ಜಿಲ್ಲೆಗಳು

ಸಂಸದ ಪ್ರತಾಪ್ ಸಿಂಹಗೆ ಬುದ್ಧಿ ಹೇಳಿ : ಸಿಎಂ ಗೆ ರಾಮ್‌ದಾಸ್‌ ದೂರು

ಬೆಂಗಳೂರು-ಒಂದು ಧರ್ಮದ ವಿರುದ್ಧ ಅನಗತ್ಯವಾಗಿ ಪ್ರಚೋದನೆ ನೀಡುತ್ತಿರುವುದು ಹಾಗೂ ವಿವಾದಾತ್ಮಕ ಹೇಳಿಕೆಗಳನ್ನು ಕೊಡುತ್ತಿರುವ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರನ್ನು ಕರೆದು ಬುದ್ದಿ ಹೇಳಬೇಕೆಂದು ಶಾಸಕ ರಾಮದಾಸ್ ಅವರು ಮುಖ್ಯಮಂತ್ರಿಗಳಿಗೆ ದೂರು ನೀಡಿದ್ದಾರೆ.
ಬುಧವಾರ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಆರ್ .ಟಿ.
ನಗರದ ನಿವಾಸದಲ್ಲಿ
ಭೇಟಿ ಮಾಡಿದ ಮೈಸೂರಿನ ಕೃಷ್ಣರಾಜ ಕ್ಷೇತ್ರದ ಶಾಸಕರೂ ಆಗಿರುವ ರಾಮದಾಸ್, ಸಂಸದ ಪ್ರತಾಪ್ ಸಿಂಹ ಅವರಿಗೆ ಕಡಿವಾಣ ಹಾಕದಿದ್ದರೆ ಪಕ್ಷಕ್ಕೆ ಮಾರಕ ಆಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಗುಂಬಜ್ ಮಾದರಿಯ ಬಸ್ ನಿಲ್ದಾಣಗಳನ್ನು ತೆರವುಗೊಳಿಸದಿದ್ದರೆ ನಾನೇ ಒಡೆದು ಹಾಕುತ್ತೇನೆ ಎಂದು ಅವರು ಹೇಳಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ. ಮೈಸೂರು ಮಹಾರಾಜರು ಕಟ್ಟಿಸಿದ ಅರಮನೆ ತುದಿಯಲ್ಲಿ ಗುಂಬಜ್ ಮಾದರಿಯಿದೆ ಸಾರ್ವಜನಿಕರು ಇದನ್ನು ಕೂಡ ತೆರವುಗೊಳಿಸುತ್ತೀರ ಎಂದು ಪ್ರಶ್ನೆ ಮಾಡುತ್ತಿದ್ದಾರೆ. ಕರೆದು ಬುದ್ದಿವಾದ ಹೇಳಬೇಕೆಂದು ಮನವಿ ಮಾಡಿದ್ದಾರೆ.
ಈ ಹಿಂದೆಯೂ ಅವರು ಸಾಕಷ್ಟು ವಿವಾದಗಳನ್ನು ಮಾಡಿದಾಗ ಪಕ್ಷ ಮತ್ತು ಸರ್ಕಾರಕ್ಕೆ ಮುಜುಗರವಾಗಬಾರದೆದು ಮೌನಕ್ಕೆ ಶರಣಾಗಿದ್ದೆ. ಈಗ ಗುಂಬಜ್ ಮಾದರಿಯ ಬಸ್ ನಿಲ್ದಾಣವನ್ನು ಒಡೆದು ಹಾಕುತ್ತೇನೆ ಎಂದು ಹೇಳಿರುವುದು ಒಬ್ಬ ಜನಪ್ರತಿನಿಧಿಯಾಗಿ ಮಾಡುವ ಕೆಲಸ ಇದೇನಾ ಎಂದು ಸಿಎಂ ಬಳಿ ರಾಮ್‍ದಾಸ್ ಅಸಮಧಾನ ಹೊರಹಾಕಿದರು.
