Mysore
24
overcast clouds

Social Media

ಭಾನುವಾರ, 16 ಆಗಸ್ಟ್ 2026
Light
Dark

ನಂಜುಂಡೇಶ್ವರ ದೇವಾಲಯಕ್ಕೆ ರಾಹುಲ್ ಗಾಂಧಿ ಭೇಟಿ

ಮೈಸೂರು : ನಂಜನಗೂಡಿನ ಪ್ರಸಿದ್ಧ ನಂಜುಂಡೇಶ್ವರ ದೇವಾಲಯಕ್ಕೆ ರಾಹುಲ್ ಗಾಂಧಿ ಅವರು ಭೇಟಿ ನೀಡಿದರು.

ರಾಹುಲ್ ಗಾಂಧಿ ಅವರಿಗೆ ಹೂವಿನ ಹಾರ ಹಾಕಿ ಮುಖ್ಯ ಅರ್ಚಕರು ಸ್ವಾಗತಿಸಿದರು. ಬಳಿಕ ದೇವಸ್ಥಾನದ ಹಾಗೂ ಟಿಪ್ಪುವಿನ ಬಗ್ಗೆ ರಾಹುಲ್ ಅವರಿಗೆ ಅರ್ಚಕರು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸೇರಿದಂತೆ ಪಕ್ಷದ ಹಲವರು ಉಪಸ್ಥಿತರಿದ್ದರು.

ಐಕ್ಯತಾ ಯಾತ್ರೆಯು ಬಳಿಕ ಕಡಕೋಳ ಕೈಗಾರಿಕಾ ಪ್ರದೇಶದಿಂದ ಪಾದಯಾತ್ರೆ ಮುಂದುವರಿಸಲಿದ್ದು ಮೈಸೂರು ನಗರದ ಅರಮನೆ ಮೈದಾನದ ಎದುರಿನ ವಸ್ತು ಪ್ರದರ್ಶನ ಆವರಣದಲ್ಲಿ ತಂಗಲಿದೆ.

ಅಕ್ಟೋಬರ್ 3ರಂದು ಅಂದರೆ ನಾಲ್ಕನೇ ದಿನ ಮೈಸೂರಿನಿಂದ ಯಾತ್ರೆ ಆರಂಭಗೊಳ್ಳಲಿದೆ ಈ ದಿನಗಳಲ್ಲಿ ವಿಶ್ವ ವಿಖ್ಯಾತ ಮೈಸೂರು ದಸರಾ ಆರಂಭಗೊಂಡಿರುತ್ತದೆ. ಇಲ್ಲಿಂದ ಹೊರಟ ಯಾತ್ರೆಯೂ ಕೆನಲು ಗ್ರಾಮದ ವನಜ ಸುಂದರ ಸಭಾಂಗಣದಲ್ಲಿ ಉಪಹಾರ ಸೇವಿಸಿ ಟಿ ಎಸ್ ಛತ್ರ ಗ್ರಾಮವನ್ನು ಪ್ರವೇಶಿಸಲಿದೆ ರಾತ್ರಿ ಅಲ್ಲಿನ ಶ್ರೀ ವೆಂಕಟರಮಣ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಉಳಿದುಕೊಳ್ಳಲಿದೆ.

ಅ.4 ಮತ್ತು 5ರಂದು ಪಾದಯಾತ್ರೆಗೆ ವಿಶ್ರಾಂತಿ ಇದ್ದು, ಏಳನೆ ದಿನ ಮಂಡ್ಯದ ಶ್ರೀ ಮಹದೇಶ್ವರ ದೇವಸ್ಥಾನದಿಂದ ಪುನರಾರಂಭಗೊಳ್ಳಲಿದೆ. ನಾಗಮಂಗಲದ ಚೌಡೇನಹಳ್ಳಿ ಗೇಟ್‍ನಿಂದ ನಡೆಯುವ ಪಾದಯಾತ್ರೆ ರಾತ್ರಿ ಎಂ.ಹೊಸೂರು ಗೇಟ್‍ನ ಬರಮದೇವರಹಳ್ಳಿಯಲ್ಲಿ ತಂಗಲಿದೆ. ಎಂಟನೆ ದಿನ ವಿಸ್ಡಂ ಶಾಲೆಯಿಂದ ಆರಂಭಗೊಂಡು ನಾಗಮಂಗಲದ ಅಂಚೆಚಿಟ್ಟನ ಹಳ್ಳಿಯಿಂದ ಮುಂದುವರೆದು ಆದಿಚುಂಚನಗಿರಿ ಮಠದ ಬೇಳ್ಳುರು ಟೌನ್‍ನಲ್ಲಿ ರಾತ್ರಿ ವಿಶ್ರಾಂತಿ ಪಡೆಯಲಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!