ಜಿಲ್ಲೆಗಳು

ʼಮೈಸೂರಿನ ಪಾರಂಪರಿಕ ಕಟ್ಟಡಗಳ ಸಂರಕ್ಷಣೆ’

131 ಪಾರಂಪರಿಕ ಕಟ್ಟಡಗಳ ಸ್ಥಿತಿ ಪರಿಶೀಲನೆಗೆ ಸಮಿತಿ : ಆನಂದ್‌ ಸಿಂಗ್‌

ಬೆಳಗಾವಿ (ಸುವರ್ಣ ಸೌಧ): ಮೈಸೂರು ನಗರದ ೧೩೧ ಪಾರಂಪರಿಕ ಕಟ್ಟಡಗಳನ್ನು ಗುರುತಿಸಲಾಗಿದ್ದು, ಈ ಪಾರಂಪರಿಕ ಕಟ್ಟಡಗಳ ಸ್ಥಿತಿಗತಿಗಳ ಬಗ್ಗೆ ಪರಿಶೀಲಿಸಿ ವರದಿ ನೀಡಲು ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ತಜ್ಞರ ಸಮಿತಿ ನೇಮಿಸಲಾಗಿದೆ. ಸಮಿತಿ ಭೌತಿಕ ಪರಿಶೀಲನೆ ವರದಿ ಬಂದ ನಂತರ ದುರಸ್ತಿ ಮತ್ತು ಸಂರಕ್ಷಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಆನಂದ್ ಸಿಂಗ್ ಹೇಳಿದರು.
ಮಂಗಳವಾರ ವಿಧಾನ ಪರಿಷತ್ ಕಲಾಪದಲ್ಲಿ ಸದಸ್ಯ ಸಿ.ಎನ್.ಮಂಜೇಗೌಡ ರವರು ೩೩೦ನೇ ನಿಯಮದಡಿ ಪ್ರಸ್ತಾಪಿಸಿದ ಸಾರ್ವಜನಿಕ ಮಹತ್ವದ ವಿಷಯಕ್ಕೆ ಸಚಿವರು ಉತ್ತರಿಸಿದರು.
೧೯೬೧ರ ಕರ್ನಾಟಕ ನಗರ ಮತ್ತು ಗ್ರಾಮೀಣ ಪ್ರದೇಶ ಯೋಜನಾ ಕಾಯ್ದೆ  ಹಾಗೂ ವಲಯವಾರು ನಿಯಮಗಳ ತಿದ್ದುಪಡಿ ಅನುಸಾರ ಪ್ರತಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪರಂಪರೆ ಸಂರಕ್ಷಣಾ ಸಮಿತಿ ರಚಿಸಲಾಗಿದೆ. ಈ ಸಮಿತಿಯಲ್ಲಿ ಅಧಿಕಾರಿಗಳು, ತಜ್ಞರು, ವಾಸ್ತುಶಿಲ್ಪಿಗಳು ಮತ್ತು ಸ್ವಯಂಸೇವಾ ಪ್ರತಿನಿಧಿಗಳು ಸೇರಿ ಒಟ್ಟು ೨೭ ಸದಸ್ಯರಿರುತ್ತಾರೆ ಎಂದರು.
ವಿಧಾನ ಪರಿಷತ್ ಶಾಸಕ ಸಿ.ಎನ್.ಮಂಜೇಗೌಡ ಮೈಸೂರು ನಗರದಲ್ಲಿ ಯದುವಂಶದ ಆಳ್ವಿಕೆಯಲ್ಲಿ ನಿರ್ಮಿಸಿದ ನೂರಾರು ಐತಿಹಾಸಿಕ ಪಾರಂಪರಿಕ ಸ್ಮಾರಕಗಳಿವೆ. ಈ ಪಾರಂಪರಿಕ ಕಟ್ಟಡಗಳನ್ನು ಯಾರು ಹೇಗೆ ನಿರ್ವಹಿಸಬೇಕು ಎಂಬುದರ ಬಗ್ಗೆ ಸರಿಯಾದ ನೀತಿ – ನಿಯಮಾವಳಿಗಳೇ ಇಲ್ಲ. ಇವೆಲ್ಲದಕ್ಕಿಂತ ಪ್ರಮುಖವಾಗಿ ಮುಂಬಯಿ, ಅಹಮದಾಬಾದ್, ಹೈದರಾಬಾದ್‌ನಂಥ ನಗರಗಳಲ್ಲಿರುವ ಪಾರಂಪರಿಕ ಕಟ್ಟಡಗಳನ್ನು ಸಂರಕ್ಷಿಸುವ ಸಲುವಾಗಿಯೇ ಅಲ್ಲಿನ ಸರ್ಕಾರಗಳು ಒಂದು ಕಾಯಿದೆಯನ್ನೇ ರೂಪಿಸಿವೆ. ಕರ್ನಾಟಕಕ್ಕೂ ಇಂಥದ್ದೊಂದು ಕಾಯ್ದೆ, , ನೀತಿ-ನಿಯಮ ಅಗತ್ಯವಿದೆ. ಸರ್ಕಾರ ಈ ಬಗ್ಗೆ ಗಂಭೀರ ಚಿಂತನೆ ನಡೆಸಿ ನಿಯಮ ಜಾರಿಗೆ ತರಬೇಕು ಎಂದರು.
ಪಾರಂಪರಿಕ ಕಟ್ಟಡಗಳು ಸರಿಯಾದ ನಿರ್ವಹಣೆಗೆ ಸರ್ಕಾರ ಬಜೆಟ್‌ನಲ್ಲಿ ವಾರ್ಷಿಕವಾಗಿ ರೂ. 1000 ಕೋಟಿಗಳನ್ನು ಕಾಯ್ದಿರಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು. ಇದಕ್ಕೆ ವಿಧಾನ ಪರಿಷತ್ ಶಾಸಕ ಮರಿತಿಬ್ಬೇಗೌಡ ಸಹಮತ ಸೂಚಿಸಿದರು.