ಜಿಲ್ಲೆಯಾದ್ಯಂತ ಸಾಮಾಜಿಕ ಜಾಲತಾಣಗಳಲ್ಲಿ ಮೈಸೂರು ಅರಮನೆಯನ್ನು ಬಿಜೆಪಿ ಸರ್ಕಾರ ಒಡೆದು ಹಾಕುತ್ತದೆಯೇ? ದೇವಸ್ಥಾನ, ಗುಡಿಗೋಪುರಗಳ ಕೂಡ ಗುಂಬಜ್ ಮಾದರಿಯಲ್ಲೇ ಇವೆ.ಇದನ್ನು ಕೂಡ ಸರ್ಕಾರ ಕೆಡವಿ ಹಾಕಲಿ ಎಂದು ಅಭಿಯಾನ ನಡೆಸುತ್ತಿದ್ದಾರೆ. ನಾವು ಉತ್ತರ ಕೊಡುವುದು ಕಷ್ಟವಾಗಿದೆ ಎಂದು ಹೇಳಿರುವುದಾಗಿ ಗೊತ್ತಾಗಿದೆ.
ಸುಖಾಸುಮ್ಮನೆ ಅವರು ವಿವಾದವನ್ನು ಎಳೆದುಕೊಳ್ಳುತ್ತಾರೆ. ಹಿಂದೆ ಟಿಪ್ಪು ಜಯಂತಿ, ಸಿಎಎ ವಿರುದ್ಧದ ಹೋರಾಟದಲ್ಲೂ ಒಂದು ಸಮುದಾಯವನ್ನು ಗುರಿಯಾಗಿಟ್ಟುಕೊಂಡು ತುಚ್ಛವಾಗಿ ಮಾತನಾಡಿದರು.
ಮೈಸೂರಿನ ಜನತೆ ಹೇಳಿಕೇಳಿ ಶಾಂತಿಪ್ರಿಯರು. ಕೋಮುಗಲಭೆ, ಹಿಂದೂ ಮತಗಳ ಧ್ರುವೀಕರಣಕ್ಕೂ ಅವಕಾಶ ಕೊಡುವುದಿಲ್ಲ. ಸಂಸದರಾಗಿ ಅವರು ಮಾಡಬೇಕಾದ ಕೆಲಸಗಳು ಸಾಕಷ್ಟಿವೆ ಈ ರೀತಿ ಮಾತನಾಡುವುದು ಅವರಿಗೆ ಶೋಭೆ ತರುವುದಿಲ್ಲ. ತಕ್ಷಣವೇ ಅವರನ್ನು ಕರೆಸಿ ಮಾತನಾಡಬೇಕೆಂದು ರಾಮ್‍ದಾಸ್ ಭಿನ್ನವಿಸಿಕೊಂಡರು.
ನಾನು ಆದಷ್ಟು ಶೀಘ್ರ ಪ್ರತಾಪ್ ಸಿಂಹ ಬಳಿ ಮಾತನಾಡುವೆ. ವಿವಾದ ಏಕಾಯಿತು ಎಂಬುದರ ಬಗ್ಗೆ ಮಾಹಿತಿ ಪಡೆಯುತ್ತೇನೆ. ಪಕ್ಷದ ಚೌಕಟ್ಟು ಯಾರು ಕೂಡ ಮೀರಬಾರದು. ಅಗತ್ಯವಿದ್ದರೆ ನಾನು ಮತ್ತು ಪಕ್ಷದ ಅಧ್ಯಕ್ಷರು, ಅವರನ್ನು ಕರೆಸಿಕೊಂಡು ಬುದ್ದಿ ಹೇಳುವ ಕೆಲಸ ಮಾಡುತ್ತೇವೆ ಎಂದು ಬೊಮ್ಮಾಯಿ ಅಭಯ ನೀಡಿದ್ದಾರೆ.
ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸಂಸದ ಪ್ರತಾಪ್ ಸಿಂಹ, ಗುಂಬಜ್ ಮಾದರಿಯ ಬಸ್ ನಿಲ್ದಾಣಗಳನ್ನು ತೆರವುಗೊಳಿಸಬೇಕು. ಇಲ್ಲದಿದ್ದರೆ ಒಡೆದು ಹಾಕಲಾಗುವುದು ಎಂದು ಎಚ್ಚರಿಸಿದ್ದರು. ಅವರ ಈ ಹೇಳಿಕೆ ಇದೀಗ ಒಂದು ಸಮುದಾಯದವರು ಕಣ್ಣು ಕೆಂಪಾಗುವಂತೆ ಮಾಡಿದೆ.
ಅಲ್ಲದೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರಕ್ಕೂ ಕಾರಣವಾಗಿದೆ.

