ಜಿಲ್ಲೆಗಳು

ಹಣ್ಣೆಲೆ- ಚಿಗುರೆಲೆ ಭಾವನಾತ್ಮಕ ಬೆಸುಗೆಗೆ ‘ಸ್ವರಾಂಜಲಿ’ ಸಿದ್ಧತೆ

ಮೈಸೂರು: ಸಮಾನ ಮನಸ್ಕರ ತಂಡವು ‘ಸ್ವರಾಂಜಲಿ’ ಸಂಸ್ಥೆ ಮೂಲಕ ಅಜ್ಜ-ಅಜ್ಜಿ ಮತ್ತು ಮೊಮ್ಮಕ್ಕಳ ಭಾವನಾತ್ಮಕ ಸಂಬಂಧಕ್ಕೆ ಬೆಸುಗೆ ಹಾಕಲು ಮುಂದಾಗಿದ್ದು, ಹಿರಿಯ ನಾಗರಿಕರು ಮತ್ತು ಮಕ್ಕಳಿಗೆ ಚೇತೋಹಾರಿ ಮದ್ದು ನೀಡಲು ‘ಹಣ್ಣೆಲೆ-ಚಿಗುರೆಲೆ’ ಶೀರ್ಷಿಕೆಯಡಿ ವಿಶೇಷ ಕಾರ್ಯಕ್ರಮ ಆಯೋಜಿಸಿದೆ.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಟ್ರಸ್ಟ್‌ನ ಮುಖ್ಯಸ್ಥ ಡಾ.ರಘುವೀರ್ ಮಾತನಾಡಿ, ಹಿರಿಯ ಚೇತನರಿಗೆ ಪುಟ್ಟ ಮಕ್ಕಳ ಹಾಗೂ ಪುಟ್ಟ ಮಕ್ಕಳಿಗೆ ಹಿರಿಯ ಚೇತನರ ಅವಶ್ಯಕತೆ, ಅನಿವಾರ್ಯತೆ ಮತ್ತು ದೊರೆಯದಿದ್ದಾಗ ಕಾಡುವ ಅನಿಶ್ಚಿತತೆ ಎಂಬುದರ ಬಗ್ಗೆ ತಮ್ಮ ಮನದಾಳದ ಮಾತುಗಳನ್ನು ದಾಖಲಿಸಿರುವ ಮೂರು ನಿಮಿಷದ ವಿಡಿಯೋ ಚಿತ್ರೀಕರಿಸಿ ಭಾಷೆ ಸ್ಪರ್ಧೆ ಆೋಂಜಿಸಲಾಗಿದೆ ಎಂದರು.
ಇದರಲ್ಲಿ ೬೦ ಮೇಲ್ಪಟ್ಟವರು ಹಾಗೂ ೧೪ ವರ್ಷದೊಳಗಿನವರು ಪಾಲ್ಗೊಳ್ಳಬಹುದಾಗಿದೆ. ಾಂವುದೇ ಭಾಷೆುಂಲ್ಲಿ ಮೂರು ನಿಮಿಷದ ಒಂದು ವಿಡಿೋಂ ಚಿತ್ರೀಕರಿಸಬೇಕು. ಭಾಷಣ ಓದುವಂತಿಲ್ಲ. ಮೊಬೈಲ್ ಫೋನ್ ನೋಡಿಕೊಂಡು ವಾತನಾಡಬೇಕು. ಬಳಿಕ ವಿಡಿೋಂ ತುಣುಕನ್ನು ಮಕ್ಕಳಾದರೆ ವಾಟ್ಸಾಪ್ ಸಂಖ್ಯೆ ೮೦೯೫೧ ೮೦೧೭೪ಕ್ಕೆ, ಹಿರಿುಂರಾದರೆ ೮೦೯೫೧ ೮೦೩೨೯ ಕ್ಕೆ ಕಳುಹಿಸಬೇಕು. ಕೊನೆ ದಿನಾಂಕ ನವೆಂಬರ್ ೧೫ ಆಗಿದೆ ಎಂದು ತಿಳಿಸಿದರು.
ಜೊತೆಗೆ, ೬೦ ವರ್ಷ ಮೇಲ್ಪಟ್ಟವರಿಗೆ ಗಾಯನ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ನ.೧೩ರಂದು ಬೆಳಿಗ್ಗೆ ೧೦ಕ್ಕೆ ನಗರದ ಜೆಎಲ್‌ಬಿ ರಸ್ತೆಯಲ್ಲಿರುವ ನಾದಬ್ರಹ್ಮ ಸಂಗೀತ ಸಭಾಂಗಣದಲ್ಲಿ ಸ್ಪರ್ಧೆ ನಡೆಯಲಿದೆ. ಸ್ಪರ್ಧೆಯಲ್ಲಿ ಭಾಗವಹಿಸುವವರು ವಾದ್ಯ-ಕರೋಕೆ ಅಥವಾ ಯಾವುದೇ ಹಿಮ್ಮೇಳ ಇಲ್ಲದೇ ನಾಲ್ಕು ನಿಮಿಷಗಳ ಅವಧಿಯ ಗಾಯನ ಪ್ರಸ್ತುತ ಪಡಿಸಬಹುದು. ಗಾಯನಕ್ಕೆ ಭಾಷೆಯ ನಿರ್ಬಂಧ ಇರುವುದಿಲ್ಲ. ಸ್ಪರ್ಧೆಯಲ್ಲಿ ಭಾಗವಹಿಸುವವರು ವಯಸ್ಸನ್ನು ದೃಢೀಕರಿಸುವ ಆಧಾರ್ ಕಾರ್ಡ್ ಅಥವಾ ಇತರೆ ಯಾವುದಾದರೂ ದಾಖಲೆಯ ಜೆರಾಕ್ಸ್ ಪ್ರತಿ ವಿಳಾಸದ ಮತ್ತು ಮೊಬೈಲ್ ಸಂಖ್ಯೆಯನ್ನು ಮೊ.ಸಂ.9916830019, 6360369624,  ಮತ್ತು 998623005  ಗೆ ವಾಟ್ಸ್ ಆಪ್ ಮೂಲಕ ಕಳುಹಿಸಿ ನೋಂದಣಿ ಮಾಡಿಕೊಳ್ಳಬಹುದು ಎಂದು ವಿವರಿಸಿದರು.

ಡಾ.ಲಾವಣ್ಯ ಶೆಣೈ, ರೂಪಶ್ರೀ, ಆನಂದ್ ಮಧ್ವ, ಬಾಳಾಜಿ, ಮೀರಾ, ಶ್ರೀನಿವಾಸ್ ಹಾಜರಿದ್ದರು.

andolana

Recent Posts

ಸೈದ್ಧಾಂತಿಕ ಬದ್ಧತೆ; ಪಕ್ಷದ ಸಿದ್ಧಾಂತದಲ್ಲಿ ರಾಜಿ ಸಲ್ಲದು ; ಡಿಕೆಶಿಗೆ ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…

13 hours ago

ಹೊಸ ಸಚಿವ ಸಂಪುಟ ರಚನೆ ಬಗ್ಗೆ ಖರ್ಗೆ ಹೇಳಿದಿಷ್ಟು…

ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…

16 hours ago

ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ನಾಯಕರ ನಡುವೆ ಪೈಪೋಟಿ

ಬೆಂಗಳೂರು : ಡಿ.ಕೆ.ಶಿವಕುಮಾರ್‌ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…

19 hours ago

ಶಾಲೆ ಶುರುವಾಗಿದೆ; ಮನಸು ಯಾಕೋ ಹೂ ಬಿಟ್ಟಿದೆ…

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…

22 hours ago

ಭಾನುವಾರದ ಹಾಡುಪಾಡು | ಶಾಲೆಯೆಂಬ ಕಟ್ಟಡಗಳಿಗೆ ಜೀವ ಬರುವ ಹೊತ್ತು…..

ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…

22 hours ago

ಭಾನುವಾರದ ಹಾಡುಪಾಡು | ಜೂನ್ ಬಂತು ಎಂದರೆ ಶಿಕ್ಷಕರಿಗೆ ಸುಗ್ಗಿ ಕಾಲ

ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…

22 hours ago