ಜಿಲ್ಲೆಗಳು

ನಿಗದಿಯಂತೆ ಆರಂಭವಾಗದ ಖರೀದಿ ನೋಂದಣಿ!

ಬೆಂಬಲ ಬೆಲೆಯಡಿ ಭತ್ತ, ರಾಗಿ ಖರೀದಿ ನೋಂದಣಿ ಮರೆತ ಆಡಳಿತ …

ಚಾಮರಾಜನಗರ: ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ೦ ಯೋಜನೆಯಡಿ ಭತ್ತ, ರಾಗಿ ಖರೀದಿಗಾಗಿ ಆರಂಭ ಗೊಳ್ಳಬೇಕಿದ್ದ ರೈತರ ಹೆಸರು ನೋಂದಣಿ ಪ್ರಕ್ರಿಯೆ ಜಿಲ್ಲೆಯಲ್ಲಿ ಮೂರು ದಿನಗಳಾದರೂ ಇನ್ನೂ ಶುರುವಾಗಿಲ್ಲ!
ಸಾಫ್ಟ್ ವೇರ್ ಅಪ್‌ಡೇಟ್ ಸಮಸ್ಯೆ ಎದುರಾಗಿರುವುದು ಮಾತ್ರವಲ್ಲದೇ
ಖರೀದಿ ಏಜೆನ್ಸಿ ಪಡೆದಿರುವ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯಲ್ಲಿನ ಸಿಬ್ಬಂದಿ ಕೊರತೆಯಿಂದಾಗಿ ನಿಗದಿಯಂತೆ ಡಿ.೧೫ರಿಂದ ನೋಂದಣಿ ಪ್ರಾರಂಭಿಸಲಾಗಿಲ್ಲ ಎಂದು ಬಲ್ಲ ಮೂಲಗಳು ತಿಳಿಸಿವೆ.
ಚಾಮರಾಜನಗರ, ಸಂತೇಮರಹಳ್ಳಿ, ಕೊಳ್ಳೇಗಾಲ, ಹನೂರು ಹಾಗೂ ಯಳಂದೂರು  ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಆವರಣದಲ್ಲಿ ಭತ್ತ , ರಾಗಿ ಖರೀದಿಗೆ ಸಂಬಂಧಿಸಿದ ನೊಂದಣಿ ಕೇಂದ್ರವನ್ನು ಗುರುವಾರದಿಂದಲೇ ತೆರೆಯುವುದಾಗಿ ಮಾಧ್ಯಮಗಳ ಮೂಲಕ ಜಿಲ್ಲಾಡಳಿತ ತಿಳಿಸಿತ್ತು.
ಹೀಗಾಗಿ ಜಿಲ್ಲೆಯ ಈ ಐದೂ ಕೇಂದ್ರಗಳಿಗೆ ರೈತರು ಬರತೊಡಗಿದ್ದು ನೊಂದಣಿ ಇನ್ನೂ ಆರಂಭ ಆಗದಿರುವುದನ್ನು ತಿಳಿದು ಅಸಮಾಧಾನ ಹೊರಹಾಕಿದ್ದಾರೆ.
ಗೊತ್ತುಪಡಿಸಿದ ದಿನದಿಂದ ಮಾಡಲಾಗದಿದ್ದರೆ ಯಾವಾಗಿನಿಂದ ನೋಂದಣಿ