ಮೈಸೂರಿನಲ್ಲಿ ಒಟ್ಟಾರೆ ೨೩೪ ಪಾರಂಪರಿಕ ಕಟ್ಟಡಗಳಿವೆ. ಈ ಪೈಕಿ ೧೩೧ ಕಟ್ಟಡಗಳನ್ನು ಸರ್ಕಾರ ಮಾನ್ಯ ಮಾಡಿದೆ. ಇದರಲ್ಲಿ 24 ಕಟ್ಟಡಗಳಿಗೆ ತುರ್ತಾಗಿ ದುರಸ್ತಿಯ ಅವಶ್ಯಕತೆ ಇದೆ ಎಂದು ಪಾರಂಪರಿಕ ತಜ್ಞರು ವರದಿ ನೀಡಿದ್ದಾರೆ.

-ಸಿ.ಎನ್.ಮಂಜೇಗೌಡ, ವಿಧಾನಪರಿಷತ್ ಸದಸ್ಯ

andolanait

Recent Posts

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಜೆಡಿಎಸ್‌ ಎಂಎಲ್‌ಸಿ ಸೂರಜ್‌ ರೇವಣ್ಣಗೆ ಬಿಗ್‌ ಶಾಕ್‌

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…

7 hours ago

ಟಿ.ನರಸೀಪುರ| ಆನೆ ದಾಳಿಗೆ ರೈತ ಬಲಿ

ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್‌ ಠಾಣೆ ವ್ಯಾಪ್ತಿಯ…

11 hours ago

ಮೈಸೂರು ನಗರ ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಪೂರೈಸುತ್ತಿದ್ದ ಇಬ್ಬರ ಬಂಧನ

ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…

11 hours ago

ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲೂ ಆಸಕ್ತಿ ಬೆಳೆಸಿಕೊಳ್ಳಿ: ದಿನೇಶ್‌ ಗೂಳಿಗೌಡ

ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಕರ್ನಾಟಕ ರಾಜ್ಯ…

12 hours ago

ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…

12 hours ago

ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣ: ಅಂತಿಮ ಹಂತಕ್ಕೆ ತಲುಪಿದ ಎಸ್‌ಐಟಿ ತನಿಖೆ

ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…

12 hours ago