ಮೈಸೂರು : ನಗರದ ಎಂ.ಎಂ.ಕೆ. ಮತ್ತು ಎಸ್.ಡಿ.ಎಂ. ಮಹಿಳಾ ಮಹಾವಿದ್ಯಾಲಯದಲ್ಲಿ ಇಂದು ಗಣಕ ವಿಜ್ಞಾನ ವಿಭಾಗ ಮತ್ತು ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯ ಐ ಸಿ ಟಿ ಅಕಾಡೆಮಿ ಸಹಯೋಗದಲ್ಲಿ ಸಿಎಸ್ಆರ್ – ಫೆಡೆಕ್ಸ್ ಕಾರ್ಯಕ್ರಮದ ಅಂಗವಾಗಿ “ಮಹಿಳಾ ಸಬಲೀಕರಣ ಕಾರ್ಯಕ್ರಮ” ವನ್ನು ಆಯೋಜಿಸುವ ಮೂಲಕ ಮಾಹಿತಿ ತಂತ್ರಜ್ಞಾನದ-ಪೈಥಾನ್ ಪ್ರೋಗ್ರಾಮಿಂಗ್ ಬಳಕೆ ಮತ್ತು ಅವಕಾಶಗಳ ಕುರಿತು ಸರ್ಟಿಫಿಕೇಟ್ ಕೋರ್ಸ್ನ ಉದ್ಘಾಟಿಸಲಾಯಿತು.
ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಸಾಯಿನಾಥ ಮಲ್ಲಿಗೆಮಾಡು ಅವರು ಉದ್ಘಾಟಿಸಿ ಮಾತನಾಡಿದ ಅವರು ಇಂದಿನ ಮಾಹಿತಿ ತಂತ್ರಜ್ಞಾನದ ಯುಗದಲ್ಲಿ ವಿದ್ಯಾರ್ಥಿಗಳು ವಿಶ್ವದ ವಿದ್ಯಮಾನವನ್ನು ತಿಳಿಯಲು ಈ ರೀತಿಯ ಕಾರ್ಯಗಾರಗಳಲ್ಲಿ ಭಾಗವಹಿಸಬೇಕು. ಈ ಮೂಲಕ ಹೊಸ ನಾವಿನ್ಯತೆಯ ಕೌಶಲ್ಯಗಳನ್ನು ಕಲಿಯುವುದು ಅನಿವಾರ್ಯವಾಗಿದೆ. ಇದರಿಂದ ಮುಂದೆ ಅತ್ಯುತ್ತಮ ಉದ್ಯೋಗ ಅವಕಾಶಗಳು ಪಡೆಯಲು ಸಾಧ್ಯವಾಗುತ್ತದೆ ಈ ಉದ್ದೇಶದಿಂದಾಗಿ ಕಾಲೇಜಿನ ಬಿ.ಸಿ.ಎ. ವಿದ್ಯಾರ್ಥಿಗಳಿಗೆ ನೂರು ಗಂಟೆಗಳು ತರಬೇತಿಯನ್ನು ರಾಜ್ಯದ ಐ.ಸಿ.ಟಿ.ಕೋಶದೊಂದಿಗೆ ಆಯೋಜಿಸಲಾಗಿದೆ ಎಂದರು.
ಕರ್ನಾಟಕ ರಾಜ್ಯ ಐ.ಸಿ.ಟಿ.ಸಂಸ್ಥೆಯ ಮುಖ್ಯಸ್ಥ ಡಾ ವಿಷ್ಣು ಪ್ರಸಾದ್, ಅವರು ಮಾತನಾಡಿ ಪೈಥಾನ್ ಜನಪ್ರಿಯ ಸಾಮಾನ್ಯ ಉದ್ದೇಶದ ಪ್ರೋಗ್ರಾಮಿಂಗ್ ಭಾಷೆಯಾಗಿದ್ದು ಈ ತಂತ್ರಜ್ಞಾನದ ಅನುಕೂಲತೆಗಳು ಯಂತ್ರ ಕಲಿಕೆ, ಡೇಟಾ ವಿಜ್ಞಾನ, ವೆಬ್ ಅಭಿವೃದ್ಧಿ, ಡೆಸ್ಕ್ಟಾಪ್ ಅಪ್ಲಿಕೇಶನ್ಗಳು ಮತ್ತು ಇತರ ಹಲವು ಕ್ಷೇತ್ರಗಳಲ್ಲಿ ಬಳಸಲಾಗುತ್ತದೆ. ಬಿ.ಸಿ.ಎ ವಿದ್ಯಾರ್ಥಿಗಳು ತಮ್ಮ ಉತ್ತಮ ಭವಿಷ್ಯಕ್ಕಾಗಿ ಈ ತಂತ್ರಜ್ಞಾನದ ಮಹತ್ವವನ್ನು ಅರಿತುಕೊಳ್ಳಬೇಕಿದೆ ಎಂದು ಕರೆ ನೀಡಿದರು. ಐಸಿಟಿ ಅಕಾಡೆಮಿಯ ಶ್ರೀ ಮೊಹಮ್ಮದ್ ಯಾಸಿನ್ ಶಾಭಾಜ್, ಶ್ರೀ ಪ್ರಜ್ವಲ್ ಎಸ್ ವಸಿಷ್ಠ ಕಾರ್ಯಕ್ರಮ ಸಂಯೋಜಕಿ ಮತ್ತು ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಕೆ ಎಸ್ ಸುಕೃತಾ ಮತ್ತು ಎಲ್ಲಾ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಮೈಸೂರು: ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ, ಒತ್ತುವರಿ ತೆರವುಗೊಳಿಸುವಂತೆ ಮೈಸೂರು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಅವರು ಅಧಿಕಾರಿಗಳಿಗೆ ಸೂಚನೆ…
ನವದೆಹಲಿ: ಭಾರತ ಸರ್ಕಾರವು ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾಗಳನ್ನು ಪುನರಾರಂಭಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಲ್ವಾನ್ ಕಣಿವೆಯಲ್ಲಿ…
ಮುಂಬೈ: ಆರೋಗ್ಯ ಸಮಸ್ಯೆಯಿಂದ ಮುಂಬೈನ್ ಆಸ್ಪತ್ರೆಗೆ ದಾಖಲಾಗಿದ್ದ ಶರದ್ ಪವಾರ್ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಶರದ್ ಪವಾರ್…
ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು…
ಹಾಸನ: ಮೂವರು ಇಟಿಎಫ್ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…