ಜಿಲ್ಲೆಗಳು

ಕಡಕೋಳ ಬಳಿ ಪ್ರಧಾನಿ ಸಹೋದರನ ಕಾರು ಅಪಘಾತ: ಐವರು ಆಸ್ಪತ್ರೆಗೆ ದಾಖಲು

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರು ಪ್ರಯಾಣಿಸುತ್ತಿದ್ದ ಕಾರು ಮಂಗಳವಾರ ಮೈಸೂರು ತಾಲೂಕಿನ ಕಡಕೊಳ ಬಳಿ ಅಪಘಾತಕ್ಕೀಡಾಗಿದ್ದು, ಪ್ರಹ್ಲಾದ್ ಮೋದಿ, ಅವರ ಪುತ್ರ ಹಾಗೂ ಸೊಸೆ ಗಂಭೀರವಾಗಿ ಗಾಯಗೊಂಡಿದ್ದಾರೆ.


ಪ್ರಹ್ಲಾದ್ ಮೋದಿ ಅವರು ಮಂಗಳವಾರ ಬೆಳಗ್ಗೆ ಬೆಂಗಳೂರಿನಿಂದ ಬಂಡೀಪುರಕ್ಕೆ ಮರ್ಸಿಡಿಸ್ ಬೆಂಜ್ ಕಾರಿನಲ್ಲಿ ಖಾಸಗಿ ಪ್ರವಾಸಕ್ಕೆ ಆಗಮಿಸುತ್ತಿದ್ದ ವೇಳೆ ಕಡಕೋಳ ಕೈಗಾರಿಕಾ ಪ್ರದೇಶದ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.
ಕಾರಿನಲ್ಲಿ ಪ್ರಹ್ಲಾದ್ ಮೋದಿ, ಅವರ ಮಗ, ಸೊಸೆ, ಮೊಮ್ಮಗ ಮತ್ತು ಚಾಲಕ ಇದ್ದರು. ಗಾಯಗೊಂಡಿರುವ ಅವರನ್ನು ಕೂಡಲೇ ಮೈಸೂರಿನ ಎಂಜಿ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಪ್ರಹ್ಲಾದ್ ಮೋದಿ ಅವರ ದವಡೆಗೆ ಗಾಯಗಳಾಗಿದ್ದು, ಅವರ ಸೊಸೆ ತಲೆಗೆ ಗಾಯವಾಗಿದೆ. ಇತರರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಮೈಸೂರು ಎಸ್ಪಿ ಸೀಮಾ ಲಾಟ್ಕರ್ ಅವರು ಸ್ಥಳಕ್ಕೆ ಭೇಟಿ ನೀಡಿದ್ದು, ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿದರು. ಅಲ್ಲದೆ ಮುಖ್ಯಮಂತ್ರಿಯವರ ಕಾರ್ಯಾಲಯಕ್ಕೆ ಮಾಹಿತಿ ನೀಡಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಶಾಸಕ ರಾಮದಾಸ್, ಜೆಎಸ್‌ ಎಸ್‌ ಸಮೂಹ ಸಂಸ್ಥೆಗಳ ಕಾರ್ಯದರ್ಶಿ ಎಸ್‌ ಪಿ ಮಂಜುನಾಥ್‌ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

7 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

16 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

16 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

16 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

18 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

19 hours ago