ಹೇಮಂತ್ ಕುಮಾರ್
ಮಂಡ್ಯ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಹಿರತಕ್ಷಣೆಗಿರುವ ಸಮಾಜ ಕಲ್ಯಾಣ ಇಲಾಖೆಯು ಜಿಲ್ಲೆಯಲ್ಲಿ ಹಲವಾರು ಅಭಿವೃದ್ಧಿ ಕೆಲಸಗಳನ್ನು ಕೈಗೊಂಡಿದೆ ಎಂದು ಇಲಾಖೆಯ ಉಪನಿರ್ದೇಶಕ ರಂಗೇಗೌಡ ಅವರು ‘ಆಂದೋಲನ’ ಸಂದರ್ಶನದಲ್ಲಿ ವಿವರಿಸಿದ್ದಾರೆ.
ಪ್ರಶ್ನೆ: ಸವಾಜ ಕಲ್ಯಾಣ ಇಲಾಖೆಯ ಹಿನ್ನೆಲೆ ಏನು?
ಭಾರತದ ಸಂವಿಧಾನವು ಪರಿಶಿಷ್ಟ ಜಾತಿಗಳು, ಪಂಗಡಗಳು ಮತ್ತು ಜನಸಂಖ್ಯೆಯ ಇತರ ದುರ್ಬಲ ವರ್ಗಗಳ ಕಲ್ಯಾಣಕ್ಕಾಗಿ ಕೆಲವು ವಿಶೇಷ ಸಾಂವಿಧಾನಿಕ ಸುರಕ್ಷತೆಗಳನ್ನು ಒದಗಿಸುತ್ತದೆ. ಇದರಿಂದಾಗಿ ಅವರು ಸಮುದಾಯದಲ್ಲಿ ತಮ್ಮ ಸರಿಯಾದ ಸ್ಥಾನವನ್ನು ಪಡೆದುಕೊಳ್ಳಬಹುದು.
ಭಾರತದ ಪ್ರಜೆಗಳಾಗಿ ಕೆಲವು ಹಕ್ಕುಗಳು ಮತ್ತು ಸವಲತ್ತುಗಳಿಗೆ ಸಂಪೂರ್ಣವಾಗಿ ಅರ್ಹರಾಗಿದ್ದಾರೆ. ಅವುಗಳನ್ನು ಹಿಂದೆ ಜಾತಿ ವ್ಯವಸ್ಥೆ ಮತ್ತು ಅಸ್ಪೃಶ್ಯತೆಯ ಆಚರಣೆಯ ಆಧಾರದ ಮೇಲೆ ನಿರಾಕರಿಸಲಾಗಿತ್ತು. ಸಾಂವಿಧಾನಿಕ ಆದೇಶವನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರವು ಸವಾಜ ಕಲ್ಯಾಣ ಇಲಾಖೆಯ ಮೂಲಕ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಪ್ರಗತಿಗಾಗಿ ವಿವಿಧ ಕಾರ್ಯಕ್ರಮಗಳು ಮತ್ತು ಯೋಜನೆಗಳನ್ನು ರೂಪಿಸಿದೆ.
ಪ್ರಶ್ನೆ: ಇಲಾಖೆಯ ಸ್ವರೂಪ ಹಿಂದೆ ಹೇಗಿತ್ತು- ಪ್ರಸ್ತುತ ಹೇಗಿದೆ?
೧೯೫೬ಕ್ಕಿಂತ ಮೊದಲು ಸಮಾಜ ಕಲ್ಯಾಣ ಇಲಾಖೆಯನ್ನು ಖಿನ್ನತೆಗೆ ಒಳಗಾದ ವರ್ಗಗಳ ಇಲಾಖೆ ಎಂದು ಕರೆಯಲಾಗುತ್ತಿತ್ತು. ಹೆಚ್ಚುವರಿ ಅಭಿವೃದ್ಧಿ ಆಯುಕ್ತರೊಂದಿಗೆ ಖಿನ್ನತೆಗೆ ಒಳಗಾದ ವರ್ಗಗಳ ಆಯುಕ್ತರು ಇದರ ನೇತೃತ್ವ ವಹಿಸಿದ್ದರು. ಎಸ್ಸಿ, ಎಸ್ಟಿ, ಡಿನೋಟಿಫೈಡ್ ಬುಡಕಟ್ಟುಗಳು, ಅಲೆಮಾರಿ ಮತ್ತು ಅರೆ ಅಲೆವಾರಿ ಬುಡಕಟ್ಟುಗಳು ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾದ ಯೋಜನೆಗಳ ಉಸ್ತುವಾರಿ ವಹಿಸಿದ್ದರು.
