ಜಿಲ್ಲೆಗಳು

ಸಂಸದ ಪ್ರತಾಪ್ ಸಿಂಹಗೆ ಬುದ್ಧಿ ಹೇಳಿ : ಸಿಎಂ ಗೆ ರಾಮ್‌ದಾಸ್‌ ದೂರು

ಬೆಂಗಳೂರು-ಒಂದು ಧರ್ಮದ ವಿರುದ್ಧ ಅನಗತ್ಯವಾಗಿ ಪ್ರಚೋದನೆ ನೀಡುತ್ತಿರುವುದು ಹಾಗೂ ವಿವಾದಾತ್ಮಕ ಹೇಳಿಕೆಗಳನ್ನು ಕೊಡುತ್ತಿರುವ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರನ್ನು ಕರೆದು ಬುದ್ದಿ ಹೇಳಬೇಕೆಂದು ಶಾಸಕ ರಾಮದಾಸ್ ಅವರು ಮುಖ್ಯಮಂತ್ರಿಗಳಿಗೆ ದೂರು ನೀಡಿದ್ದಾರೆ.
ಬುಧವಾರ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಆರ್ .ಟಿ.
ನಗರದ ನಿವಾಸದಲ್ಲಿ
ಭೇಟಿ ಮಾಡಿದ ಮೈಸೂರಿನ ಕೃಷ್ಣರಾಜ ಕ್ಷೇತ್ರದ ಶಾಸಕರೂ ಆಗಿರುವ ರಾಮದಾಸ್, ಸಂಸದ ಪ್ರತಾಪ್ ಸಿಂಹ ಅವರಿಗೆ ಕಡಿವಾಣ ಹಾಕದಿದ್ದರೆ ಪಕ್ಷಕ್ಕೆ ಮಾರಕ ಆಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಗುಂಬಜ್ ಮಾದರಿಯ ಬಸ್ ನಿಲ್ದಾಣಗಳನ್ನು ತೆರವುಗೊಳಿಸದಿದ್ದರೆ ನಾನೇ ಒಡೆದು ಹಾಕುತ್ತೇನೆ ಎಂದು ಅವರು ಹೇಳಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ. ಮೈಸೂರು ಮಹಾರಾಜರು ಕಟ್ಟಿಸಿದ ಅರಮನೆ ತುದಿಯಲ್ಲಿ ಗುಂಬಜ್ ಮಾದರಿಯಿದೆ ಸಾರ್ವಜನಿಕರು ಇದನ್ನು ಕೂಡ ತೆರವುಗೊಳಿಸುತ್ತೀರ ಎಂದು ಪ್ರಶ್ನೆ ಮಾಡುತ್ತಿದ್ದಾರೆ. ಕರೆದು ಬುದ್ದಿವಾದ ಹೇಳಬೇಕೆಂದು ಮನವಿ ಮಾಡಿದ್ದಾರೆ.
ಈ ಹಿಂದೆಯೂ ಅವರು ಸಾಕಷ್ಟು ವಿವಾದಗಳನ್ನು ಮಾಡಿದಾಗ ಪಕ್ಷ ಮತ್ತು ಸರ್ಕಾರಕ್ಕೆ ಮುಜುಗರವಾಗಬಾರದೆದು ಮೌನಕ್ಕೆ ಶರಣಾಗಿದ್ದೆ. ಈಗ ಗುಂಬಜ್ ಮಾದರಿಯ ಬಸ್ ನಿಲ್ದಾಣವನ್ನು ಒಡೆದು ಹಾಕುತ್ತೇನೆ ಎಂದು ಹೇಳಿರುವುದು ಒಬ್ಬ ಜನಪ್ರತಿನಿಧಿಯಾಗಿ ಮಾಡುವ ಕೆಲಸ ಇದೇನಾ ಎಂದು ಸಿಎಂ ಬಳಿ ರಾಮ್‍ದಾಸ್ ಅಸಮಧಾನ ಹೊರಹಾಕಿದರು.
ಜಿಲ್ಲೆಯಾದ್ಯಂತ ಸಾಮಾಜಿಕ ಜಾಲತಾಣಗಳಲ್ಲಿ ಮೈಸೂರು ಅರಮನೆಯನ್ನು ಬಿಜೆಪಿ ಸರ್ಕಾರ ಒಡೆದು ಹಾಕುತ್ತದೆಯೇ? ದೇವಸ್ಥಾನ, ಗುಡಿಗೋಪುರಗಳ ಕೂಡ ಗುಂಬಜ್ ಮಾದರಿಯಲ್ಲೇ ಇವೆ.ಇದನ್ನು ಕೂಡ ಸರ್ಕಾರ ಕೆಡವಿ ಹಾಕಲಿ ಎಂದು ಅಭಿಯಾನ ನಡೆಸುತ್ತಿದ್ದಾರೆ. ನಾವು ಉತ್ತರ ಕೊಡುವುದು ಕಷ್ಟವಾಗಿದೆ ಎಂದು ಹೇಳಿರುವುದಾಗಿ ಗೊತ್ತಾಗಿದೆ.
