ಜಿಲ್ಲೆಗಳು

ಖಾಸಗಿ ಬಸ್‌-ಗೂಡ್ಸ್‌ ಆಟೋ ಮುಖಾಮುಖಿ ಡಿಕ್ಕಿ : ಹಲವರಿಗೆ ಗಾಯ

ಹನೂರು : ಖಾಸಗಿ ಬಸ್ ಹಾಗೂ ಗೂಡ್ಸ್ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಐವರು ಗಾಯಗೊಂಡು ಇಬ್ಬರು ತೀವ್ರ ಗಾಯಗೊಂಡಿರುವ ಘಟನೆ ಎಲ್ಲೇಮಾಳ ಸಮೀಪದ ಆಂಜನೇಯ ದೇವಾಲಯದ ಬಳಿ ಜರುಗಿದೆ.

ಮೈಸೂರಿನ ಜನತಾ ನಗರದ ನಿವಾಸಿಗಳಾದ ಒಂದೇ ಕುಟುಂಬದ ಪವಿತ್ರ(10), ಪೂಜಾ(23), ಮಹದೇವಮ್ಮ(40), ಜಯಲಕ್ಷ್ಮಿ(18), ಸೇರಿದಂತೆ ಮಂಜುಳಾ (40)ರವರು ಗಾಯಗೊಂಡಿದ್ದಾರೆ.

ಮೈಸೂರಿನಿಂದ ಮಲೆ ಮಾದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಗೂಡ್ಸ್ ಆಟೋಗೆ ಮಲೆ ಮಹದೇಶ್ವರ ಬೆಟ್ಟದಿಂದ ಕೊಳ್ಳೇಗಾಲ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಶುಕ್ರವಾರ ಸಂಜೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆಟೋದ ಹಿಂಬದಿಯಲ್ಲಿ ಕುಳಿತಿದ್ದ ಐವರು ಗಾಯಗೊಂಡಿದ್ದಾರೆ. ತಕ್ಷಣ ದಾರಿ ಹೋಕರು 108 ಆಂಬುಲೆನ್ಸ್ ಸಿಬ್ಬಂದಿಗೆ ಕರೆ ಮಾಡಿದ್ದಾರೆ.


ತಕ್ಷಣ ಸ್ಥಳಕ್ಕಾಗಮಿಸಿದ ತುರ್ತು ವೈದ್ಯಕೀಯ ಸಿಬ್ಬಂದಿ ಮೂರ್ತಿ ಹಾಗೂ ಚಾಲಕ ಕೃಷ್ಣ ಪ್ರಥಮ ಚಿಕಿತ್ಸೆ ನೀಡಿ ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.ಈ ಪೈಕಿ ಜಯಲಕ್ಷ್ಮಿ ರವರ ತಲೆಗೆ ಅತಿಯಾದ ಪೆಟ್ಟು ಬಿದ್ದಿರುವುದರಿಂದ ಹಾಗೂ ಮಹದೇವರಮ್ಮ ರವರಿಗೆ ಬೆನ್ನು ಮೂಳೆ ಮುರಿದಿರುವುದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

andolanait

Recent Posts

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

7 hours ago

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

7 hours ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

7 hours ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

7 hours ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

7 hours ago

ಬೆಂಗಳೂರು ಕೈತಪ್ಪಿದ ಐಪಿಎಲ್‌ ಫೈನಲ್‌ ಪಂದ್ಯ : ಕೆಎಸ್‌ಸಿಎ ಹೇಳಿದ್ದೇನು?

ಬೆಂಗಳೂರು : ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…

8 hours ago