೧೯೫೬ರಲ್ಲಿ ಇಲಾಖೆಯನ್ನು ಸಮಾಜ ಕಲ್ಯಾಣ ಇಲಾಖೆ ಎಂದು ಹೆಸರಿಸಲಾಯಿತು ಮತ್ತು ೧೯೫೯ರಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗಳು ಎಂದು ಮರು ನಿಯೋಜಿಸಲಾಯಿತು. ೧೯೭೫ರಲ್ಲಿ, ಅಂಗವಿಕಲರ ಕಲ್ಯಾಣದೊಂದಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣವನ್ನು ಪ್ರತ್ಯೇಕ ಇಲಾಖೆಯಾಗಿ ಪ್ರತ್ಯೇಕಿಸಲಾಯಿತು. ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಇಲಾಖೆಯ ೧೯೭೭ರಲ್ಲಿ ಬೇರ್ಪಟ್ಟಿತು ಮತ್ತು ೧೯೯೮ರಲ್ಲಿ ಬುಡಕಟ್ಟು ಕಲ್ಯಾಣ ಇಲಾಖೆಯನ್ನು ಈ ಇಲಾಖೆಯಿಂದ ಪ್ರತ್ಯೇಕಿಸಲಾಯಿತು.
ಪ್ರಶ್ನೆ: ಇಲಾಖೆ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಎಷ್ಟು ವೆಚ್ಚ ಮಾಡಲಾಗಿದೆ?
೨೦೨೧-೨೨ನೇ ಸಾಲಿನಲ್ಲಿ ಮಂಡ್ಯ ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಜಿಲ್ಲಾ ಪಂಚಾಯಿತಿ ಕಾರ್ಯಕ್ರಮಗಳಿಗೆ ಸುಮಾರು ೨೦೩೮.೪೪ ಲಕ್ಷ ರೂ. ಬಿಡುಗಡೆಯಾಗಿದೆ. ಈ ಪೈಕಿ ೧೯೧೮.೮೨ ಲಕ್ಷ ರೂ. ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯಕ್ರಮಗಳಿಗೆ ೧೮೪೩.೫೦ ಲಕ್ಷ ರೂ.ಗಳು ಬಿಡುಗಡೆಯಾಗಿದ್ದು, ೧೬೮೪.೧೯ ಲಕ್ಷ ರೂ.ಗಳನ್ನು ವೆಚ್ಚ ಮಾಡಲಾಗಿದೆ. ಒಟ್ಟಾರೆ ೩೩,೬೦೩.೦೧ ಲಕ್ಷ ರೂ.ಗಳನ್ನು ವೆಚ್ಚ ಮಾಡಲಾಗಿದೆ.
೨೦೨೨-೨೩ನೇ ಸಾಲಿಗೆ ಮಂಡ್ಯ ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಜಿಲ್ಲಾ ಪಂಚಾಯಿತಿ ಕಾರ್ಯಕ್ರಮಗಳಿಗೆ ೧೬೩೭.೬೩ ಲಕ್ಷ ರೂ. ನಿಗದಿಯಾಗಿದ್ದು, ಸರ್ಕಾರದಿಂದ ೧೨೨೮.೨೩ ಲಕ್ಷ ರೂ.ಬಿಡುಗಡೆಯಾಗಿದೆ. ಈ ಪೈಕಿ ೨೦೨೨ರ ಅಕ್ಟೋಬರ್ ಅಂತ್ಯಕ್ಕೆ ೬೫೭.೯೪ ಲಕ್ಷ ರೂ.ಗಳನ್ನು ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯಕ್ರಮಗಳಿಗೆ ನಿಗದಿಯಾಗಿರುವ ೧೮೧೨.೮೦ ಲಕ್ಷ ರೂ.ಪೈಕಿ, ಬಿಡುಗಡೆ ಆಗಿರುವ ೧೨೪೬.೧೩ ಲಕ್ಷ ರೂ.ಗಳಲ್ಲಿ ಅ.೨೦೨೨ರ ಅಂತ್ಯಕ್ಕೆ ೫೭೧.೪೦ ಲಕ್ಷ ರೂ.ಗಳನ್ನು ವೆಚ್ಚ ಮಾಡಲಾಗಿದೆ.
ಪ್ರಶ್ನೆ: ವಿದ್ಯಾರ್ಥಿನಿಲಯಗಳ ಸೌಲಭ್ಯ ಹೇಗಿದೆ?
ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗಾಗಿ ಜಿಲ್ಲೆಯಲ್ಲಿ ೪೬ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳು, ೨೧ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳು, ೧ ಅನುದಾನಿತ ವಿದ್ಯಾರ್ಥಿನಿಲಯಗಳಿವೆ. ಈ ಸಂಸ್ಥೆಗಳಲ್ಲಿ ಒಟ್ಟು ೩೯೦೫ ವಿದ್ಯಾರ್ಥಿಗಳ ವಾಸ್ತವ್ಯಕ್ಕೆ ಅವಕಾಶ ನೀಡಿ ಉಚಿತ ಊಟ, ವಸತಿ ಮತ್ತು ಸಮವಸ್ತ್ರ ವ್ಯವಸ್ಥೆಗಳನ್ನು ಕಲ್ಪಿಸಿ ವ್ಯಾಸಂಗಕ್ಕೆ ಅನುಕೂಲ ಮಾಡಲಾಗಿದೆ. ಜಿಲ್ಲೆಯಲ್ಲಿ ಪರಿಶಿಷ್ಟ ವರ್ಗದ ಮಕ್ಕಳಿಗಾಗಿ ೧ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯ, ೧ ಆಶ್ರಮ ಶಾಲೆ ಕಾರ್ಯನಿರ್ವಹಿಸುತ್ತಿದ್ದು, ಇವುಗಳಲ್ಲಿ ೫೬ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ಸಮವಸ್ತ್ರ, ಪಠ್ಯ-ಪುಸ್ತಕ, ಭೋಜನ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ.