ಮಾಡುತ್ತೇವೆ ಎಂಬುದನ್ನಾದರೂ ಕೊನೆ ಪಕ್ಷ ಪತ್ರಿಕೆಗಳ ಮೂಲಕ ಸಂಬಂಧಿ ಸಿದವರು ತಿಳಿಸಬೇಕಿತ್ತು. ಹಾಗೆ ಮಾಡದೆ ನಿರ್ಲಕ್ಷ್ಯ ವಹಿಸಿದ್ದರಿಂದ ಭತ್ತ, ರಾಗಿ ಮಾರಾಟ ಮಾಡುವ ರೈತರು ವಿನಾ ಕಾರಣ ಕೇಂದ್ರಗಳತ್ತ ಅಲೆದು ಬಂದು ಹೋಗುವಂತಾಗಿದೆ ಎಂದು ರೈತ ಜಯಣ್ಣ ತೀವ್ರ ಬೇಸರ ವ್ಯಕ್ತಪಡಿಸಿದರು.
೨೦೨೨-೨೩ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆದಿರುವ ಭತ್ತ , ರಾಗಿಯ  ಕೊಯ್ಲನ್ನು ರೈತರು ಅದಾಗಲೇ ಕೈಗೆತ್ತಿಕೊಂಡಿದ್ದು ಬೆಂಬಲ ಬೆಲೆಯಡಿ ಸಾಮಾನ್ಯ ಭತ್ತಕ್ಕೆ ಕ್ವಿಂಟಾಲ್‌ಗೆ ೨೦೪೦ ರೂ., ಗ್ರೇಡ್-ಎ ಭತ್ತ ಕ್ಕೆ೨೦೬೦ ರೂ., ರಾಗಿಗೆ ೩೫೭೮ ರೂ. ನಿಗದಿ ಪಡಿಸಲಾಗಿದೆ.
ಮುಕ್ತ  ಮಾರುಕಟ್ಟೆಯಲ್ಲೀಗ ಬೆಂಬಲ ಬೆಲೆಗಿಂತ ಧಾರಣೆ ಕಡಿಮೆ ಇದ್ದು ಖರೀದಿ ನೊಂದಣಿ ತಡ ಮಾಡಿದರೆ ರೈತರು ಕಾಯ್ದು ಕೂರುವ ಸಾಧ್ಯತೆ ತುಂಬಾ ಕಡಿಮೆ.
ಒಕ್ಕಣೆ ಸ್ಥಳದಲ್ಲೇ ಮಾರಾಟ ಮಾಡುವ ರೈತರೇ ಯಾವಾಗಲೂ ಹೆಚ್ಚು. ಸಾಕಷ್ಟು ಜಾಗ ಬೇಕಾಗುವುದರಿಂದ ಒಕ್ಕಣೆ ಮಾಡಿದ್ದನ್ನು ಸಂಗ್ರಹ ಮಾಡುವುದು ಕಷ್ಟದ ಕೆಲಸ. ಸಾಲಸೋಲದ ಹಂಗಿನಲ್ಲಿ ಇದ್ದ ರೈತರಂತೂ ಬೆಂಬಲ ಬೆಲೆ ಕಾಯ್ದು ಕೂರಲಾರರು. ಜಿಲ್ಲಾಡಳಿತ ಇದನ್ನರಿಯಬೇಕು.
ನೊಂದಣಿ ತಡವಾದಷ್ಟೂ ಈ ಉತ್ಪನ್ನಗಳು ಮಧ್ಯವರ್ತಿಗಳ ಪಾಲಾಗಿ ರೈತರಿಗೆ ನಷ್ಟ ಉಂಟಾಗುತ್ತದೆ ಎಂಬುದು ರೈತರ ಅನಿಸಿಕೆ.
ನೋಂದಣಿಯಾದ ಭತ್ತ, ರಾಗಿಯನ್ನು ಜ.೧ರಿಂದ ಮಾ. ೨೩ರವರೆಗೆ ಖರೀದಿಸುವುದಾಗಿ ಜಿಲ್ಲಾಧಿಕಾರಿಯವರು ಈಗಾಗಲೇ ತಿಳಿಸಿದ್ದು ನೋಂದಣಿಯನ್ನೇ ಹೀಗೆ ತಡ ಮಾಡಿದರೆ ಹೇಗೆ ಎಂಬುದು ಬೆಳೆಗಾರರ ಪ್ರಶ್ನೆ.


