ಜಿಲ್ಲೆಗಳು

ಹಣ್ಣೆಲೆ- ಚಿಗುರೆಲೆ ಭಾವನಾತ್ಮಕ ಬೆಸುಗೆಗೆ ‘ಸ್ವರಾಂಜಲಿ’ ಸಿದ್ಧತೆ

ಮೈಸೂರು: ಸಮಾನ ಮನಸ್ಕರ ತಂಡವು ‘ಸ್ವರಾಂಜಲಿ’ ಸಂಸ್ಥೆ ಮೂಲಕ ಅಜ್ಜ-ಅಜ್ಜಿ ಮತ್ತು ಮೊಮ್ಮಕ್ಕಳ ಭಾವನಾತ್ಮಕ ಸಂಬಂಧಕ್ಕೆ ಬೆಸುಗೆ ಹಾಕಲು ಮುಂದಾಗಿದ್ದು, ಹಿರಿಯ ನಾಗರಿಕರು ಮತ್ತು ಮಕ್ಕಳಿಗೆ ಚೇತೋಹಾರಿ ಮದ್ದು ನೀಡಲು ‘ಹಣ್ಣೆಲೆ-ಚಿಗುರೆಲೆ’ ಶೀರ್ಷಿಕೆಯಡಿ ವಿಶೇಷ ಕಾರ್ಯಕ್ರಮ ಆಯೋಜಿಸಿದೆ.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಟ್ರಸ್ಟ್‌ನ ಮುಖ್ಯಸ್ಥ ಡಾ.ರಘುವೀರ್ ಮಾತನಾಡಿ, ಹಿರಿಯ ಚೇತನರಿಗೆ ಪುಟ್ಟ ಮಕ್ಕಳ ಹಾಗೂ ಪುಟ್ಟ ಮಕ್ಕಳಿಗೆ ಹಿರಿಯ ಚೇತನರ ಅವಶ್ಯಕತೆ, ಅನಿವಾರ್ಯತೆ ಮತ್ತು ದೊರೆಯದಿದ್ದಾಗ ಕಾಡುವ ಅನಿಶ್ಚಿತತೆ ಎಂಬುದರ ಬಗ್ಗೆ ತಮ್ಮ ಮನದಾಳದ ಮಾತುಗಳನ್ನು ದಾಖಲಿಸಿರುವ ಮೂರು ನಿಮಿಷದ ವಿಡಿಯೋ ಚಿತ್ರೀಕರಿಸಿ ಭಾಷೆ ಸ್ಪರ್ಧೆ ಆೋಂಜಿಸಲಾಗಿದೆ ಎಂದರು.
ಇದರಲ್ಲಿ ೬೦ ಮೇಲ್ಪಟ್ಟವರು ಹಾಗೂ ೧೪ ವರ್ಷದೊಳಗಿನವರು ಪಾಲ್ಗೊಳ್ಳಬಹುದಾಗಿದೆ. ಾಂವುದೇ ಭಾಷೆುಂಲ್ಲಿ ಮೂರು ನಿಮಿಷದ ಒಂದು ವಿಡಿೋಂ ಚಿತ್ರೀಕರಿಸಬೇಕು. ಭಾಷಣ ಓದುವಂತಿಲ್ಲ. ಮೊಬೈಲ್ ಫೋನ್ ನೋಡಿಕೊಂಡು ವಾತನಾಡಬೇಕು. ಬಳಿಕ ವಿಡಿೋಂ ತುಣುಕನ್ನು ಮಕ್ಕಳಾದರೆ ವಾಟ್ಸಾಪ್ ಸಂಖ್ಯೆ ೮೦೯೫೧ ೮೦೧೭೪ಕ್ಕೆ, ಹಿರಿುಂರಾದರೆ ೮೦೯೫೧ ೮೦೩೨೯ ಕ್ಕೆ ಕಳುಹಿಸಬೇಕು. ಕೊನೆ ದಿನಾಂಕ ನವೆಂಬರ್ ೧೫ ಆಗಿದೆ ಎಂದು ತಿಳಿಸಿದರು.
ಜೊತೆಗೆ, ೬೦ ವರ್ಷ ಮೇಲ್ಪಟ್ಟವರಿಗೆ ಗಾಯನ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ನ.೧೩ರಂದು ಬೆಳಿಗ್ಗೆ ೧೦ಕ್ಕೆ ನಗರದ ಜೆಎಲ್‌ಬಿ ರಸ್ತೆಯಲ್ಲಿರುವ ನಾದಬ್ರಹ್ಮ ಸಂಗೀತ ಸಭಾಂಗಣದಲ್ಲಿ ಸ್ಪರ್ಧೆ ನಡೆಯಲಿದೆ. ಸ್ಪರ್ಧೆಯಲ್ಲಿ ಭಾಗವಹಿಸುವವರು ವಾದ್ಯ-ಕರೋಕೆ ಅಥವಾ ಯಾವುದೇ ಹಿಮ್ಮೇಳ ಇಲ್ಲದೇ ನಾಲ್ಕು ನಿಮಿಷಗಳ ಅವಧಿಯ ಗಾಯನ ಪ್ರಸ್ತುತ ಪಡಿಸಬಹುದು. ಗಾಯನಕ್ಕೆ ಭಾಷೆಯ ನಿರ್ಬಂಧ ಇರುವುದಿಲ್ಲ. ಸ್ಪರ್ಧೆಯಲ್ಲಿ ಭಾಗವಹಿಸುವವರು ವಯಸ್ಸನ್ನು ದೃಢೀಕರಿಸುವ ಆಧಾರ್ ಕಾರ್ಡ್ ಅಥವಾ ಇತರೆ ಯಾವುದಾದರೂ ದಾಖಲೆಯ ಜೆರಾಕ್ಸ್ ಪ್ರತಿ ವಿಳಾಸದ ಮತ್ತು ಮೊಬೈಲ್ ಸಂಖ್ಯೆಯನ್ನು ಮೊ.ಸಂ.9916830019, 6360369624,  ಮತ್ತು 998623005  ಗೆ ವಾಟ್ಸ್ ಆಪ್ ಮೂಲಕ ಕಳುಹಿಸಿ ನೋಂದಣಿ ಮಾಡಿಕೊಳ್ಳಬಹುದು ಎಂದು ವಿವರಿಸಿದರು.

ಡಾ.ಲಾವಣ್ಯ ಶೆಣೈ, ರೂಪಶ್ರೀ, ಆನಂದ್ ಮಧ್ವ, ಬಾಳಾಜಿ, ಮೀರಾ, ಶ್ರೀನಿವಾಸ್ ಹಾಜರಿದ್ದರು.

andolana

Recent Posts

ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಪೋಟ : ಓರ್ವ ಸಾವು, ನಾಲ್ವರು ಗಂಭೀರ

ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…

5 hours ago

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…

7 hours ago

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

7 hours ago

ಮೈಸೂರು | ಜಿಲ್ಲೆಯಾದ್ಯಂತ ಕ್ರಿಸ್‌ಮಸ್‌ ಸಂಭ್ರಮಾಚರಣೆ

ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್‌ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…

7 hours ago

ಕೆ.ಆರ್.ಪೇಟೆ | ವೇತನದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕಲ್ಪಿಸಿದ ಶಿಕ್ಷಕ

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…

8 hours ago

ತುರ್ತು ನಿರ್ಗಮನದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ಇಲ್ಲ ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…

8 hours ago