ಮೈಸೂರು: ಕೊಡಗಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಮೊಟ್ಟೆ ಹೊಡೆದ ಹಿನ್ನಲೆಯಲ್ಲಿ ಮೈಸೂರು ನಗರ ಯುವ ಕಾಂಗ್ರೆಸ್ ಕಾರ್ಯಕರ್ತರು ಭಾನುವಾರ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಸದಸ್ಯರಾದ ಪ್ರತಾಪ್ ಸಿಂಹ ಅವರ ಮನೆ ಮುಂದೆ ಜಮಾಯಿಸಿ ಮೊಟ್ಟೆ ನೀಡಲು ಮುಂದಾದರು.
ವಿಜಯನಗರ ೩ನೇ ಹಂತದಲ್ಲಿರುವ ಸಂಸದ ಪ್ರತಾಪ್ ಸಿಂಹ ಅವರ ಮನೆ ಮುಂದೆ ದಾಂಗುಡಿಯಿಟ್ಟ ಕಾಂಗ್ರೆಸ್ ಯುವ ಮುಖಂಡ ಪವನ್, ಚಾಮರಾಜ ಕ್ಷೇತ್ರದ ದೇವರಾಜ ಬ್ಲಾಕ್ ಅಧ್ಯಕ್ಷ ಚಂದ್ರು, ಯುವ ಕಾಂಗ್ರೆಸ್ ಮೈಸೂರು ನಗರ ಉಪಾಧ್ಯಕ್ಷ ಅಬ್ರಹಾರ್, ನಿಶಾಂತ್, ಯಶವಂತ, ಸಂಜಯ್, ವಿನೋದ್, ಮದನ್ ಮೊಟ್ಟೆ ಇರಿಸಿದ ಒಂದು ಟ್ರೇ ಅನ್ನು ನೀಡಲು ಮುಂದಾದರು.
‘ನಮ್ಮ ಸಿದ್ದರಾಮಯ್ಯ ಸರ್ಕಾರದಲ್ಲಿ ಮಕ್ಕಳಿಗೆ ಪೌಷ್ಟಿಕಾಹಾರದ ರೂಪವಾಗಿ ಮೊಟ್ಟೆ ಭಾಗ್ಯ ನೀಡಿದರು. ಆದರೆ, ಕೊಡಗಿನ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಹೊಡೆದು ಅದರ ಅರ್ಥ ಕಳೆದಿದ್ದಾರೆ. ಅದನ್ನು ತಿಳಿಯಪಡಿಸಲೆಂದೇ ಸಂಸದರ ಮನೆಗೆ ಬಂದಿದ್ದೇವೆ ಹೊರತು ಪ್ರತಿಭಟನೆಗಲ್ಲ. ನಾವು ತಂದಿರುವ ಮೊಟ್ಟೆ ಸ್ವೀಕರಿಸಬೇಕು’ ಎಂದು ಕೋರಿದರು. ಬಳಿಕ ಪೊಲೀಸರು ಅಡ್ಡಗಟ್ಟಿ ಇಡೀ ತಂಡವನ್ನು ಸ್ಥಳದಿಂದ ಹೊರ ಕಳುಹಿಸಿದರು.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…