andolanait

Recent Posts

ಮೈಸೂರಿನಲ್ಲೇ ಗಾಂಜಾ ಕೇಸು ಜಾಸ್ತಿ ಯಾಕೆ.? ಹೈಕೋರ್ಟ್‌ ಕಳವಳ

ಬೆಂಗಳೂರು: ಲೋಕ್‌ ಅದಾಲತ್‌ನಲ್ಲಿ ಗಾಂಜಾ ಆರೋಪದ ಕೇಸುಗಳನ್ನು ಸೆಟಲ್‌ ಮಾಡಲಾಗುತ್ತದೆಯೇ ಎಂದು ಹೈಕೋರ್ಟ್‌ ತೀವ್ರ ಆಶ್ಚರ್ಯ ವ್ಯಕ್ತಪಡಿಸಿದೆ. ಗಾಂಜಾ ಮಾರಾಟದ…

14 mins ago

ಮಡಿಕೇರಿ| ಜಿಪ್ಸಿ ವಾಹನ ವಶಪಡಿಸಿಕೊಂಡ ಪೊಲೀಸರು: ಕಾರಣ ಏನ್‌ ಗೊತ್ತಾ?

ಮಡಿಕೇರಿ: ಅನಧಿಕೃತವಾಗಿ ವಾಹನದ ಸ್ವರೂಪ ಬದಲಾಯಿಸಿಕೊಂಡು ಕರ್ಕಶ ಶಬ್ಧದ ಸೈಲೆನ್ಸರ್‌ ಅಳವಡಿಸಿಕೊಂಡು ಸಾರ್ವಜನಿಕರಿಗೆ ಭಾರೀ ಕಿರಿಕಿರಿ ಮಾಡುತ್ತಿದ್ದ ಜಿಪ್ಸಿ ವಾಹನವೊಂದನ್ನು…

2 hours ago

ರಸ್ತೆ ಮಧ್ಯೆ ಪುಂಡರ ವ್ಹೀಲಿಂಗ್:‌ ವಿಡಿಯೋ ವೈರಲ್‌

ಹಾಸನ: ಪುಂಡರಿಬ್ಬರು ವ್ಹೀಲಿಂಗ್‌ ಮಾಡಿ ವಾಹನ ಸವಾರರಿಗೆ ಕಿರಿಕಿರಿ ಉಂಟು ಮಾಡಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಮುದುಡಿ ರಸ್ತೆಯಲ್ಲಿ…

2 hours ago

ಚಾರ್ಮಾಡಿ ಘಾಟ್‌ ಅರಣ್ಯದಲ್ಲಿ ಮತ್ತೆ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯ ನಾಶ

ಚಿಕ್ಕಮಗಳೂರು: ಚಾರ್ಮಾಡಿ ಅರಣ್ಯದಲ್ಲಿ ಭಾರೀ ಬೆಂಕಿ ಅನಾಹುತವಾಗಿದ್ದು, ಸೂಕ್ಷ್ಮ ಹುಲ್ಲುಗಾವಲು ಬೆಂಕಿಯಲ್ಲಿ ಭಸ್ಮವಾಗಿದೆ. ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಸಮೀಪವಿರುವ ಚಾರ್ಮಾಡಿ…

2 hours ago

ವಿರಾಜಪೇಟೆ| ಮಣ್ಣು ಕುಸಿದು ಟಿಪ್ಪರ್ ಚಾಲಕ ಸಾವು

ವಿರಾಜಪೇಟೆ: ಟಿಪ್ಪರ್ ಮೇಲೆ ಮಣ್ಣು ಕುಸಿದು ಚಾಲಕ ಮೃತಪಟ್ಟಿದ್ದು, ಮತ್ತೋರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿರಾಜಪೇಟೆಯ ಕದನೂರಿನಲ್ಲಿ ನಡೆದಿದೆ.…

3 hours ago

ಕುಶಾಲನಗರ| ಕಳಪೆ ಕಾಮಗಾರಿಗೆ ಶಾಸಕ ಡಾ.ಮಂಥರ್ ಗೌಡ ಅಸಮಾಧಾನ

ಕುಶಾಲನಗರ: ಪುರಸಭೆ ವ್ಯಾಪ್ತಿಯ ಎರಡನೇ ವಾರ್ಡ್‌ನ ನಿಂಗೇಗೌಡ ಬಡಾವಣೆಯ ರಸ್ತೆಯ ಕಾಮಗಾರಿ ಉದ್ಘಾಟನೆಗೆ ಬಂದ ಶಾಸಕರು ಕಾಮಗಾರಿ ವೀಕ್ಷಿಸಿ ಅತೃಪ್ತಗೊಂಡು…

3 hours ago