ಜಿಲ್ಲೆಗಳು

ʼಮೈಸೂರಿನ ಪಾರಂಪರಿಕ ಕಟ್ಟಡಗಳ ಸಂರಕ್ಷಣೆ’

131 ಪಾರಂಪರಿಕ ಕಟ್ಟಡಗಳ ಸ್ಥಿತಿ ಪರಿಶೀಲನೆಗೆ ಸಮಿತಿ : ಆನಂದ್‌ ಸಿಂಗ್‌

ಬೆಳಗಾವಿ (ಸುವರ್ಣ ಸೌಧ): ಮೈಸೂರು ನಗರದ ೧೩೧ ಪಾರಂಪರಿಕ ಕಟ್ಟಡಗಳನ್ನು ಗುರುತಿಸಲಾಗಿದ್ದು, ಈ ಪಾರಂಪರಿಕ ಕಟ್ಟಡಗಳ ಸ್ಥಿತಿಗತಿಗಳ ಬಗ್ಗೆ ಪರಿಶೀಲಿಸಿ ವರದಿ ನೀಡಲು ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ತಜ್ಞರ ಸಮಿತಿ ನೇಮಿಸಲಾಗಿದೆ. ಸಮಿತಿ ಭೌತಿಕ ಪರಿಶೀಲನೆ ವರದಿ ಬಂದ ನಂತರ ದುರಸ್ತಿ ಮತ್ತು ಸಂರಕ್ಷಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಆನಂದ್ ಸಿಂಗ್ ಹೇಳಿದರು.
ಮಂಗಳವಾರ ವಿಧಾನ ಪರಿಷತ್ ಕಲಾಪದಲ್ಲಿ ಸದಸ್ಯ ಸಿ.ಎನ್.ಮಂಜೇಗೌಡ ರವರು ೩೩೦ನೇ ನಿಯಮದಡಿ ಪ್ರಸ್ತಾಪಿಸಿದ ಸಾರ್ವಜನಿಕ ಮಹತ್ವದ ವಿಷಯಕ್ಕೆ ಸಚಿವರು ಉತ್ತರಿಸಿದರು.
೧೯೬೧ರ ಕರ್ನಾಟಕ ನಗರ ಮತ್ತು ಗ್ರಾಮೀಣ ಪ್ರದೇಶ ಯೋಜನಾ ಕಾಯ್ದೆ  ಹಾಗೂ ವಲಯವಾರು ನಿಯಮಗಳ ತಿದ್ದುಪಡಿ ಅನುಸಾರ ಪ್ರತಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪರಂಪರೆ ಸಂರಕ್ಷಣಾ ಸಮಿತಿ ರಚಿಸಲಾಗಿದೆ. ಈ ಸಮಿತಿಯಲ್ಲಿ ಅಧಿಕಾರಿಗಳು, ತಜ್ಞರು, ವಾಸ್ತುಶಿಲ್ಪಿಗಳು ಮತ್ತು ಸ್ವಯಂಸೇವಾ ಪ್ರತಿನಿಧಿಗಳು ಸೇರಿ ಒಟ್ಟು ೨೭ ಸದಸ್ಯರಿರುತ್ತಾರೆ ಎಂದರು.
ವಿಧಾನ ಪರಿಷತ್ ಶಾಸಕ ಸಿ.ಎನ್.ಮಂಜೇಗೌಡ ಮೈಸೂರು ನಗರದಲ್ಲಿ ಯದುವಂಶದ ಆಳ್ವಿಕೆಯಲ್ಲಿ ನಿರ್ಮಿಸಿದ ನೂರಾರು ಐತಿಹಾಸಿಕ ಪಾರಂಪರಿಕ ಸ್ಮಾರಕಗಳಿವೆ. ಈ ಪಾರಂಪರಿಕ ಕಟ್ಟಡಗಳನ್ನು ಯಾರು ಹೇಗೆ ನಿರ್ವಹಿಸಬೇಕು ಎಂಬುದರ ಬಗ್ಗೆ ಸರಿಯಾದ ನೀತಿ – ನಿಯಮಾವಳಿಗಳೇ ಇಲ್ಲ. ಇವೆಲ್ಲದಕ್ಕಿಂತ ಪ್ರಮುಖವಾಗಿ ಮುಂಬಯಿ, ಅಹಮದಾಬಾದ್, ಹೈದರಾಬಾದ್‌ನಂಥ ನಗರಗಳಲ್ಲಿರುವ ಪಾರಂಪರಿಕ ಕಟ್ಟಡಗಳನ್ನು ಸಂರಕ್ಷಿಸುವ ಸಲುವಾಗಿಯೇ ಅಲ್ಲಿನ ಸರ್ಕಾರಗಳು ಒಂದು ಕಾಯಿದೆಯನ್ನೇ ರೂಪಿಸಿವೆ. ಕರ್ನಾಟಕಕ್ಕೂ ಇಂಥದ್ದೊಂದು ಕಾಯ್ದೆ, , ನೀತಿ-ನಿಯಮ ಅಗತ್ಯವಿದೆ. ಸರ್ಕಾರ ಈ ಬಗ್ಗೆ ಗಂಭೀರ ಚಿಂತನೆ ನಡೆಸಿ ನಿಯಮ ಜಾರಿಗೆ ತರಬೇಕು ಎಂದರು.
ಪಾರಂಪರಿಕ ಕಟ್ಟಡಗಳು ಸರಿಯಾದ ನಿರ್ವಹಣೆಗೆ ಸರ್ಕಾರ ಬಜೆಟ್‌ನಲ್ಲಿ ವಾರ್ಷಿಕವಾಗಿ ರೂ. 1000 ಕೋಟಿಗಳನ್ನು ಕಾಯ್ದಿರಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು. ಇದಕ್ಕೆ ವಿಧಾನ ಪರಿಷತ್ ಶಾಸಕ ಮರಿತಿಬ್ಬೇಗೌಡ ಸಹಮತ ಸೂಚಿಸಿದರು.