ಪ್ರಶ್ನೆ: ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆಯಲ್ಲಿ ಅನುದಾನವಿದೆಯಾ?
೨೦೧೮-೧೯ ಮತ್ತು ೨೦೧೯-೨೦ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ಮಂಡ್ಯ ಜಿಲ್ಲೆಯಲ್ಲಿ ಆಯ್ಕೆಯಾಗಿರುವ ೨೪ ಗ್ರಾಮಗಳಲ್ಲಿ ಪ್ರತಿ ಗ್ರಾಮಕ್ಕೂ ೪೦ ಲಕ್ಷ ರೂ. ವೆಚ್ಚದಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ೯೬೦ ಲಕ್ಷ ರೂ.ಗಳು ಮಂಜೂರಾಗಿದೆ. ಈ ಪೈಕಿ ಇದುವರೆಗೂ ೪೭೮.೫೭ ಲಕ್ಷ ರೂ.ಗಳನ್ನು ವೆಚ್ಚ ಮಾಡಲಾಗಿದೆ.
೨೦೧೯-೨೦ನೇ ಸಾಲಿನಲ್ಲಿ ಕೆ.ಆರ್.ಪೇಟೆ ತಾಲ್ಲೂಕಿನ ವ್ಯಾಪ್ತಿಯಲ್ಲಿ ಬರುವ ತೆರ್ನೇನಹಳ್ಳಿ ಮತ್ತು ಬಂಡಿಹೊಳೆ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ೧೦೦ ಲಕ್ಷ ರೂ. ವೆಚ್ಚದಲ್ಲಿ ಸಿ.ಸಿ.ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳಲು ಮಂಜೂರಾತಿ ನೀಡಿ, ಈ ಬಾಬ್ತು ೩೦ ಲಕ್ಷ ರೂ.ಗಳ ಬಿಡುಗಡೆ ಆಗಿರುತ್ತದೆ. ಸದರಿ ಅನುದಾನವನ್ನು ವೆಚ್ಚ ಮಾಡಲಾಗಿದೆ.
ಪ್ರಶ್ನೆ: ಪರಿಶಿಷ್ಟರ ಸಾಮಾಜಿಕ ಅಭಿವೃದ್ಧಿಗೆ ಕೈಗೊಂಡಿರುವ ಕ್ರಮವೇನು?
೨೦೨೦-೨೧ನೇ ಸಾಲಿನಲ್ಲಿ ಮದ್ದೂರು ತಾಲ್ಲೂಕಿನ ೩೧ ಗ್ರಾಮಗಳ ವ್ಯಾಪಿುಂಲ್ಲಿ ಬರುವ ಪರಿಶಿಷ್ಟ ಜಾತಿ ಕಾಲೋನಿಗಳಲ್ಲಿ ೭೬೦ ಲಕ್ಷ ರೂ. ವೆಚ್ಚದಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಮಂಜೂರಾತಿ ನೀಡಿ, ಈ ಬಾಬ್ತು ೨೩೭.೩೦ ಲಕ್ಷ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಿದ್ದು, ಸದರಿ ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ವೆಚ್ಚ ಮಾಡಲಾಗಿದೆ ಎಂದು ಇಲಾಖೆಯ ಉಪನಿರ್ದೇಶಕ ರಂಗೇಗೌಡ ತಿಳಿಸಿದ್ದಾರೆ.
ಹೊಸದಿಲ್ಲಿ : ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಾವು ಮತಕಳ್ಳತನದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಇದರಲ್ಲಿ…
ಚಿಕ್ಕಮಗಳೂರು : ಅದೊಂದು ಬಹುಕಾಲದ ಪ್ರೀತಿ, ಪ್ರೀತಿ ಮಾಡಿ, ಪ್ರೇಯಸಿಯಿಂದ ಹಣ ಪಡೆದು, ಇದೀಗ ಬೇರೊಂದು ಮದುವೆಗೆ ಸಿದ್ಧವಾಗಿದ್ದ ಹುಡಗ…
ಬಂಡೀಪುರ, ನಾಗರಹೊಳೆಯಲ್ಲಿ ಹೊಸ ವರ್ಷ ಆಚರಿಸಲು ಬಯಸಿದವರಿಗೆ ನಿರಾಸೆ ರೆಸಾರ್ಟ್, ಹೋಟೆಲ್ ಮಾಲೀಕರಿಂದ ಸಫಾರಿ ಪುನಾರಂಭಕ್ಕೆ ಒತ್ತಡ? ಮೈಸೂರು :…
ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…
ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…
ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…