ಜಿಲ್ಲೆಗಳು

ಪ್ರತಾಪ್ ಸಿಂಹಗೆ ಮೊಟ್ಟೆ ನೀಡಲು ಮುಂದಾದ ಯುವ ಕಾಂಗ್ರೆಸ್ ಕಾರ್ಯಕರ್ತರು

ಮೈಸೂರು: ಕೊಡಗಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಮೊಟ್ಟೆ ಹೊಡೆದ ಹಿನ್ನಲೆಯಲ್ಲಿ ಮೈಸೂರು ನಗರ ಯುವ ಕಾಂಗ್ರೆಸ್ ಕಾರ್ಯಕರ್ತರು ಭಾನುವಾರ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಸದಸ್ಯರಾದ ಪ್ರತಾಪ್ ಸಿಂಹ ಅವರ ಮನೆ ಮುಂದೆ ಜಮಾಯಿಸಿ ಮೊಟ್ಟೆ ನೀಡಲು ಮುಂದಾದರು.

ವಿಜಯನಗರ ೩ನೇ ಹಂತದಲ್ಲಿರುವ ಸಂಸದ ಪ್ರತಾಪ್ ಸಿಂಹ ಅವರ ಮನೆ ಮುಂದೆ ದಾಂಗುಡಿಯಿಟ್ಟ ಕಾಂಗ್ರೆಸ್ ಯುವ ಮುಖಂಡ ಪವನ್, ಚಾಮರಾಜ ಕ್ಷೇತ್ರದ ದೇವರಾಜ ಬ್ಲಾಕ್ ಅಧ್ಯಕ್ಷ ಚಂದ್ರು, ಯುವ ಕಾಂಗ್ರೆಸ್ ಮೈಸೂರು ನಗರ ಉಪಾಧ್ಯಕ್ಷ ಅಬ್ರಹಾರ್, ನಿಶಾಂತ್, ಯಶವಂತ, ಸಂಜಯ್, ವಿನೋದ್, ಮದನ್ ಮೊಟ್ಟೆ ಇರಿಸಿದ ಒಂದು ಟ್ರೇ ಅನ್ನು ನೀಡಲು ಮುಂದಾದರು.

‘ನಮ್ಮ ಸಿದ್ದರಾಮಯ್ಯ ಸರ್ಕಾರದಲ್ಲಿ ಮಕ್ಕಳಿಗೆ ಪೌಷ್ಟಿಕಾಹಾರದ ರೂಪವಾಗಿ ಮೊಟ್ಟೆ ಭಾಗ್ಯ ನೀಡಿದರು. ಆದರೆ, ಕೊಡಗಿನ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಹೊಡೆದು ಅದರ ಅರ್ಥ ಕಳೆದಿದ್ದಾರೆ. ಅದನ್ನು ತಿಳಿಯಪಡಿಸಲೆಂದೇ ಸಂಸದರ ಮನೆಗೆ ಬಂದಿದ್ದೇವೆ ಹೊರತು ಪ್ರತಿಭಟನೆಗಲ್ಲ. ನಾವು ತಂದಿರುವ ಮೊಟ್ಟೆ ಸ್ವೀಕರಿಸಬೇಕು’ ಎಂದು ಕೋರಿದರು. ಬಳಿಕ ಪೊಲೀಸರು ಅಡ್ಡಗಟ್ಟಿ ಇಡೀ ತಂಡವನ್ನು ಸ್ಥಳದಿಂದ ಹೊರ ಕಳುಹಿಸಿದರು.

andolanait

Recent Posts

ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷಗಳು ಸಜ್ಜು

ಬೆಂಗಳೂರು: ನಾಯಕತ್ವ ಬದಲಾವಣೆ ಗೊಂದಲ, ಸರ್ಕಾರದಲ್ಲಿ ಶೇಕಡಾ.63 ರ್ಷಟು ಕಮಿಷನ್‌ ಕುರಿತು ಉಪಲೋಕಾಯುಕ್ತರ ಹೇಳಿಕೆ, ವಿವಿಧ ಇಲಾಖೆಗಳಲ್ಲಿ ನಡೆದಿರುವ ಭ್ರಷ್ಟಾಚಾರ…

4 mins ago

ಕಾವೇರಿ ನದಿ ಪಾತ್ರಕ್ಕೆ ಮಾರಕವಾದ ಪ್ರವಾಸೋದ್ಯಮ

ರಾಜ್ಯದಲ್ಲಿ ರಿಯಲ್ ಎಸ್ಟೇಟ್ ಉದ್ಯಮ ಗರಿಗೆದರಿದ ಬಳಿಕ ಅಲ್ಲಲ್ಲಿ ಕೆರೆ-ಕಟ್ಟೆ, ಸರ್ಕಾರಿ ಜಾಗಗಳ ಒತ್ತುವರಿ ಪ್ರಕರಣ ಮೇಲಿಂದ ಮೇಲೆ ಭಾರೀ…

31 mins ago

ಅಧಿಕಾರ ಹಂಚಿಕೆ ಗೊಂದಲ; ಬಿಜೆಪಿ, ಜಾ.ದಳದಲ್ಲಿ ಆತ್ಮವಿಶ್ವಾಸ ಹೆಚ್ಚಳ

ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ವಿದ್ಯಮಾನಗಳಿಗೆ ಕಾರಣವಾಯಿತೇ ಹೈಕಮಾಂಡ್ ಮೌನ? ರಾಜ್ಯ ಕಾಂಗ್ರೆಸ್‌ನಲ್ಲಿ ಮುಂದುವರಿದಿರುವ ಗೊಂದಲ ಬಿಜೆಪಿ ಮತ್ತು ಜಾ.ದಳ ಪಾಳೆಯಗಳ ಆತ್ಮವಿಶ್ವಾಸ…

47 mins ago

ಕೊಡವ ಕೌಟುಂಬಿಕ ಕ್ರಿಕೆಟ್‌ ಉತ್ಸವಕ್ಕೆ ಸಿದ್ಧತೆ

ಏ.೨ರಿಂದ ೨೮ ದಿನಗಳ ಕಾಲ ನಡೆಯಲಿರುವ ಪಂದ್ಯಾವಳಿ; ೩೦೦ಕ್ಕೂ ಅಧಿಕ ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ  ಮಡಿಕೇರಿ:ಕೊಡವ ಕ್ರಿಕೆಟ್ ಅಕಾಡೆಮಿ ಸಹಯೋಗದಲ್ಲಿ…

1 hour ago

ಹೊರವಲಯದ ನಿವೇಶನಗಳಿಗೆ ಹೆಚ್ಚಾಗಲಿದೆ ಮತ್ತಷ್ಟು ಬೇಡಿಕೆ

ಮೈಸೂರು: ನಗರದ ಹೊರವಲಯದ ನಾಲ್ಕು ದಿಕ್ಕುಗಳಲ್ಲಿರುವ ಹಲವು ಪ್ರದೇಶಗಳನ್ನು ಸೇರಿಸಿ ಗ್ರೇಡ್- ೧ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚಿಸಲು ರಾಜ್ಯಸರ್ಕಾರ…

1 hour ago

ಶಿವಾನಂದಪುರಿ ಶ್ರೀಗಳಿಗೆ ಕನಕ ಭವನ ನಿರ್ವಹಣೆ ಹೊಣೆ

ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…

4 hours ago