ಜಿಲ್ಲೆಗಳು

ಟಿಪ್ಪು ವೈಭವೀಕರಣ ನಿಲ್ಲಿಸಿ ಟಿಪ್ಪು ವಿರುದ್ದ ಮತ್ತೆ ಕಿಡಿಕಾರಿದ ಪ್ರತಾಪ್ ಸಿಂಹ

ಕೊಡಗು : ಟಿಪ್ಪು ಯಾವ ಯುದ್ದದಲ್ಲಿ ಹೋರಾಡಿದ್ದ? ಹುಲಿ ಜತೆ ಪೋಸ್ ಕೊಡೋ ಫೋಟೋ ಹಾಕಿ ಟಿಪ್ಪು ವೈಭವೀಕರಣ ಮಾಡಬೇಡಿ. ಕನ್ನಡವನ್ನು ಕಗ್ಗೊಲೆ ಮಾಡಿದ ವ್ಯಕ್ತಿಯ ಪ್ರತಿಮೆ ಮಾಡುತ್ತೀರಾ ಎಂದು ಸಂಸದ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದರು.

ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಸಿದ್ದರಾಮಯ್ಯ ಕನ್ನಡ ಸಂಸ್ಕೖತಿ ಇಲಾಖೆ ಮೂಲಕ ಟಿಪ್ಪು ಜಯಂತಿ ಮಾಡಿಸಿದ್ದರು. ಇದು ಅರಣ್ಯ ಇಲಾಖೆಯು ವೀರಪ್ಪನ್ ಜಯಂತಿ ಮಾಡಿದಂತಾಗುತ್ತದೆ ಎಂದು ವ್ಯಂಗ್ಯವಾಡಿದರು.

ಯುದ್ದದಲ್ಲಿ ಟಿಪ್ಪು ರಾಕೇಟ್ ಬಳಕೆ ಮಾಡಿದ ಉದಾಹರಣೆಯೇ ಇಲ್ಲ. ಕ್ರೌರ್ಯಕ್ಕೆ ದ್ಯೋತಕವಾಗಿದ್ದಾನೆ ಟಿಪ್ಪು. ಕಾಗಕ್ಕ ಗುಬ್ಬಕ್ಕ ಕಥೆ ಕಟ್ಟಿ ಟಿಪ್ಪು ವೈಭವೀಕರಣ ಮಾಡಬೇಡಿ ಎಂದು ಆಕ್ರೋಶ ವ್ಯಕ್ತಪಡಿದರು.

ಯಾವ ಹುಲಿ ಜತೆ ಟಿಪ್ಪು ಹೋರಾಟ ಮಾಡಿದ್ದಾನೆ. ಮನುಷ್ಯ ಹುಲಿ ಜತೆ ಹೋರಾಟ ಮಾಡಲು ಸಾಧ್ಯವೇ? ಆಂಗ್ಲೋ ಮೈಸೂರು ಯುದ್ದದಲ್ಲಿ ಟಿಪ್ಪು ಮನೆಯಿಂದ ಹೊರಗಡೆಯೇ ಬರಲಿಲ್ಲ. ಹೈದರಾಲಿ ಯುದ್ದ ಮಾಡಿದ ಉದಾಹರಣೆಯಿದೆ. ಟಿಪ್ಪು ಯಾವ ಯುದ್ದದಲ್ಲಿ ಹೋರಾಡಿದ್ದಾನೆ. ಕಟ್ಟು ಕಥೆಗಳ ಮೂಲಕ ಟಿಪ್ಪುವನ್ನು ಕನ್ನಡದ ಹೋರಾಟಗಾರ ಎಂದು ಹೇಳುವುದನ್ನು ನಿಲ್ಲಿಸಿ ಎಂದು ಹೇಳಿದರು.

ಟಿಪ್ಪು ಪ್ರತಿಮೆಗೆ ತೀವ್ರ ವಿರೋಧ – ಕೊಡವರಿಗೆ ಅಪಮಾನ ಮಾಡಿದ್ದ ಟಿಪ್ಪು

ದೇವಾಲಯಗಳ ಮೇಲೆ ದಾಳಿ ಮಾಡಿದ್ದ ಟಿಪ್ಪುವಿನ ಪ್ರತಿಮೆಗೆ ರಾಜ್ಯದಲ್ಲಿ ಅವಕಾಶವಿಲ್ಲ. ಹೀಗೇ ಬಿಟ್ಟರೆ ಮೈಸೂರನ್ನು ನಜರಾಬಾದ್, ಹಾಸನವನ್ನು ಕೈಮಾಬಾದ್ ಎಂದು ಕರೆಯಲು ಮುಂದಾಗುತ್ತಾರೆ ಎಂದು ಟೀಕಿಸಿದರು.

ಕೂಡಲೇ ಗುಂಬಜ್ ಮಾದರಿಯ ಬಸ್ ತಂಗುದಾಣ ತೆರವುಗೊಳಿಸಿ – ಇದು ಪಾರಂಪರಿಕೆ ಶೈಲಿಯ ಸಂಕೇತವಲ್ಲ. ಮೈಸೂರು ಮಹಾನಗರಪಾಲಿಕೆ ಬಸ್ ತಂಗುದಾಣದಲ್ಲಿನ ಗುಂಬಜ್ ಅನ್ನು 3-4 ದಿನಗಳಲ್ಲಿ ತೆರವು ಮಾಡದಿದ್ದಲ್ಲಿ ನಾನೇ ತೆರವು ಮಾಡುವೆ. ವಿವೇಚನರಹಿತವಾಗಿ ಕೆಲವರು ಹೇಳಿಕೆ ನೀಡುತ್ತಿದ್ದಾರೆ ಎಂದು ಹೇಳಿದರು.

