ಜಿಲ್ಲೆಗಳು

ʼಮೈಸೂರಿನ ಪಾರಂಪರಿಕ ಕಟ್ಟಡಗಳ ಸಂರಕ್ಷಣೆ’

131 ಪಾರಂಪರಿಕ ಕಟ್ಟಡಗಳ ಸ್ಥಿತಿ ಪರಿಶೀಲನೆಗೆ ಸಮಿತಿ : ಆನಂದ್‌ ಸಿಂಗ್‌

ಬೆಳಗಾವಿ (ಸುವರ್ಣ ಸೌಧ): ಮೈಸೂರು ನಗರದ ೧೩೧ ಪಾರಂಪರಿಕ ಕಟ್ಟಡಗಳನ್ನು ಗುರುತಿಸಲಾಗಿದ್ದು, ಈ ಪಾರಂಪರಿಕ ಕಟ್ಟಡಗಳ ಸ್ಥಿತಿಗತಿಗಳ ಬಗ್ಗೆ ಪರಿಶೀಲಿಸಿ ವರದಿ ನೀಡಲು ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ತಜ್ಞರ ಸಮಿತಿ ನೇಮಿಸಲಾಗಿದೆ. ಸಮಿತಿ ಭೌತಿಕ ಪರಿಶೀಲನೆ ವರದಿ ಬಂದ ನಂತರ ದುರಸ್ತಿ ಮತ್ತು ಸಂರಕ್ಷಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಆನಂದ್ ಸಿಂಗ್ ಹೇಳಿದರು.
ಮಂಗಳವಾರ ವಿಧಾನ ಪರಿಷತ್ ಕಲಾಪದಲ್ಲಿ ಸದಸ್ಯ ಸಿ.ಎನ್.ಮಂಜೇಗೌಡ ರವರು ೩೩೦ನೇ ನಿಯಮದಡಿ ಪ್ರಸ್ತಾಪಿಸಿದ ಸಾರ್ವಜನಿಕ ಮಹತ್ವದ ವಿಷಯಕ್ಕೆ ಸಚಿವರು ಉತ್ತರಿಸಿದರು.
೧೯೬೧ರ ಕರ್ನಾಟಕ ನಗರ ಮತ್ತು ಗ್ರಾಮೀಣ ಪ್ರದೇಶ ಯೋಜನಾ ಕಾಯ್ದೆ  ಹಾಗೂ ವಲಯವಾರು ನಿಯಮಗಳ ತಿದ್ದುಪಡಿ ಅನುಸಾರ ಪ್ರತಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪರಂಪರೆ ಸಂರಕ್ಷಣಾ ಸಮಿತಿ ರಚಿಸಲಾಗಿದೆ. ಈ ಸಮಿತಿಯಲ್ಲಿ ಅಧಿಕಾರಿಗಳು, ತಜ್ಞರು, ವಾಸ್ತುಶಿಲ್ಪಿಗಳು ಮತ್ತು ಸ್ವಯಂಸೇವಾ ಪ್ರತಿನಿಧಿಗಳು ಸೇರಿ ಒಟ್ಟು ೨೭ ಸದಸ್ಯರಿರುತ್ತಾರೆ ಎಂದರು.
ವಿಧಾನ ಪರಿಷತ್ ಶಾಸಕ ಸಿ.ಎನ್.ಮಂಜೇಗೌಡ ಮೈಸೂರು ನಗರದಲ್ಲಿ ಯದುವಂಶದ ಆಳ್ವಿಕೆಯಲ್ಲಿ ನಿರ್ಮಿಸಿದ ನೂರಾರು ಐತಿಹಾಸಿಕ ಪಾರಂಪರಿಕ ಸ್ಮಾರಕಗಳಿವೆ. ಈ ಪಾರಂಪರಿಕ ಕಟ್ಟಡಗಳನ್ನು ಯಾರು ಹೇಗೆ ನಿರ್ವಹಿಸಬೇಕು ಎಂಬುದರ ಬಗ್ಗೆ ಸರಿಯಾದ ನೀತಿ – ನಿಯಮಾವಳಿಗಳೇ ಇಲ್ಲ. ಇವೆಲ್ಲದಕ್ಕಿಂತ ಪ್ರಮುಖವಾಗಿ ಮುಂಬಯಿ, ಅಹಮದಾಬಾದ್, ಹೈದರಾಬಾದ್‌ನಂಥ ನಗರಗಳಲ್ಲಿರುವ ಪಾರಂಪರಿಕ ಕಟ್ಟಡಗಳನ್ನು ಸಂರಕ್ಷಿಸುವ ಸಲುವಾಗಿಯೇ ಅಲ್ಲಿನ ಸರ್ಕಾರಗಳು ಒಂದು ಕಾಯಿದೆಯನ್ನೇ ರೂಪಿಸಿವೆ. ಕರ್ನಾಟಕಕ್ಕೂ ಇಂಥದ್ದೊಂದು ಕಾಯ್ದೆ, , ನೀತಿ-ನಿಯಮ ಅಗತ್ಯವಿದೆ. ಸರ್ಕಾರ ಈ ಬಗ್ಗೆ ಗಂಭೀರ ಚಿಂತನೆ ನಡೆಸಿ ನಿಯಮ ಜಾರಿಗೆ ತರಬೇಕು ಎಂದರು.
ಪಾರಂಪರಿಕ ಕಟ್ಟಡಗಳು ಸರಿಯಾದ ನಿರ್ವಹಣೆಗೆ ಸರ್ಕಾರ ಬಜೆಟ್‌ನಲ್ಲಿ ವಾರ್ಷಿಕವಾಗಿ ರೂ. 1000 ಕೋಟಿಗಳನ್ನು ಕಾಯ್ದಿರಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು. ಇದಕ್ಕೆ ವಿಧಾನ ಪರಿಷತ್ ಶಾಸಕ ಮರಿತಿಬ್ಬೇಗೌಡ ಸಹಮತ ಸೂಚಿಸಿದರು.

ಮೈಸೂರಿನಲ್ಲಿ ಒಟ್ಟಾರೆ ೨೩೪ ಪಾರಂಪರಿಕ ಕಟ್ಟಡಗಳಿವೆ. ಈ ಪೈಕಿ ೧೩೧ ಕಟ್ಟಡಗಳನ್ನು ಸರ್ಕಾರ ಮಾನ್ಯ ಮಾಡಿದೆ. ಇದರಲ್ಲಿ 24 ಕಟ್ಟಡಗಳಿಗೆ ತುರ್ತಾಗಿ ದುರಸ್ತಿಯ ಅವಶ್ಯಕತೆ ಇದೆ ಎಂದು ಪಾರಂಪರಿಕ ತಜ್ಞರು ವರದಿ ನೀಡಿದ್ದಾರೆ.

-ಸಿ.ಎನ್.ಮಂಜೇಗೌಡ, ವಿಧಾನಪರಿಷತ್ ಸದಸ್ಯ

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

4 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

12 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

12 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

12 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

15 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

15 hours ago