ಮೈಸೂರಿನಲ್ಲಿ ಒಟ್ಟಾರೆ ೨೩೪ ಪಾರಂಪರಿಕ ಕಟ್ಟಡಗಳಿವೆ. ಈ ಪೈಕಿ ೧೩೧ ಕಟ್ಟಡಗಳನ್ನು ಸರ್ಕಾರ ಮಾನ್ಯ ಮಾಡಿದೆ. ಇದರಲ್ಲಿ 24 ಕಟ್ಟಡಗಳಿಗೆ ತುರ್ತಾಗಿ ದುರಸ್ತಿಯ ಅವಶ್ಯಕತೆ ಇದೆ ಎಂದು ಪಾರಂಪರಿಕ ತಜ್ಞರು ವರದಿ ನೀಡಿದ್ದಾರೆ.

-ಸಿ.ಎನ್.ಮಂಜೇಗೌಡ, ವಿಧಾನಪರಿಷತ್ ಸದಸ್ಯ

andolanait

Recent Posts

ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಪೋಟ : ಇಬ್ಬರು ಸಾವು, ನಾಲ್ವರು ಗಂಭೀರ

ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…

8 mins ago

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…

2 hours ago

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

3 hours ago

ಮೈಸೂರು | ಜಿಲ್ಲೆಯಾದ್ಯಂತ ಕ್ರಿಸ್‌ಮಸ್‌ ಸಂಭ್ರಮಾಚರಣೆ

ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್‌ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…

3 hours ago

ಕೆ.ಆರ್.ಪೇಟೆ | ವೇತನದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕಲ್ಪಿಸಿದ ಶಿಕ್ಷಕ

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…

3 hours ago

ತುರ್ತು ನಿರ್ಗಮನದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ಇಲ್ಲ ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…

3 hours ago