16 ರಿಂದ 19 ನೇ ಶತಮಾನದವರೆಗೆ ಭಾರತದಲ್ಲಿ ಮೊಘಲರ ಆಳ್ವಿಕೆಯಿತ್ತು. ಆಗ ಇಂಡೋಸಾಸೇ೯ನಿಕ್ ಶೈಲಿಯ ವಾಸ್ತುಶೈಲಿ ಭಾರತದಲ್ಲಿತ್ತು. ಪರ್ಶಿಯಾ, ಟರ್ಕಿ, ಮೊಘಲರು ಭಾರತದ ಮೇಲೆ ದಾಳಿ ನಡೆಸಿದರು. 19 ನೇ ಶತಮಾನದಲ್ಲಿ ಭಾರತ ಬ್ರಿಟಿಷರ್ ಆಳ್ವಿಕೆಯಲ್ಲಿತ್ತು. ಆಂಗ್ಲರ ಶೈಲಿಯ ವಾಸ್ತುಶೈಲಿ ಜಾರಿಗೆ ಬಂತು. ಹೀಗಾಗಿ ದೇಶದ ಅನೇಕ ಕಡೆ ಇಂಡೋಸಾಸೇ೯ನಿಕ್ ವಾಸ್ತುಶೈಲಿಯಿಂದ ಸ್ಪೂರ್ತಿ ಪಡೆದಿದೆ. ಬ್ರಿಟಿಷರ ಕಾಲದಲ್ಲಿ ನಿರ್ಮಾಣವಾದ ವಾಸ್ತುಶೈಲಿಯ ಕಟ್ಟಡಕ್ಕೂ ಗುಂಬಜ್ ಗಳಿಗೂ ಸಂಬಂಧ ಕಲ್ಪಿಸಬೇಡಿ ಎಂದು ಹೇಳಿದರು.

 

andolana

Recent Posts

ಧಾರವಾಡ ಆಕಾಶವಾಣಿ ಕೇಂದ್ರ ಸ್ಥಳಾಂತರಿಸದಂತೆ ಅಶ್ವಿನಿ ವೈಷ್ಣವ್‌ ಆದೇಶ

ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ…

35 mins ago

ಮುರುಘಾ ಮಠದ ಆಸ್ತಿ ಕೇಸ್:‌ ಸುಪ್ರೀಂಕೋರ್ಟ್‌ನಿಂದ ರಾಜ್ಯ ಸರ್ಕಾರಕ್ಕೆ ನೋಟಿಸ್‌

ನವದೆಹಲಿ: ಮುರುಘಾ ಮಠದ ಆಸ್ತಿಯನ್ನು ಸರ್ಕಾರದ ವಶಕ್ಕೆ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ರಾಜ್ಯ ಸರ್ಕಾರಕ್ಕೆ…

48 mins ago

ತಮಿಳುನಾಡು ವಿಧಾನಸಭೆ ಚುನಾವಣೆ: ನಾಳೆ ಮತದಾನಕ್ಕೆ ಸಕಲ ಸಿದ್ಧತೆ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಗೆ ನಾಳೆ ಮತದಾನ ನಡೆಯಲಿದ್ದು, ರಾಜ್ಯದ ಒಟ್ಟು 234 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.…

59 mins ago

ಕೊಡಗಿನ ಹೋಂಸ್ಟೇನಲ್ಲಿ ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಇಬ್ಬರನ್ನು ಬಂಧಿಸಲಾಗಿದೆ: ಶಾಸಕ ಪೊನ್ನಣ್ಣ ಮಾಹಿತಿ

ಬೆಂಗಳೂರು: ಕೊಡಗಿನ ಹೋಂ ಸ್ಟೇನಲ್ಲಿ ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಇಬ್ಬರ ಬಂಧನ ಆಗಿದೆ ಎಂದು…

2 hours ago

ಹರ ಹರ ಮಹಾದೇವ ಘೋಷಣೆಯೊಂದಿಗೆ ಚಾರ್‌ ಧಾಮ್‌ ಯಾತ್ರೆ ಆರಂಭ

ಉತ್ತರಾಖಂಡ್:‌ ಇಲ್ಲಿನ ಪವಿತ್ರ ಚಾರ್‌ ಧಾಮ್‌ ಯಾತ್ರೆ ಇಂದಿನಿಂದ ಅಧಿಕೃತವಾಗಿ ಪ್ರಾರಂಭವಾಗಿದೆ. ಭಕ್ತರ ದರ್ಶನಕ್ಕಾಗಿ ಕೇದಾರನಾಥ ದೇವಾಲಯದ ದ್ವಾರಗಳನ್ನು ಇಂದು…

3 hours ago

ಗುಡುಮಾದನಹಳ್ಳಿ ರೈತರ ಪರ ನಿಂತ ಶಾಸಕ ದರ್ಶನ್ ಪುಟ್ಟಣ್ಣಯ್ಯ

ಮೈಸೂರು: ಕೃಷಿ ಭೂಮಿಯಲ್ಲಿ ನಿಮ್ಹಾನ್ಸ್‌ ಆಸ್ಪತ್ರೆ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರು ರೈತರ ಪರ ನಿಂತಿದ್ದು,…

3 hours ago