ಜಿಲ್ಲೆಗಳು

ಪ್ರತಾಪ್ ಸಿಂಹಗೆ ಮೊಟ್ಟೆ ನೀಡಲು ಮುಂದಾದ ಯುವ ಕಾಂಗ್ರೆಸ್ ಕಾರ್ಯಕರ್ತರು

ಮೈಸೂರು: ಕೊಡಗಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಮೊಟ್ಟೆ ಹೊಡೆದ ಹಿನ್ನಲೆಯಲ್ಲಿ ಮೈಸೂರು ನಗರ ಯುವ ಕಾಂಗ್ರೆಸ್ ಕಾರ್ಯಕರ್ತರು ಭಾನುವಾರ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಸದಸ್ಯರಾದ ಪ್ರತಾಪ್ ಸಿಂಹ ಅವರ ಮನೆ ಮುಂದೆ ಜಮಾಯಿಸಿ ಮೊಟ್ಟೆ ನೀಡಲು ಮುಂದಾದರು.

ವಿಜಯನಗರ ೩ನೇ ಹಂತದಲ್ಲಿರುವ ಸಂಸದ ಪ್ರತಾಪ್ ಸಿಂಹ ಅವರ ಮನೆ ಮುಂದೆ ದಾಂಗುಡಿಯಿಟ್ಟ ಕಾಂಗ್ರೆಸ್ ಯುವ ಮುಖಂಡ ಪವನ್, ಚಾಮರಾಜ ಕ್ಷೇತ್ರದ ದೇವರಾಜ ಬ್ಲಾಕ್ ಅಧ್ಯಕ್ಷ ಚಂದ್ರು, ಯುವ ಕಾಂಗ್ರೆಸ್ ಮೈಸೂರು ನಗರ ಉಪಾಧ್ಯಕ್ಷ ಅಬ್ರಹಾರ್, ನಿಶಾಂತ್, ಯಶವಂತ, ಸಂಜಯ್, ವಿನೋದ್, ಮದನ್ ಮೊಟ್ಟೆ ಇರಿಸಿದ ಒಂದು ಟ್ರೇ ಅನ್ನು ನೀಡಲು ಮುಂದಾದರು.

‘ನಮ್ಮ ಸಿದ್ದರಾಮಯ್ಯ ಸರ್ಕಾರದಲ್ಲಿ ಮಕ್ಕಳಿಗೆ ಪೌಷ್ಟಿಕಾಹಾರದ ರೂಪವಾಗಿ ಮೊಟ್ಟೆ ಭಾಗ್ಯ ನೀಡಿದರು. ಆದರೆ, ಕೊಡಗಿನ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಹೊಡೆದು ಅದರ ಅರ್ಥ ಕಳೆದಿದ್ದಾರೆ. ಅದನ್ನು ತಿಳಿಯಪಡಿಸಲೆಂದೇ ಸಂಸದರ ಮನೆಗೆ ಬಂದಿದ್ದೇವೆ ಹೊರತು ಪ್ರತಿಭಟನೆಗಲ್ಲ. ನಾವು ತಂದಿರುವ ಮೊಟ್ಟೆ ಸ್ವೀಕರಿಸಬೇಕು’ ಎಂದು ಕೋರಿದರು. ಬಳಿಕ ಪೊಲೀಸರು ಅಡ್ಡಗಟ್ಟಿ ಇಡೀ ತಂಡವನ್ನು ಸ್ಥಳದಿಂದ ಹೊರ ಕಳುಹಿಸಿದರು.

andolanait

Recent Posts

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

2 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

2 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

7 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

7 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

7 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

7 hours ago