ಪಿರಿಯಾಪಟ್ಟಣ: ತಾಲ್ಲೂಕಿನ ಗೋಣಿಕೊಪ್ಪ ರಸ್ತೆಯಲ್ಲಿರುವ ಸಂತ ಮರಿಯಮ್ಮ ಚರ್ಚ್ಗೆ ಅಪರಿಚಿತರು ನುಗ್ಗಿ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ರೂಪಿಸಲಾಗಿದ್ದ ಬಾಲ ಯೇಸು ಪ್ರತಿಮೆಯನ್ನು ಭಗ್ನಗೊಳಿಸಿ ಪರಾರಿಯಾಗಿರುವ ಘಟನೆ ನಡೆದಿದೆ.
ಕ್ರಿಸ್ಮಸ್ ಹಬ್ಬದ ಅಂಗವಾಗಿ ಮಂಗಳವಾರ ಬೆಳಿಗ್ಗೆ ಪ್ರಾರ್ಥನೆ ಮುಗಿಸಿ ಚರ್ಚಿನ ಬಾಗಿಲು ಹಾಕಿಕೊಂಡು ತೆರಳಿದ್ದರು. ಸಂಜೆ ೬ ಗಂಟೆ ವೇಳೆ ಪ್ರಾರ್ಥನೆಗೆ ಬಂದ ಫಾದರ್ ಜಾನ್ಪಾಲ್ ಚರ್ಚಿನ ಬಾಗಿಲು ಮುರಿದು, ಬಾಲ ಯೇಸು ಪ್ರತಿಮೆ ಭಗ್ನಗೊಂಡಿರುವುದು, ಕಾಣಿಕೆ ಹುಂಡಿಯನ್ನು ಒಡೆದು ಹಣವನ್ನು ದೋಚಿರುವುದು ತಿಳಿದುಬಂದಿದೆ.
ನಂತರ ಫಾ.ಜಾನ್ಪಾಲ್ ಅವರು ಪಿರಿಯಾಪಟ್ಟಣ ಠಾಣೆಗೆ ತೆರಳಿ, ದುರುಳರು ಚರ್ಚಿಗೆ ಅಕ್ರಮವಾಗಿ ಪ್ರವೇಶ ಮಾಡಿ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಬಾಲ ಯೇಸು ಪ್ರತಿಮೆ ಮತ್ತಿತರ ವಸ್ತುಗಳನ್ನು ನಾಶ ಮಾಡಿದ್ದಾರೆ ಎಂದು ದೂರು ದಾಖಲಿಸಿದ್ದಾರೆ. ಸ್ಥಳಕ್ಕೆ ಇನ್ಸ್ಪೆಕ್ಟರ್ ಶ್ರೀಧರ್, ಎಸ್ಐ ಪುಟ್ಟರಾಜು ಇತರರು ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.
ಇಸ್ಲಾಮಾಬಾದ್: ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್ನಲ್ಲಿ ಅಮೇರಿಕಾ-ಇರಾನ್ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್ ಮೊಹಮ್ಮದ್…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್ ವೇವ್ ಎಚ್ಚರಿಕೆ…
ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…
ನವದೆಹಲಿ: ಇದೇ ಏಪ್ರಿಲ್.15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…
ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…
ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ಗಾಂಧಿ…