ಜಿಲ್ಲೆಗಳು

ಪ್ರತಾಪ್ ಸಿಂಹಗೆ ಮೊಟ್ಟೆ ನೀಡಲು ಮುಂದಾದ ಯುವ ಕಾಂಗ್ರೆಸ್ ಕಾರ್ಯಕರ್ತರು

ಮೈಸೂರು: ಕೊಡಗಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಮೊಟ್ಟೆ ಹೊಡೆದ ಹಿನ್ನಲೆಯಲ್ಲಿ ಮೈಸೂರು ನಗರ ಯುವ ಕಾಂಗ್ರೆಸ್ ಕಾರ್ಯಕರ್ತರು ಭಾನುವಾರ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಸದಸ್ಯರಾದ ಪ್ರತಾಪ್ ಸಿಂಹ ಅವರ ಮನೆ ಮುಂದೆ ಜಮಾಯಿಸಿ ಮೊಟ್ಟೆ ನೀಡಲು ಮುಂದಾದರು.

ವಿಜಯನಗರ ೩ನೇ ಹಂತದಲ್ಲಿರುವ ಸಂಸದ ಪ್ರತಾಪ್ ಸಿಂಹ ಅವರ ಮನೆ ಮುಂದೆ ದಾಂಗುಡಿಯಿಟ್ಟ ಕಾಂಗ್ರೆಸ್ ಯುವ ಮುಖಂಡ ಪವನ್, ಚಾಮರಾಜ ಕ್ಷೇತ್ರದ ದೇವರಾಜ ಬ್ಲಾಕ್ ಅಧ್ಯಕ್ಷ ಚಂದ್ರು, ಯುವ ಕಾಂಗ್ರೆಸ್ ಮೈಸೂರು ನಗರ ಉಪಾಧ್ಯಕ್ಷ ಅಬ್ರಹಾರ್, ನಿಶಾಂತ್, ಯಶವಂತ, ಸಂಜಯ್, ವಿನೋದ್, ಮದನ್ ಮೊಟ್ಟೆ ಇರಿಸಿದ ಒಂದು ಟ್ರೇ ಅನ್ನು ನೀಡಲು ಮುಂದಾದರು.

‘ನಮ್ಮ ಸಿದ್ದರಾಮಯ್ಯ ಸರ್ಕಾರದಲ್ಲಿ ಮಕ್ಕಳಿಗೆ ಪೌಷ್ಟಿಕಾಹಾರದ ರೂಪವಾಗಿ ಮೊಟ್ಟೆ ಭಾಗ್ಯ ನೀಡಿದರು. ಆದರೆ, ಕೊಡಗಿನ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಹೊಡೆದು ಅದರ ಅರ್ಥ ಕಳೆದಿದ್ದಾರೆ. ಅದನ್ನು ತಿಳಿಯಪಡಿಸಲೆಂದೇ ಸಂಸದರ ಮನೆಗೆ ಬಂದಿದ್ದೇವೆ ಹೊರತು ಪ್ರತಿಭಟನೆಗಲ್ಲ. ನಾವು ತಂದಿರುವ ಮೊಟ್ಟೆ ಸ್ವೀಕರಿಸಬೇಕು’ ಎಂದು ಕೋರಿದರು. ಬಳಿಕ ಪೊಲೀಸರು ಅಡ್ಡಗಟ್ಟಿ ಇಡೀ ತಂಡವನ್ನು ಸ್ಥಳದಿಂದ ಹೊರ ಕಳುಹಿಸಿದರು.

andolanait

Recent Posts

ಪ್ರೇಮಿಗಳ ಆತ್ಮಹತ್ಯೆ ; ಪೊನ್ನಾಚಿ ಗ್ರಾಮದಲ್ಲಿ ದುರಂತ

ಹನೂರು : ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ ಇಬ್ಬರು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಹನೂರು…

1 hour ago

ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷೆ ಮೀರಿ ಜನಬೆಂಬಲ: ಸಿಎಂ ಸಿದ್ದರಾಮಯ್ಯ

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ…

2 hours ago

ಎಲ್ಲಾ ರಾಜ್ಯದಲ್ಲೂ ದ್ವಿಭಾಷಾ ಶಿಕ್ಷಣದ ವ್ಯವಸ್ಥೆ ಜಾರಿಯಲ್ಲಿದೆ: ಸಚಿವ ಮಧುಬಂಗಾರಪ್ಪ

ಬೆಂಗಳೂರು: ಎಲ್ಲಾ ರಾಜ್ಯದಲ್ಲೂ ದ್ವಿಭಾಷಾ ಶಿಕ್ಷಣದ ವ್ಯವಸ್ಥೆ ಜಾರಿಯಲ್ಲಿದೆ ಎಂದು ಶಾಲಾ ಶಿಕ್ಷಣ ಸಾಕ್ಷರತಾ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು,…

3 hours ago

ಬೇಸಿಗೆಯ ಉಷ್ಣತೆ ಹೆಚ್ಚಾದಂತೆ ರಾಜ್ಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ

ಬೆಂಗಳೂರು: ಬೇಸಿಗೆಯ ಉಷ್ಣತೆ ಹೆಚ್ಚಾದಂತೆ ರಾಜ್ಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಯಿದೆ ಎಂದು ರಾಜ್ಯ ಮಟ್ಟದ ಹವಾಮಾನ ವೀಕ್ಷಣಾ…

3 hours ago

ಹನೂರು: ಪಾಲಾರ್ ಚೆಕ್‌ಪೋಸ್ಟ್‌ನಲ್ಲಿ ಒಂಟಿಸಲಗ ದಾಂಧಲೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಂತರರಾಜ್ಯ ಪಾಲಾರ್ ಚೆಕ್‌ಪೋಸ್ಟ್‌ನಲ್ಲಿ ಒಂಟಿ ಸಲಗದ ದಾಂಧಲೆಗೆ ಅರಣ್ಯ…

3 hours ago

ಕಾನೂನು ಸುವ್ಯವಸ್ಥೆಗೂ ಜಿಡಿಪಿಗೂ ನೇರ ಸಂಬಂಧವಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸೈಬರ್ ಅಪರಾಧಗಳು ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಿ ಎಂದು…

5 hours ago