ತಾಂತ್ರಿಕ ಕಾರಣಗಳಿಂದ ಭತ್ತ, ರಾಗಿ ಖರೀದಿ ನೋಂದಣಿಯನ್ನು ನಿಗದಿಯಂತೆ ಡಿ.೧೫ರಿಂದ ಆರಂಭಿಸಲಾಗಿಲ್ಲ.ಡಿ.೧೯ರ ಸೋಮವಾರದಿಂದ ಜಿಲ್ಲೆಯ ಐದೂ ಕೇಂದ್ರಗಳಲ್ಲಿ ನೋಂದಣಿ ಆರಂಭಿಸಲಾಗುತ್ತಿದ್ದು ಇದಕ್ಕೆ ಬೇಕಾದ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ.
– ರವೀಂದ್ರ, ಜಿಲ್ಲಾ ವ್ಯವಸ್ಥಾಪಕರು, ಕ.ರಾ.ಸ.ಮಾ. ಮಂಡಳಿ.


ಭತ್ತ, ರಾಗಿಯನ್ನು ನೊಂದಣಿ ಮಾಡುತ್ತಿದ್ದಂತೆ ರೈತರಿಂದ ಖರೀದಿಸಬೇಕು. ಜ.೧ರಿಂದ ಖರೀದಿಸುವುದಾಗಿ ಜಿಲ್ಲಾಡಳಿತ ತಿಳಿಸಿದ್ದು ಕೊಯ್ಲು ಮಾಡಿರುವ ಉತ್ಪನ್ನವನ್ನು ಅಲ್ಲಿಯವರೆಗೆ ಸಂಗ್ರಹಿಸಿ ಇಟ್ಟುಕೊಳ್ಳುವುದು ಈಗಿನ ಅಕಾಲಿಕ ಮಳೆ ಪರಿಸ್ಥಿತಿಯಲ್ಲಿ ತುಂಬಾ ಕಷ್ಟದ ಕೆಲಸ.
-ಬಸವಣ್ಣ, ರೈತ ಮುಖಂಡರು, ಹೊನ್ನೂರು.

andolanait

Recent Posts

ಮಡಿಕೇರಿ: ವಿದ್ಯುತ್ ತಂತಿ ಮೇಲೆ ಮರ ಬೀಳಿಸಿ ಕಾಡಾನೆಗಳ ಪುಂಡಾಟ

ಮಡಿಕೇರಿ: ಕೊಡಗಿನಲ್ಲಿ ವನ್ಯಜೀವಿ–ಮಾನವ ಸಂಘರ್ಷ ಮತ್ತೆ ಮುಂದುವರಿದಿದೆ. ಈ ಬಾರಿ ಕಾಡಾನೆಗಳ ಬುದ್ಧಿವಂತಿಕೆ ಹಾಗೂ ಉಪಾಯದಿಂದ ನಡೆದ ಘಟನೆ ಗ್ರಾಮಸ್ಥರಲ್ಲಿ…

5 hours ago

ಶ್ರೀಲಂಕಾ ಜೈಲಿನಲ್ಲಿ ಗ್ಯಾಂಗ್‌ ವಾರ್:‌ 25 ಕೈದಿಗಳು ಸಾವು

ಕೊಲಂಬೊ: ಶ್ರೀಲಂಕಾದ ಜೈಲಿನಲ್ಲಿ ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು…

5 hours ago

ಜನತೆಗೆ ಮತ್ತೊಂದು ಬ್ಯಾಡ್‌ನ್ಯೂಸ್:‌ ದುಬಾರಿಯಾಗಲಿದೆ ಸೇಬು

ನವದೆಹಲಿ: ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ಈಗ ಮತ್ತೊಂದು ಬ್ಯಾಡ್‌ ನ್ಯೂಸ್‌ ಸಿಕ್ಕಿದೆ. ಹವಾಮಾನ ವೈಪರೀತ್ಯದಿಂದಾಗಿ ಸೇಬು ಹಣ್ಣಿನ ಇಳುವರಿ…

5 hours ago

ಮೊಬೈಲ್‌ ಟಾರ್ಚ್‌ ಹಿಡಿದು ಬಸ್‌ ಚಾಲನೆ: ಮೂವರು ಅಮಾನತು

ಕಲಬುರ್ಗಿ: ಟಾರ್ಚ್‌ ಹಿಡಿದು ಬಸ್‌ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್‌ ಡ್ರೈವರ್‌ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ತಾಂತ್ರಿಕ…

6 hours ago

ರಾಜ್ಯದಲ್ಲಿ ಚುರುಕು ಪಡೆದುಕೊಂಡ ಮಳೆ: ಜಲಾಶಯಗಳ ಒಳಹರಿವಿನಲ್ಲಿ ಏರಿಕೆ

ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ದಾಖಲಾಗದಿದ್ದರೂ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ…

6 hours ago

ಧಾರಾಕಾರ ಮಳೆಗೆ ತತ್ತರಿಸಿದ ಮುಂಬೈ

ಮುಂಬೈ: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೇಶದ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ಮಳೆಯ ಆರ್ಭಟಕ್ಕೆ ನಗರದ…

6 hours ago