು ಹೇಳಿದರು.

ಟಿಪ್ಪು ಪ್ರತಿಮೆಗೆ ತೀವ್ರ ವಿರೋಧ – ಕೊಡವರಿಗೆ ಅಪಮಾನ ಮಾಡಿದ್ದ ಟಿಪ್ಪು

ದೇವಾಲಯಗಳ ಮೇಲೆ ದಾಳಿ ಮಾಡಿದ್ದ ಟಿಪ್ಪುವಿನ ಪ್ರತಿಮೆಗೆ ರಾಜ್ಯದಲ್ಲಿ ಅವಕಾಶವಿಲ್ಲ. ಹೀಗೇ ಬಿಟ್ಟರೆ ಮೈಸೂರನ್ನು ನಜರಾಬಾದ್, ಹಾಸನವನ್ನು ಕೈಮಾಬಾದ್ ಎಂದು ಕರೆಯಲು ಮುಂದಾಗುತ್ತಾರೆ ಎಂದು ಟೀಕಿಸಿದರು.

ಕೂಡಲೇ ಗುಂಬಜ್ ಮಾದರಿಯ ಬಸ್ ತಂಗುದಾಣ ತೆರವುಗೊಳಿಸಿ – ಇದು ಪಾರಂಪರಿಕೆ ಶೈಲಿಯ ಸಂಕೇತವಲ್ಲ. ಮೈಸೂರು ಮಹಾನಗರಪಾಲಿಕೆ ಬಸ್ ತಂಗುದಾಣದಲ್ಲಿನ ಗುಂಬಜ್ ಅನ್ನು 3-4 ದಿನಗಳಲ್ಲಿ ತೆರವು ಮಾಡದಿದ್ದಲ್ಲಿ ನಾನೇ ತೆರವು ಮಾಡುವೆ. ವಿವೇಚನರಹಿತವಾಗಿ ಕೆಲವರು ಹೇಳಿಕೆ ನೀಡುತ್ತಿದ್ದಾರೆ ಎಂದು ಹೇಳಿದರು.

16 ರಿಂದ 19 ನೇ ಶತಮಾನದವರೆಗೆ ಭಾರತದಲ್ಲಿ ಮೊಘಲರ ಆಳ್ವಿಕೆಯಿತ್ತು. ಆಗ ಇಂಡೋಸಾಸೇ೯ನಿಕ್ ಶೈಲಿಯ ವಾಸ್ತುಶೈಲಿ ಭಾರತದಲ್ಲಿತ್ತು. ಪರ್ಶಿಯಾ, ಟರ್ಕಿ, ಮೊಘಲರು ಭಾರತದ ಮೇಲೆ ದಾಳಿ ನಡೆಸಿದರು. 19 ನೇ ಶತಮಾನದಲ್ಲಿ ಭಾರತ ಬ್ರಿಟಿಷರ್ ಆಳ್ವಿಕೆಯಲ್ಲಿತ್ತು. ಆಂಗ್ಲರ ಶೈಲಿಯ ವಾಸ್ತುಶೈಲಿ ಜಾರಿಗೆ ಬಂತು. ಹೀಗಾಗಿ ದೇಶದ ಅನೇಕ ಕಡೆ ಇಂಡೋಸಾಸೇ೯ನಿಕ್ ವಾಸ್ತುಶೈಲಿಯಿಂದ ಸ್ಪೂರ್ತಿ ಪಡೆದಿದೆ. ಬ್ರಿಟಿಷರ ಕಾಲದಲ್ಲಿ ನಿರ್ಮಾಣವಾದ ವಾಸ್ತುಶೈಲಿಯ ಕಟ್ಟಡಕ್ಕೂ ಗುಂಬಜ್ ಗಳಿಗೂ ಸಂಬಂಧ ಕಲ್ಪಿಸಬೇಡಿ ಎಂದು ಹೇಳಿದರು.

 

andolana

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

13 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

14 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

15 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

15 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

20 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

21 hours ago