ಜಿಲ್ಲೆಗಳು

‘ಪ.ಜಾತಿ-ಪಂಗಡಗಳ ಅಭಿವೃದ್ಧಿಗೆ ಆದ್ಯತೆ’

‘ಆಂದೋಲನ’ ಸಂದರ್ಶನದಲ್ಲಿ ಇಲಾಖೆಯ ಉಪನಿರ್ದೇಶಕ ರಂಗೇಗೌಡ

ಹೇಮಂತ್ ಕುಮಾರ್

ಮಂಡ್ಯ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಹಿರತಕ್ಷಣೆಗಿರುವ ಸಮಾಜ ಕಲ್ಯಾಣ ಇಲಾಖೆಯು ಜಿಲ್ಲೆಯಲ್ಲಿ ಹಲವಾರು ಅಭಿವೃದ್ಧಿ ಕೆಲಸಗಳನ್ನು ಕೈಗೊಂಡಿದೆ ಎಂದು ಇಲಾಖೆಯ ಉಪನಿರ್ದೇಶಕ ರಂಗೇಗೌಡ ಅವರು ‘ಆಂದೋಲನ’ ಸಂದರ್ಶನದಲ್ಲಿ ವಿವರಿಸಿದ್ದಾರೆ.

ಪ್ರಶ್ನೆ: ಸವಾಜ ಕಲ್ಯಾಣ ಇಲಾಖೆಯ ಹಿನ್ನೆಲೆ ಏನು?

ಭಾರತದ ಸಂವಿಧಾನವು ಪರಿಶಿಷ್ಟ ಜಾತಿಗಳು, ಪಂಗಡಗಳು ಮತ್ತು ಜನಸಂಖ್ಯೆಯ ಇತರ ದುರ್ಬಲ ವರ್ಗಗಳ ಕಲ್ಯಾಣಕ್ಕಾಗಿ ಕೆಲವು ವಿಶೇಷ ಸಾಂವಿಧಾನಿಕ ಸುರಕ್ಷತೆಗಳನ್ನು ಒದಗಿಸುತ್ತದೆ. ಇದರಿಂದಾಗಿ ಅವರು ಸಮುದಾಯದಲ್ಲಿ ತಮ್ಮ ಸರಿಯಾದ ಸ್ಥಾನವನ್ನು ಪಡೆದುಕೊಳ್ಳಬಹುದು.

ಭಾರತದ ಪ್ರಜೆಗಳಾಗಿ ಕೆಲವು ಹಕ್ಕುಗಳು ಮತ್ತು ಸವಲತ್ತುಗಳಿಗೆ ಸಂಪೂರ್ಣವಾಗಿ ಅರ್ಹರಾಗಿದ್ದಾರೆ. ಅವುಗಳನ್ನು ಹಿಂದೆ ಜಾತಿ ವ್ಯವಸ್ಥೆ ಮತ್ತು ಅಸ್ಪೃಶ್ಯತೆಯ ಆಚರಣೆಯ ಆಧಾರದ ಮೇಲೆ ನಿರಾಕರಿಸಲಾಗಿತ್ತು. ಸಾಂವಿಧಾನಿಕ ಆದೇಶವನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರವು ಸವಾಜ ಕಲ್ಯಾಣ ಇಲಾಖೆಯ ಮೂಲಕ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಪ್ರಗತಿಗಾಗಿ ವಿವಿಧ ಕಾರ್ಯಕ್ರಮಗಳು ಮತ್ತು ಯೋಜನೆಗಳನ್ನು ರೂಪಿಸಿದೆ.

ಪ್ರಶ್ನೆ: ಇಲಾಖೆಯ ಸ್ವರೂಪ ಹಿಂದೆ ಹೇಗಿತ್ತು- ಪ್ರಸ್ತುತ ಹೇಗಿದೆ?

೧೯೫೬ಕ್ಕಿಂತ ಮೊದಲು ಸಮಾಜ ಕಲ್ಯಾಣ ಇಲಾಖೆಯನ್ನು ಖಿನ್ನತೆಗೆ ಒಳಗಾದ ವರ್ಗಗಳ ಇಲಾಖೆ ಎಂದು ಕರೆಯಲಾಗುತ್ತಿತ್ತು. ಹೆಚ್ಚುವರಿ ಅಭಿವೃದ್ಧಿ ಆಯುಕ್ತರೊಂದಿಗೆ ಖಿನ್ನತೆಗೆ ಒಳಗಾದ ವರ್ಗಗಳ ಆಯುಕ್ತರು ಇದರ ನೇತೃತ್ವ ವಹಿಸಿದ್ದರು. ಎಸ್‌ಸಿ, ಎಸ್‌ಟಿ, ಡಿನೋಟಿಫೈಡ್ ಬುಡಕಟ್ಟುಗಳು, ಅಲೆಮಾರಿ ಮತ್ತು ಅರೆ ಅಲೆವಾರಿ ಬುಡಕಟ್ಟುಗಳು ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾದ ಯೋಜನೆಗಳ ಉಸ್ತುವಾರಿ ವಹಿಸಿದ್ದರು.