ಸುಖಾಸುಮ್ಮನೆ ಅವರು ವಿವಾದವನ್ನು ಎಳೆದುಕೊಳ್ಳುತ್ತಾರೆ. ಹಿಂದೆ ಟಿಪ್ಪು ಜಯಂತಿ, ಸಿಎಎ ವಿರುದ್ಧದ ಹೋರಾಟದಲ್ಲೂ ಒಂದು ಸಮುದಾಯವನ್ನು ಗುರಿಯಾಗಿಟ್ಟುಕೊಂಡು ತುಚ್ಛವಾಗಿ ಮಾತನಾಡಿದರು.
ಮೈಸೂರಿನ ಜನತೆ ಹೇಳಿಕೇಳಿ ಶಾಂತಿಪ್ರಿಯರು. ಕೋಮುಗಲಭೆ, ಹಿಂದೂ ಮತಗಳ ಧ್ರುವೀಕರಣಕ್ಕೂ ಅವಕಾಶ ಕೊಡುವುದಿಲ್ಲ. ಸಂಸದರಾಗಿ ಅವರು ಮಾಡಬೇಕಾದ ಕೆಲಸಗಳು ಸಾಕಷ್ಟಿವೆ ಈ ರೀತಿ ಮಾತನಾಡುವುದು ಅವರಿಗೆ ಶೋಭೆ ತರುವುದಿಲ್ಲ. ತಕ್ಷಣವೇ ಅವರನ್ನು ಕರೆಸಿ ಮಾತನಾಡಬೇಕೆಂದು ರಾಮ್‍ದಾಸ್ ಭಿನ್ನವಿಸಿಕೊಂಡರು.
ನಾನು ಆದಷ್ಟು ಶೀಘ್ರ ಪ್ರತಾಪ್ ಸಿಂಹ ಬಳಿ ಮಾತನಾಡುವೆ. ವಿವಾದ ಏಕಾಯಿತು ಎಂಬುದರ ಬಗ್ಗೆ ಮಾಹಿತಿ ಪಡೆಯುತ್ತೇನೆ. ಪಕ್ಷದ ಚೌಕಟ್ಟು ಯಾರು ಕೂಡ ಮೀರಬಾರದು. ಅಗತ್ಯವಿದ್ದರೆ ನಾನು ಮತ್ತು ಪಕ್ಷದ ಅಧ್ಯಕ್ಷರು, ಅವರನ್ನು ಕರೆಸಿಕೊಂಡು ಬುದ್ದಿ ಹೇಳುವ ಕೆಲಸ ಮಾಡುತ್ತೇವೆ ಎಂದು ಬೊಮ್ಮಾಯಿ ಅಭಯ ನೀಡಿದ್ದಾರೆ.
ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸಂಸದ ಪ್ರತಾಪ್ ಸಿಂಹ, ಗುಂಬಜ್ ಮಾದರಿಯ ಬಸ್ ನಿಲ್ದಾಣಗಳನ್ನು ತೆರವುಗೊಳಿಸಬೇಕು. ಇಲ್ಲದಿದ್ದರೆ ಒಡೆದು ಹಾಕಲಾಗುವುದು ಎಂದು ಎಚ್ಚರಿಸಿದ್ದರು. ಅವರ ಈ ಹೇಳಿಕೆ ಇದೀಗ ಒಂದು ಸಮುದಾಯದವರು ಕಣ್ಣು ಕೆಂಪಾಗುವಂತೆ ಮಾಡಿದೆ.
ಅಲ್ಲದೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರಕ್ಕೂ ಕಾರಣವಾಗಿದೆ.

andolanait

Recent Posts

ಕಾಕ್ರೋಚ್‌ ಪ್ರತಿಭಟನೆ ; ವಿದ್ಯಾರ್ಥಿಗಳ ರಕ್ಷಣೆಗೆ ಪೊಲೀಸ್‌ ವ್ಯಾನ್‌ ತಡೆದ ಜೇನ್‌-ಝಿ ಕಿಡ್‌

ಮುಂಬೈ : ನೀಟ್‌ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…

8 hours ago

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

21 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

21 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

21 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

21 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

21 hours ago