ಜಿಲ್ಲೆಗಳು

ʼಮೈಸೂರಿನ ಪಾರಂಪರಿಕ ಕಟ್ಟಡಗಳ ಸಂರಕ್ಷಣೆ’

131 ಪಾರಂಪರಿಕ ಕಟ್ಟಡಗಳ ಸ್ಥಿತಿ ಪರಿಶೀಲನೆಗೆ ಸಮಿತಿ : ಆನಂದ್‌ ಸಿಂಗ್‌

ಬೆಳಗಾವಿ (ಸುವರ್ಣ ಸೌಧ): ಮೈಸೂರು ನಗರದ ೧೩೧ ಪಾರಂಪರಿಕ ಕಟ್ಟಡಗಳನ್ನು ಗುರುತಿಸಲಾಗಿದ್ದು, ಈ ಪಾರಂಪರಿಕ ಕಟ್ಟಡಗಳ ಸ್ಥಿತಿಗತಿಗಳ ಬಗ್ಗೆ ಪರಿಶೀಲಿಸಿ ವರದಿ ನೀಡಲು ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ತಜ್ಞರ ಸಮಿತಿ ನೇಮಿಸಲಾಗಿದೆ. ಸಮಿತಿ ಭೌತಿಕ ಪರಿಶೀಲನೆ ವರದಿ ಬಂದ ನಂತರ ದುರಸ್ತಿ ಮತ್ತು ಸಂರಕ್ಷಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಆನಂದ್ ಸಿಂಗ್ ಹೇಳಿದರು.
ಮಂಗಳವಾರ ವಿಧಾನ ಪರಿಷತ್ ಕಲಾಪದಲ್ಲಿ ಸದಸ್ಯ ಸಿ.ಎನ್.ಮಂಜೇಗೌಡ ರವರು ೩೩೦ನೇ ನಿಯಮದಡಿ ಪ್ರಸ್ತಾಪಿಸಿದ ಸಾರ್ವಜನಿಕ ಮಹತ್ವದ ವಿಷಯಕ್ಕೆ ಸಚಿವರು ಉತ್ತರಿಸಿದರು.
೧೯೬೧ರ ಕರ್ನಾಟಕ ನಗರ ಮತ್ತು ಗ್ರಾಮೀಣ ಪ್ರದೇಶ ಯೋಜನಾ ಕಾಯ್ದೆ  ಹಾಗೂ ವಲಯವಾರು ನಿಯಮಗಳ ತಿದ್ದುಪಡಿ ಅನುಸಾರ ಪ್ರತಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪರಂಪರೆ ಸಂರಕ್ಷಣಾ ಸಮಿತಿ ರಚಿಸಲಾಗಿದೆ. ಈ ಸಮಿತಿಯಲ್ಲಿ ಅಧಿಕಾರಿಗಳು, ತಜ್ಞರು, ವಾಸ್ತುಶಿಲ್ಪಿಗಳು ಮತ್ತು ಸ್ವಯಂಸೇವಾ ಪ್ರತಿನಿಧಿಗಳು ಸೇರಿ ಒಟ್ಟು ೨೭ ಸದಸ್ಯರಿರುತ್ತಾರೆ ಎಂದರು.
ವಿಧಾನ ಪರಿಷತ್ ಶಾಸಕ ಸಿ.ಎನ್.ಮಂಜೇಗೌಡ ಮೈಸೂರು ನಗರದಲ್ಲಿ ಯದುವಂಶದ ಆಳ್ವಿಕೆಯಲ್ಲಿ ನಿರ್ಮಿಸಿದ ನೂರಾರು ಐತಿಹಾಸಿಕ ಪಾರಂಪರಿಕ ಸ್ಮಾರಕಗಳಿವೆ. ಈ ಪಾರಂಪರಿಕ ಕಟ್ಟಡಗಳನ್ನು ಯಾರು ಹೇಗೆ ನಿರ್ವಹಿಸಬೇಕು ಎಂಬುದರ ಬಗ್ಗೆ ಸರಿಯಾದ ನೀತಿ – ನಿಯಮಾವಳಿಗಳೇ ಇಲ್ಲ. ಇವೆಲ್ಲದಕ್ಕಿಂತ ಪ್ರಮುಖವಾಗಿ ಮುಂಬಯಿ, ಅಹಮದಾಬಾದ್, ಹೈದರಾಬಾದ್‌ನಂಥ ನಗರಗಳಲ್ಲಿರುವ ಪಾರಂಪರಿಕ ಕಟ್ಟಡಗಳನ್ನು ಸಂರಕ್ಷಿಸುವ ಸಲುವಾಗಿಯೇ ಅಲ್ಲಿನ ಸರ್ಕಾರಗಳು ಒಂದು ಕಾಯಿದೆಯನ್ನೇ ರೂಪಿಸಿವೆ. ಕರ್ನಾಟಕಕ್ಕೂ ಇಂಥದ್ದೊಂದು ಕಾಯ್ದೆ, , ನೀತಿ-ನಿಯಮ ಅಗತ್ಯವಿದೆ. ಸರ್ಕಾರ ಈ ಬಗ್ಗೆ ಗಂಭೀರ ಚಿಂತನೆ ನಡೆಸಿ ನಿಯಮ ಜಾರಿಗೆ ತರಬೇಕು ಎಂದರು.
ಪಾರಂಪರಿಕ ಕಟ್ಟಡಗಳು ಸರಿಯಾದ ನಿರ್ವಹಣೆಗೆ ಸರ್ಕಾರ ಬಜೆಟ್‌ನಲ್ಲಿ ವಾರ್ಷಿಕವಾಗಿ ರೂ. 1000 ಕೋಟಿಗಳನ್ನು ಕಾಯ್ದಿರಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು. ಇದಕ್ಕೆ ವಿಧಾನ ಪರಿಷತ್ ಶಾಸಕ ಮರಿತಿಬ್ಬೇಗೌಡ ಸಹಮತ ಸೂಚಿಸಿದರು.

ಮೈಸೂರಿನಲ್ಲಿ ಒಟ್ಟಾರೆ ೨೩೪ ಪಾರಂಪರಿಕ ಕಟ್ಟಡಗಳಿವೆ. ಈ ಪೈಕಿ ೧೩೧ ಕಟ್ಟಡಗಳನ್ನು ಸರ್ಕಾರ ಮಾನ್ಯ ಮಾಡಿದೆ. ಇದರಲ್ಲಿ 24 ಕಟ್ಟಡಗಳಿಗೆ ತುರ್ತಾಗಿ ದುರಸ್ತಿಯ ಅವಶ್ಯಕತೆ ಇದೆ ಎಂದು ಪಾರಂಪರಿಕ ತಜ್ಞರು ವರದಿ ನೀಡಿದ್ದಾರೆ.

-ಸಿ.ಎನ್.ಮಂಜೇಗೌಡ, ವಿಧಾನಪರಿಷತ್ ಸದಸ್ಯ

andolanait

Recent Posts

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

3 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

3 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

3 hours ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

3 hours ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

3 hours ago

ಚಾ.ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜೆ.ಯೋಗೇಶ್ ನೇಮಕ

ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ  ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…

4 hours ago