ಪಿರಿಯಾಪಟ್ಟಣ: ತಾಲ್ಲೂಕಿನ ಗೋಣಿಕೊಪ್ಪ ರಸ್ತೆಯಲ್ಲಿರುವ ಸಂತ ಮರಿಯಮ್ಮ ಚರ್ಚ್ಗೆ ಅಪರಿಚಿತರು ನುಗ್ಗಿ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ರೂಪಿಸಲಾಗಿದ್ದ ಬಾಲ ಯೇಸು ಪ್ರತಿಮೆಯನ್ನು ಭಗ್ನಗೊಳಿಸಿ ಪರಾರಿಯಾಗಿರುವ ಘಟನೆ ನಡೆದಿದೆ.
ಕ್ರಿಸ್ಮಸ್ ಹಬ್ಬದ ಅಂಗವಾಗಿ ಮಂಗಳವಾರ ಬೆಳಿಗ್ಗೆ ಪ್ರಾರ್ಥನೆ ಮುಗಿಸಿ ಚರ್ಚಿನ ಬಾಗಿಲು ಹಾಕಿಕೊಂಡು ತೆರಳಿದ್ದರು. ಸಂಜೆ ೬ ಗಂಟೆ ವೇಳೆ ಪ್ರಾರ್ಥನೆಗೆ ಬಂದ ಫಾದರ್ ಜಾನ್ಪಾಲ್ ಚರ್ಚಿನ ಬಾಗಿಲು ಮುರಿದು, ಬಾಲ ಯೇಸು ಪ್ರತಿಮೆ ಭಗ್ನಗೊಂಡಿರುವುದು, ಕಾಣಿಕೆ ಹುಂಡಿಯನ್ನು ಒಡೆದು ಹಣವನ್ನು ದೋಚಿರುವುದು ತಿಳಿದುಬಂದಿದೆ.
ನಂತರ ಫಾ.ಜಾನ್ಪಾಲ್ ಅವರು ಪಿರಿಯಾಪಟ್ಟಣ ಠಾಣೆಗೆ ತೆರಳಿ, ದುರುಳರು ಚರ್ಚಿಗೆ ಅಕ್ರಮವಾಗಿ ಪ್ರವೇಶ ಮಾಡಿ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಬಾಲ ಯೇಸು ಪ್ರತಿಮೆ ಮತ್ತಿತರ ವಸ್ತುಗಳನ್ನು ನಾಶ ಮಾಡಿದ್ದಾರೆ ಎಂದು ದೂರು ದಾಖಲಿಸಿದ್ದಾರೆ. ಸ್ಥಳಕ್ಕೆ ಇನ್ಸ್ಪೆಕ್ಟರ್ ಶ್ರೀಧರ್, ಎಸ್ಐ ಪುಟ್ಟರಾಜು ಇತರರು ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…