ಮೈಸೂರು : ನಗರದ ಎಂ.ಎಂ.ಕೆ. ಮತ್ತು ಎಸ್.ಡಿ.ಎಂ. ಮಹಿಳಾ ಮಹಾವಿದ್ಯಾಲಯದಲ್ಲಿ ಇಂದು ಗಣಕ ವಿಜ್ಞಾನ ವಿಭಾಗ ಮತ್ತು ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯ ಐ ಸಿ ಟಿ ಅಕಾಡೆಮಿ ಸಹಯೋಗದಲ್ಲಿ ಸಿಎಸ್ಆರ್ – ಫೆಡೆಕ್ಸ್ ಕಾರ್ಯಕ್ರಮದ ಅಂಗವಾಗಿ “ಮಹಿಳಾ ಸಬಲೀಕರಣ ಕಾರ್ಯಕ್ರಮ” ವನ್ನು ಆಯೋಜಿಸುವ ಮೂಲಕ ಮಾಹಿತಿ ತಂತ್ರಜ್ಞಾನದ-ಪೈಥಾನ್ ಪ್ರೋಗ್ರಾಮಿಂಗ್ ಬಳಕೆ ಮತ್ತು ಅವಕಾಶಗಳ ಕುರಿತು ಸರ್ಟಿಫಿಕೇಟ್ ಕೋರ್ಸ್ನ ಉದ್ಘಾಟಿಸಲಾಯಿತು.
ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಸಾಯಿನಾಥ ಮಲ್ಲಿಗೆಮಾಡು ಅವರು ಉದ್ಘಾಟಿಸಿ ಮಾತನಾಡಿದ ಅವರು ಇಂದಿನ ಮಾಹಿತಿ ತಂತ್ರಜ್ಞಾನದ ಯುಗದಲ್ಲಿ ವಿದ್ಯಾರ್ಥಿಗಳು ವಿಶ್ವದ ವಿದ್ಯಮಾನವನ್ನು ತಿಳಿಯಲು ಈ ರೀತಿಯ ಕಾರ್ಯಗಾರಗಳಲ್ಲಿ ಭಾಗವಹಿಸಬೇಕು. ಈ ಮೂಲಕ ಹೊಸ ನಾವಿನ್ಯತೆಯ ಕೌಶಲ್ಯಗಳನ್ನು ಕಲಿಯುವುದು ಅನಿವಾರ್ಯವಾಗಿದೆ. ಇದರಿಂದ ಮುಂದೆ ಅತ್ಯುತ್ತಮ ಉದ್ಯೋಗ ಅವಕಾಶಗಳು ಪಡೆಯಲು ಸಾಧ್ಯವಾಗುತ್ತದೆ ಈ ಉದ್ದೇಶದಿಂದಾಗಿ ಕಾಲೇಜಿನ ಬಿ.ಸಿ.ಎ. ವಿದ್ಯಾರ್ಥಿಗಳಿಗೆ ನೂರು ಗಂಟೆಗಳು ತರಬೇತಿಯನ್ನು ರಾಜ್ಯದ ಐ.ಸಿ.ಟಿ.ಕೋಶದೊಂದಿಗೆ ಆಯೋಜಿಸಲಾಗಿದೆ ಎಂದರು.
ಕರ್ನಾಟಕ ರಾಜ್ಯ ಐ.ಸಿ.ಟಿ.ಸಂಸ್ಥೆಯ ಮುಖ್ಯಸ್ಥ ಡಾ ವಿಷ್ಣು ಪ್ರಸಾದ್, ಅವರು ಮಾತನಾಡಿ ಪೈಥಾನ್ ಜನಪ್ರಿಯ ಸಾಮಾನ್ಯ ಉದ್ದೇಶದ ಪ್ರೋಗ್ರಾಮಿಂಗ್ ಭಾಷೆಯಾಗಿದ್ದು ಈ ತಂತ್ರಜ್ಞಾನದ ಅನುಕೂಲತೆಗಳು ಯಂತ್ರ ಕಲಿಕೆ, ಡೇಟಾ ವಿಜ್ಞಾನ, ವೆಬ್ ಅಭಿವೃದ್ಧಿ, ಡೆಸ್ಕ್ಟಾಪ್ ಅಪ್ಲಿಕೇಶನ್ಗಳು ಮತ್ತು ಇತರ ಹಲವು ಕ್ಷೇತ್ರಗಳಲ್ಲಿ ಬಳಸಲಾಗುತ್ತದೆ. ಬಿ.ಸಿ.ಎ ವಿದ್ಯಾರ್ಥಿಗಳು ತಮ್ಮ ಉತ್ತಮ ಭವಿಷ್ಯಕ್ಕಾಗಿ ಈ ತಂತ್ರಜ್ಞಾನದ ಮಹತ್ವವನ್ನು ಅರಿತುಕೊಳ್ಳಬೇಕಿದೆ ಎಂದು ಕರೆ ನೀಡಿದರು. ಐಸಿಟಿ ಅಕಾಡೆಮಿಯ ಶ್ರೀ ಮೊಹಮ್ಮದ್ ಯಾಸಿನ್ ಶಾಭಾಜ್, ಶ್ರೀ ಪ್ರಜ್ವಲ್ ಎಸ್ ವಸಿಷ್ಠ ಕಾರ್ಯಕ್ರಮ ಸಂಯೋಜಕಿ ಮತ್ತು ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಕೆ ಎಸ್ ಸುಕೃತಾ ಮತ್ತು ಎಲ್ಲಾ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…
ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…
ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್ ತಿಳಿಸಿದರು. ವಿಧಾನಪರಿಷತ್ ಕಲಾಪದಲ್ಲಿ…
ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…
ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ…
ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…