ಜಿಲ್ಲೆಗಳು

ಟಿಪ್ಪು ವೈಭವೀಕರಣ ನಿಲ್ಲಿಸಿ ಟಿಪ್ಪು ವಿರುದ್ದ ಮತ್ತೆ ಕಿಡಿಕಾರಿದ ಪ್ರತಾಪ್ ಸಿಂಹ

ಕೊಡಗು : ಟಿಪ್ಪು ಯಾವ ಯುದ್ದದಲ್ಲಿ ಹೋರಾಡಿದ್ದ? ಹುಲಿ ಜತೆ ಪೋಸ್ ಕೊಡೋ ಫೋಟೋ ಹಾಕಿ ಟಿಪ್ಪು ವೈಭವೀಕರಣ ಮಾಡಬೇಡಿ. ಕನ್ನಡವನ್ನು ಕಗ್ಗೊಲೆ ಮಾಡಿದ ವ್ಯಕ್ತಿಯ ಪ್ರತಿಮೆ ಮಾಡುತ್ತೀರಾ ಎಂದು ಸಂಸದ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದರು.

ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಸಿದ್ದರಾಮಯ್ಯ ಕನ್ನಡ ಸಂಸ್ಕೖತಿ ಇಲಾಖೆ ಮೂಲಕ ಟಿಪ್ಪು ಜಯಂತಿ ಮಾಡಿಸಿದ್ದರು. ಇದು ಅರಣ್ಯ ಇಲಾಖೆಯು ವೀರಪ್ಪನ್ ಜಯಂತಿ ಮಾಡಿದಂತಾಗುತ್ತದೆ ಎಂದು ವ್ಯಂಗ್ಯವಾಡಿದರು.

ಯುದ್ದದಲ್ಲಿ ಟಿಪ್ಪು ರಾಕೇಟ್ ಬಳಕೆ ಮಾಡಿದ ಉದಾಹರಣೆಯೇ ಇಲ್ಲ. ಕ್ರೌರ್ಯಕ್ಕೆ ದ್ಯೋತಕವಾಗಿದ್ದಾನೆ ಟಿಪ್ಪು. ಕಾಗಕ್ಕ ಗುಬ್ಬಕ್ಕ ಕಥೆ ಕಟ್ಟಿ ಟಿಪ್ಪು ವೈಭವೀಕರಣ ಮಾಡಬೇಡಿ ಎಂದು ಆಕ್ರೋಶ ವ್ಯಕ್ತಪಡಿದರು.

ಯಾವ ಹುಲಿ ಜತೆ ಟಿಪ್ಪು ಹೋರಾಟ ಮಾಡಿದ್ದಾನೆ. ಮನುಷ್ಯ ಹುಲಿ ಜತೆ ಹೋರಾಟ ಮಾಡಲು ಸಾಧ್ಯವೇ? ಆಂಗ್ಲೋ ಮೈಸೂರು ಯುದ್ದದಲ್ಲಿ ಟಿಪ್ಪು ಮನೆಯಿಂದ ಹೊರಗಡೆಯೇ ಬರಲಿಲ್ಲ. ಹೈದರಾಲಿ ಯುದ್ದ ಮಾಡಿದ ಉದಾಹರಣೆಯಿದೆ. ಟಿಪ್ಪು ಯಾವ ಯುದ್ದದಲ್ಲಿ ಹೋರಾಡಿದ್ದಾನೆ. ಕಟ್ಟು ಕಥೆಗಳ ಮೂಲಕ ಟಿಪ್ಪುವನ್ನು ಕನ್ನಡದ ಹೋರಾಟಗಾರ ಎಂದು ಹೇಳುವುದನ್ನು ನಿಲ್ಲಿಸಿ ಎಂದು ಹೇಳಿದರು.

ಟಿಪ್ಪು ಪ್ರತಿಮೆಗೆ ತೀವ್ರ ವಿರೋಧ – ಕೊಡವರಿಗೆ ಅಪಮಾನ ಮಾಡಿದ್ದ ಟಿಪ್ಪು

ದೇವಾಲಯಗಳ ಮೇಲೆ ದಾಳಿ ಮಾಡಿದ್ದ ಟಿಪ್ಪುವಿನ ಪ್ರತಿಮೆಗೆ ರಾಜ್ಯದಲ್ಲಿ ಅವಕಾಶವಿಲ್ಲ. ಹೀಗೇ ಬಿಟ್ಟರೆ ಮೈಸೂರನ್ನು ನಜರಾಬಾದ್, ಹಾಸನವನ್ನು ಕೈಮಾಬಾದ್ ಎಂದು ಕರೆಯಲು ಮುಂದಾಗುತ್ತಾರೆ ಎಂದು ಟೀಕಿಸಿದರು.

ಕೂಡಲೇ ಗುಂಬಜ್ ಮಾದರಿಯ ಬಸ್ ತಂಗುದಾಣ ತೆರವುಗೊಳಿಸಿ – ಇದು ಪಾರಂಪರಿಕೆ ಶೈಲಿಯ ಸಂಕೇತವಲ್ಲ. ಮೈಸೂರು ಮಹಾನಗರಪಾಲಿಕೆ ಬಸ್ ತಂಗುದಾಣದಲ್ಲಿನ ಗುಂಬಜ್ ಅನ್ನು 3-4 ದಿನಗಳಲ್ಲಿ ತೆರವು ಮಾಡದಿದ್ದಲ್ಲಿ ನಾನೇ ತೆರವು ಮಾಡುವೆ. ವಿವೇಚನರಹಿತವಾಗಿ ಕೆಲವರು ಹೇಳಿಕೆ ನೀಡುತ್ತಿದ್ದಾರೆ ಎಂದು ಹೇಳಿದರು.

16 ರಿಂದ 19 ನೇ ಶತಮಾನದವರೆಗೆ ಭಾರತದಲ್ಲಿ ಮೊಘಲರ ಆಳ್ವಿಕೆಯಿತ್ತು. ಆಗ ಇಂಡೋಸಾಸೇ೯ನಿಕ್ ಶೈಲಿಯ ವಾಸ್ತುಶೈಲಿ ಭಾರತದಲ್ಲಿತ್ತು. ಪರ್ಶಿಯಾ, ಟರ್ಕಿ, ಮೊಘಲರು ಭಾರತದ ಮೇಲೆ ದಾಳಿ ನಡೆಸಿದರು. 19 ನೇ ಶತಮಾನದಲ್ಲಿ ಭಾರತ ಬ್ರಿಟಿಷರ್ ಆಳ್ವಿಕೆಯಲ್ಲಿತ್ತು. ಆಂಗ್ಲರ ಶೈಲಿಯ ವಾಸ್ತುಶೈಲಿ ಜಾರಿಗೆ ಬಂತು. ಹೀಗಾಗಿ ದೇಶದ ಅನೇಕ ಕಡೆ ಇಂಡೋಸಾಸೇ೯ನಿಕ್ ವಾಸ್ತುಶೈಲಿಯಿಂದ ಸ್ಪೂರ್ತಿ ಪಡೆದಿದೆ. ಬ್ರಿಟಿಷರ ಕಾಲದಲ್ಲಿ ನಿರ್ಮಾಣವಾದ ವಾಸ್ತುಶೈಲಿಯ ಕಟ್ಟಡಕ್ಕೂ ಗುಂಬಜ್ ಗಳಿಗೂ ಸಂಬಂಧ ಕಲ್ಪಿಸಬೇಡಿ ಎಂದು ಹೇಳಿದರು.

 

andolana

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

4 hours ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

5 hours ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

5 hours ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

5 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

15 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

15 hours ago