ಜಿಲ್ಲೆಗಳು

ನಾವಿನ್ಯತೆಯ ಕೌಶಲ್ಯಗಳನ್ನು ಕಲಿಯುವುದು ಇಂದಿನ ವಿದ್ಯಾರ್ಥಿಗಳಿಗೆ ಅನಿವಾರ್ಯ : ಪ್ರೊ.ಸಾಯಿನಾಥ ಮಲ್ಲಿಗೆಮಾಡು

ಮೈಸೂರು : ನಗರದ ಎಂ.ಎಂ.ಕೆ. ಮತ್ತು ಎಸ್‌.ಡಿ.ಎಂ. ಮಹಿಳಾ ಮಹಾವಿದ್ಯಾಲಯದಲ್ಲಿ ಇಂದು ಗಣಕ ವಿಜ್ಞಾನ ವಿಭಾಗ ಮತ್ತು ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯ ಐ ಸಿ ಟಿ ಅಕಾಡೆಮಿ ಸಹಯೋಗದಲ್ಲಿ ಸಿಎಸ್‌ಆರ್ – ಫೆಡೆಕ್ಸ್ ಕಾರ್ಯಕ್ರಮದ ಅಂಗವಾಗಿ “ಮಹಿಳಾ ಸಬಲೀಕರಣ ಕಾರ್ಯಕ್ರಮ” ವನ್ನು ಆಯೋಜಿಸುವ ಮೂಲಕ  ಮಾಹಿತಿ ತಂತ್ರಜ್ಞಾನದ-ಪೈಥಾನ್‌ ಪ್ರೋಗ್ರಾಮಿಂಗ್ ಬಳಕೆ ಮತ್ತು ಅವಕಾಶಗಳ ಕುರಿತು ಸರ್ಟಿಫಿಕೇಟ್ ಕೋರ್ಸ್‌ನ ಉದ್ಘಾಟಿಸಲಾಯಿತು.

ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಸಾಯಿನಾಥ ಮಲ್ಲಿಗೆಮಾಡು ಅವರು ಉದ್ಘಾಟಿಸಿ ಮಾತನಾಡಿದ ಅವರು ಇಂದಿನ ಮಾಹಿತಿ ತಂತ್ರಜ್ಞಾನದ ಯುಗದಲ್ಲಿ ವಿದ್ಯಾರ್ಥಿಗಳು ವಿಶ್ವದ ವಿದ್ಯಮಾನವನ್ನು ತಿಳಿಯಲು ಈ ರೀತಿಯ ಕಾರ್ಯಗಾರಗಳಲ್ಲಿ ಭಾಗವಹಿಸಬೇಕು. ಈ ಮೂಲಕ  ಹೊಸ ನಾವಿನ್ಯತೆಯ ಕೌಶಲ್ಯಗಳನ್ನು ಕಲಿಯುವುದು ಅನಿವಾರ್ಯವಾಗಿದೆ. ಇದರಿಂದ  ಮುಂದೆ ಅತ್ಯುತ್ತಮ ಉದ್ಯೋಗ ಅವಕಾಶಗಳು ಪಡೆಯಲು ಸಾಧ್ಯವಾಗುತ್ತದೆ ಈ ಉದ್ದೇಶದಿಂದಾಗಿ ಕಾಲೇಜಿನ ಬಿ.ಸಿ.ಎ. ವಿದ್ಯಾರ್ಥಿಗಳಿಗೆ ನೂರು ಗಂಟೆಗಳು ತರಬೇತಿಯನ್ನು ರಾಜ್ಯದ ಐ.ಸಿ.ಟಿ.ಕೋಶದೊಂದಿಗೆ ಆಯೋಜಿಸಲಾಗಿದೆ ಎಂದರು.

ಕರ್ನಾಟಕ ರಾಜ್ಯ ಐ.ಸಿ.ಟಿ.ಸಂಸ್ಥೆಯ ಮುಖ್ಯಸ್ಥ ಡಾ ವಿಷ್ಣು ಪ್ರಸಾದ್, ಅವರು ಮಾತನಾಡಿ ಪೈಥಾನ್ ಜನಪ್ರಿಯ ಸಾಮಾನ್ಯ ಉದ್ದೇಶದ ಪ್ರೋಗ್ರಾಮಿಂಗ್ ಭಾಷೆಯಾಗಿದ್ದು ಈ ತಂತ್ರಜ್ಞಾನದ ಅನುಕೂಲತೆಗಳು ಯಂತ್ರ ಕಲಿಕೆ, ಡೇಟಾ ವಿಜ್ಞಾನ, ವೆಬ್ ಅಭಿವೃದ್ಧಿ, ಡೆಸ್ಕ್‌ಟಾಪ್ ಅಪ್ಲಿಕೇಶನ್‌ಗಳು ಮತ್ತು ಇತರ ಹಲವು ಕ್ಷೇತ್ರಗಳಲ್ಲಿ ಬಳಸಲಾಗುತ್ತದೆ. ಬಿ.ಸಿ.ಎ ವಿದ್ಯಾರ್ಥಿಗಳು ತಮ್ಮ ಉತ್ತಮ ಭವಿಷ್ಯಕ್ಕಾಗಿ ಈ ತಂತ್ರಜ್ಞಾನದ ಮಹತ್ವವನ್ನು ಅರಿತುಕೊಳ್ಳಬೇಕಿದೆ ಎಂದು ಕರೆ ನೀಡಿದರು.  ಐಸಿಟಿ ಅಕಾಡೆಮಿಯ ಶ್ರೀ ಮೊಹಮ್ಮದ್ ಯಾಸಿನ್ ಶಾಭಾಜ್, ಶ್ರೀ ಪ್ರಜ್ವಲ್ ಎಸ್ ವಸಿಷ್ಠ ಕಾರ್ಯಕ್ರಮ ಸಂಯೋಜಕಿ ಮತ್ತು ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಕೆ ಎಸ್ ಸುಕೃತಾ ಮತ್ತು ಎಲ್ಲಾ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

andolanait

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

24 mins ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

26 mins ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

27 mins ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

29 mins ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

30 mins ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

35 mins ago