೧೯೫೬ರಲ್ಲಿ ಇಲಾಖೆಯನ್ನು ಸಮಾಜ ಕಲ್ಯಾಣ ಇಲಾಖೆ ಎಂದು ಹೆಸರಿಸಲಾಯಿತು ಮತ್ತು ೧೯೫೯ರಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗಳು ಎಂದು ಮರು ನಿಯೋಜಿಸಲಾಯಿತು. ೧೯೭೫ರಲ್ಲಿ, ಅಂಗವಿಕಲರ ಕಲ್ಯಾಣದೊಂದಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣವನ್ನು ಪ್ರತ್ಯೇಕ ಇಲಾಖೆಯಾಗಿ ಪ್ರತ್ಯೇಕಿಸಲಾಯಿತು. ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಇಲಾಖೆಯ ೧೯೭೭ರಲ್ಲಿ ಬೇರ್ಪಟ್ಟಿತು ಮತ್ತು ೧೯೯೮ರಲ್ಲಿ ಬುಡಕಟ್ಟು ಕಲ್ಯಾಣ ಇಲಾಖೆಯನ್ನು ಈ ಇಲಾಖೆಯಿಂದ ಪ್ರತ್ಯೇಕಿಸಲಾಯಿತು.

ಪ್ರಶ್ನೆ: ಇಲಾಖೆ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಎಷ್ಟು ವೆಚ್ಚ ಮಾಡಲಾಗಿದೆ?

೨೦೨೧-೨೨ನೇ ಸಾಲಿನಲ್ಲಿ ಮಂಡ್ಯ ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಜಿಲ್ಲಾ ಪಂಚಾಯಿತಿ ಕಾರ್ಯಕ್ರಮಗಳಿಗೆ ಸುಮಾರು ೨೦೩೮.೪೪ ಲಕ್ಷ ರೂ. ಬಿಡುಗಡೆಯಾಗಿದೆ. ಈ ಪೈಕಿ ೧೯೧೮.೮೨ ಲಕ್ಷ ರೂ. ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯಕ್ರಮಗಳಿಗೆ ೧೮೪೩.೫೦ ಲಕ್ಷ ರೂ.ಗಳು ಬಿಡುಗಡೆಯಾಗಿದ್ದು, ೧೬೮೪.೧೯ ಲಕ್ಷ ರೂ.ಗಳನ್ನು ವೆಚ್ಚ ಮಾಡಲಾಗಿದೆ. ಒಟ್ಟಾರೆ ೩೩,೬೦೩.೦೧ ಲಕ್ಷ ರೂ.ಗಳನ್ನು ವೆಚ್ಚ ಮಾಡಲಾಗಿದೆ.

೨೦೨೨-೨೩ನೇ ಸಾಲಿಗೆ ಮಂಡ್ಯ ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಜಿಲ್ಲಾ ಪಂಚಾಯಿತಿ ಕಾರ್ಯಕ್ರಮಗಳಿಗೆ ೧೬೩೭.೬೩ ಲಕ್ಷ ರೂ. ನಿಗದಿಯಾಗಿದ್ದು, ಸರ್ಕಾರದಿಂದ ೧೨೨೮.೨೩ ಲಕ್ಷ ರೂ.ಬಿಡುಗಡೆಯಾಗಿದೆ. ಈ ಪೈಕಿ ೨೦೨೨ರ ಅಕ್ಟೋಬರ್ ಅಂತ್ಯಕ್ಕೆ ೬೫೭.೯೪ ಲಕ್ಷ ರೂ.ಗಳನ್ನು ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯಕ್ರಮಗಳಿಗೆ ನಿಗದಿಯಾಗಿರುವ ೧೮೧೨.೮೦ ಲಕ್ಷ ರೂ.ಪೈಕಿ, ಬಿಡುಗಡೆ ಆಗಿರುವ ೧೨೪೬.೧೩ ಲಕ್ಷ ರೂ.ಗಳಲ್ಲಿ ಅ.೨೦೨೨ರ ಅಂತ್ಯಕ್ಕೆ ೫೭೧.೪೦ ಲಕ್ಷ ರೂ.ಗಳನ್ನು ವೆಚ್ಚ ಮಾಡಲಾಗಿದೆ.

ಪ್ರಶ್ನೆ: ವಿದ್ಯಾರ್ಥಿನಿಲಯಗಳ ಸೌಲಭ್ಯ ಹೇಗಿದೆ?

ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗಾಗಿ ಜಿಲ್ಲೆಯಲ್ಲಿ ೪೬ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳು, ೨೧ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳು, ೧ ಅನುದಾನಿತ ವಿದ್ಯಾರ್ಥಿನಿಲಯಗಳಿವೆ. ಈ ಸಂಸ್ಥೆಗಳಲ್ಲಿ ಒಟ್ಟು ೩೯೦೫ ವಿದ್ಯಾರ್ಥಿಗಳ ವಾಸ್ತವ್ಯಕ್ಕೆ ಅವಕಾಶ ನೀಡಿ ಉಚಿತ ಊಟ, ವಸತಿ ಮತ್ತು ಸಮವಸ್ತ್ರ ವ್ಯವಸ್ಥೆಗಳನ್ನು ಕಲ್ಪಿಸಿ ವ್ಯಾಸಂಗಕ್ಕೆ ಅನುಕೂಲ ಮಾಡಲಾಗಿದೆ. ಜಿಲ್ಲೆಯಲ್ಲಿ ಪರಿಶಿಷ್ಟ ವರ್ಗದ ಮಕ್ಕಳಿಗಾಗಿ ೧ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯ, ೧ ಆಶ್ರಮ ಶಾಲೆ ಕಾರ್ಯನಿರ್ವಹಿಸುತ್ತಿದ್ದು, ಇವುಗಳಲ್ಲಿ ೫೬ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ಸಮವಸ್ತ್ರ, ಪಠ್ಯ-ಪುಸ್ತಕ, ಭೋಜನ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ.

ಪ್ರಶ್ನೆ: ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆಯಲ್ಲಿ ಅನುದಾನವಿದೆಯಾ?

೨೦೧೮-೧೯ ಮತ್ತು ೨೦೧೯-೨೦ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ಮಂಡ್ಯ ಜಿಲ್ಲೆಯಲ್ಲಿ ಆಯ್ಕೆಯಾಗಿರುವ ೨೪ ಗ್ರಾಮಗಳಲ್ಲಿ ಪ್ರತಿ ಗ್ರಾಮಕ್ಕೂ ೪೦ ಲಕ್ಷ ರೂ. ವೆಚ್ಚದಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ೯೬೦ ಲಕ್ಷ ರೂ.ಗಳು ಮಂಜೂರಾಗಿದೆ. ಈ ಪೈಕಿ ಇದುವರೆಗೂ ೪೭೮.೫೭ ಲಕ್ಷ ರೂ.ಗಳನ್ನು ವೆಚ್ಚ ಮಾಡಲಾಗಿದೆ.

೨೦೧೯-೨೦ನೇ ಸಾಲಿನಲ್ಲಿ ಕೆ.ಆರ್.ಪೇಟೆ ತಾಲ್ಲೂಕಿನ ವ್ಯಾಪ್ತಿಯಲ್ಲಿ ಬರುವ ತೆರ್ನೇನಹಳ್ಳಿ ಮತ್ತು ಬಂಡಿಹೊಳೆ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ೧೦೦ ಲಕ್ಷ ರೂ. ವೆಚ್ಚದಲ್ಲಿ ಸಿ.ಸಿ.ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳಲು ಮಂಜೂರಾತಿ ನೀಡಿ, ಈ ಬಾಬ್ತು ೩೦ ಲಕ್ಷ ರೂ.ಗಳ ಬಿಡುಗಡೆ ಆಗಿರುತ್ತದೆ. ಸದರಿ ಅನುದಾನವನ್ನು ವೆಚ್ಚ ಮಾಡಲಾಗಿದೆ.

ಪ್ರಶ್ನೆ: ಪರಿಶಿಷ್ಟರ ಸಾಮಾಜಿಕ ಅಭಿವೃದ್ಧಿಗೆ ಕೈಗೊಂಡಿರುವ ಕ್ರಮವೇನು?

೨೦೨೦-೨೧ನೇ ಸಾಲಿನಲ್ಲಿ ಮದ್ದೂರು ತಾಲ್ಲೂಕಿನ ೩೧ ಗ್ರಾಮಗಳ ವ್ಯಾಪಿುಂಲ್ಲಿ ಬರುವ ಪರಿಶಿಷ್ಟ ಜಾತಿ ಕಾಲೋನಿಗಳಲ್ಲಿ ೭೬೦ ಲಕ್ಷ ರೂ. ವೆಚ್ಚದಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಮಂಜೂರಾತಿ ನೀಡಿ, ಈ ಬಾಬ್ತು ೨೩೭.೩೦ ಲಕ್ಷ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಿದ್ದು, ಸದರಿ ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ವೆಚ್ಚ ಮಾಡಲಾಗಿದೆ ಎಂದು ಇಲಾಖೆಯ ಉಪನಿರ್ದೇಶಕ ರಂಗೇಗೌಡ ತಿಳಿಸಿದ್ದಾರೆ.

andolana

Recent Posts

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

5 hours ago

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

7 hours ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

9 hours ago

ಮ.ಬೆಟ್ಟ | ಮರದ ಕೊಂಬೆ ಬಿದ್ದು ಮೂವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…

11 hours ago

ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರು: ಆನ್‍ಲೈನ್‍ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಮಿಶ್ರ…

14 hours ago

ಯಳಂದೂರು: ಬೋನಿಗೆ ಬಿದ್ದ ಚಿರತೆ

ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…

14 hours ago