ಜಿಲ್ಲೆಗಳು

ನಂಜುಂಡೇಶ್ವರ ದೇವಾಲಯಕ್ಕೆ ರಾಹುಲ್ ಗಾಂಧಿ ಭೇಟಿ

ಮೈಸೂರು : ನಂಜನಗೂಡಿನ ಪ್ರಸಿದ್ಧ ನಂಜುಂಡೇಶ್ವರ ದೇವಾಲಯಕ್ಕೆ ರಾಹುಲ್ ಗಾಂಧಿ ಅವರು ಭೇಟಿ ನೀಡಿದರು.

ರಾಹುಲ್ ಗಾಂಧಿ ಅವರಿಗೆ ಹೂವಿನ ಹಾರ ಹಾಕಿ ಮುಖ್ಯ ಅರ್ಚಕರು ಸ್ವಾಗತಿಸಿದರು. ಬಳಿಕ ದೇವಸ್ಥಾನದ ಹಾಗೂ ಟಿಪ್ಪುವಿನ ಬಗ್ಗೆ ರಾಹುಲ್ ಅವರಿಗೆ ಅರ್ಚಕರು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸೇರಿದಂತೆ ಪಕ್ಷದ ಹಲವರು ಉಪಸ್ಥಿತರಿದ್ದರು.

ಐಕ್ಯತಾ ಯಾತ್ರೆಯು ಬಳಿಕ ಕಡಕೋಳ ಕೈಗಾರಿಕಾ ಪ್ರದೇಶದಿಂದ ಪಾದಯಾತ್ರೆ ಮುಂದುವರಿಸಲಿದ್ದು ಮೈಸೂರು ನಗರದ ಅರಮನೆ ಮೈದಾನದ ಎದುರಿನ ವಸ್ತು ಪ್ರದರ್ಶನ ಆವರಣದಲ್ಲಿ ತಂಗಲಿದೆ.

ಅಕ್ಟೋಬರ್ 3ರಂದು ಅಂದರೆ ನಾಲ್ಕನೇ ದಿನ ಮೈಸೂರಿನಿಂದ ಯಾತ್ರೆ ಆರಂಭಗೊಳ್ಳಲಿದೆ ಈ ದಿನಗಳಲ್ಲಿ ವಿಶ್ವ ವಿಖ್ಯಾತ ಮೈಸೂರು ದಸರಾ ಆರಂಭಗೊಂಡಿರುತ್ತದೆ. ಇಲ್ಲಿಂದ ಹೊರಟ ಯಾತ್ರೆಯೂ ಕೆನಲು ಗ್ರಾಮದ ವನಜ ಸುಂದರ ಸಭಾಂಗಣದಲ್ಲಿ ಉಪಹಾರ ಸೇವಿಸಿ ಟಿ ಎಸ್ ಛತ್ರ ಗ್ರಾಮವನ್ನು ಪ್ರವೇಶಿಸಲಿದೆ ರಾತ್ರಿ ಅಲ್ಲಿನ ಶ್ರೀ ವೆಂಕಟರಮಣ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಉಳಿದುಕೊಳ್ಳಲಿದೆ.

ಅ.4 ಮತ್ತು 5ರಂದು ಪಾದಯಾತ್ರೆಗೆ ವಿಶ್ರಾಂತಿ ಇದ್ದು, ಏಳನೆ ದಿನ ಮಂಡ್ಯದ ಶ್ರೀ ಮಹದೇಶ್ವರ ದೇವಸ್ಥಾನದಿಂದ ಪುನರಾರಂಭಗೊಳ್ಳಲಿದೆ. ನಾಗಮಂಗಲದ ಚೌಡೇನಹಳ್ಳಿ ಗೇಟ್‍ನಿಂದ ನಡೆಯುವ ಪಾದಯಾತ್ರೆ ರಾತ್ರಿ ಎಂ.ಹೊಸೂರು ಗೇಟ್‍ನ ಬರಮದೇವರಹಳ್ಳಿಯಲ್ಲಿ ತಂಗಲಿದೆ. ಎಂಟನೆ ದಿನ ವಿಸ್ಡಂ ಶಾಲೆಯಿಂದ ಆರಂಭಗೊಂಡು ನಾಗಮಂಗಲದ ಅಂಚೆಚಿಟ್ಟನ ಹಳ್ಳಿಯಿಂದ ಮುಂದುವರೆದು ಆದಿಚುಂಚನಗಿರಿ ಮಠದ ಬೇಳ್ಳುರು ಟೌನ್‍ನಲ್ಲಿ ರಾತ್ರಿ ವಿಶ್ರಾಂತಿ ಪಡೆಯಲಿದೆ.

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

11 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

11 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

13 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

13 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

1 day ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago