ಜಿಲ್ಲೆಗಳು

ಸಮಸ್ಯೆ ನೋಡಿ ಪರಿಹಾರ ನೀಡಿ : ಕಸದ ತೊಟ್ಟಿಯಾಯ್ತು ಟ್ಯಾಂಕ್ ಆವರಣ

ಬಿದ್ದು ಒದ್ದಾಡುತ್ತಿರುವ ಕಸ ತುಂಬಿರುವ ಪ್ಲಾಸ್ಟಿಕ್ ಕೈಚೀಲ; ಅನೈರ್ಮಲ್ಯದಿಂದ ಕೂಡಿರುವ ಖಾಲಿ ಜಾಗ

ಪ್ರಸಾದ್ ಲಕ್ಕೂರು

ಚಾಮರಾಜನಗರ: ನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿರುವ ಬೃಹತ್ ನೀರಿನ ಟ್ಯಾಂಕ್ ಆವರಣ ಕಸದ ತೊಟ್ಟಿಯಾಗಿ ಪರಿವರ್ತಗೊಂಡಿದ್ದು, ಅನೈರ್ಮಲ್ಯ ತಾಂಡವವಾಡುತ್ತಿದೆ.
ಟ್ಯಾಂಕ್ ಸುತ್ತಲೂ ಕಸ ತುಂಬಿದ ಪ್ಲಾಸ್ಟಿಕ್ ಕೈಚೀಲಗಳು ಬಿದ್ದು ಒದ್ದಾಡುತ್ತಿವೆ. ಸಮೀಪವೇ ಮೈಸೂರು ವಿಶ್ವ ವಿದ್ಯಾನಿಲಯದ ಹಾಸ್ಟೆಲ್ ಇದೆ. ಕರಿನಂಜನಪುರ ಬಡಾವಣೆ, ಬುದ್ಧನಗರ, ಹೌಸಿಂಗ್‌ಬೋರ್ಡ್ ಕಾಲೋನಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಿದ್ದು ಓಡಾಡುವ ಜನರು ಕಸವನ್ನು ಎಸೆದು ಹೋಗುತ್ತಿದ್ದಾರೆ.


ನಗರಸಭೆಯ ೧೦ನೇ ವಾರ್ಡ್‌ಗೆ ಸೇರಿದ ಈ ಜಾಗದಲ್ಲಿ ಹಲವು ತಿಂಗಳುಗಳಿಂದ ಕಸದ ರಾಶಿ ರಾರಾಜಿಸುತ್ತಿದೆ. ಸಂಬಂಧಪಟ್ಟ ನಗರಸಭೆ ಅಧಿಕಾರಿಗಳಾಗಲಿ ಅಥವಾ ಈ ವಾರ್ಡ್ ಪ್ರತಿನಿಧಿಸುವ ಸದಸ್ಯರಾಗಲಿ ಇತ್ತ ಗಮನಿಸುತ್ತಿಲ್ಲ ಎಂದು ಸ್ಥಳೀಯರು ಅಸವಾಧಾನ ವ್ಯಕ್ತಪಡಿಸಿದ್ದಾರೆ.
ಬುದ್ಧನಗರ, ಕರಿನಂಜನಪುರ, ಹೌಸಿಂಗ್ ಬೋರ್ಡ್ ಕಾಲೋನಿಗಳಿಗೆ ಕಸ ಸಂಗ್ರಹದ ವಾಹನಗಳು ಆಗಮಿಸಿ ಕಸ ಸಂಗ್ರಹಿಸುತ್ತವೆ. ಈ ವಾಹನ ವಾರಕ್ಕೊಮ್ಮೆ ಬರುವುದು ಅಪರೂಪ. ಆದ್ದರಿಂದ ನಿವಾಸಿಗಳು ಕಸವನ್ನು ಟ್ಯಾಂಕ್ ಬಳಿಯ ಖಾಲಿ ಜಾಗಕ್ಕೆ ಬಿಸಾಡಿ ಹೋಗುತ್ತಾರೆ.
ಮನೆಮನೆಗಳಲ್ಲಿ ಆಟೋ ಮೂಲಕ ಕಸ ಸಂಗ್ರಹಿಸುವುದೇನು ಸರಿ. ಜೊತೆಗೆ ರಸ್ತೆ ಬದಿಗಳು, ಖಾಲಿ ನಿವೇಶನಗಳಲ್ಲಿ ಬಿದ್ದಿರುವ ಕಸ ತೆರವು ವಾಡುವುದು ಯಾವಾಗ? ಎಂದು ನಿವಾಸಿಗಳು ಪ್ರಶ್ನಿಸಿದ್ದಾರೆ.


ಸಾಂಕ್ರಾಮಿಕ ರೋಗಗಳ ಭೀತಿ
ಮಳೆಗಾಲವಾಗಿದ್ದು ಕಸ ಕೊಳೆತು ಸೊಳ್ಳೆಗಳು ಹೆಚ್ಚುತ್ತಿವೆ. ಇದರಿಂದಾಗಿ ಸಾಂಕ್ರಾಮಿಕ ರೋಗಗಳಾದ ಮಲೇರಿಯಾ, ಡೆಂಗ್ಯೂ, ಚಿಕುನ್ ಗುನ್ಯಾ, ವೈರಲ್ ಫೀವರ್, ಹಂದಿಜ್ವರದ ಸೋಂಕು ಹರಡುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ಸ್ಥಳೀಯರು ಕಳವಳ ವ್ಯಕ್ತಪಡಿಸಿದ್ದಾರೆ.
ಟ್ಯಾಂಕ್ ಸಮೀಪವೇ ಚರಂಡಿಯಿದ್ದು ಕಸವೆಲ್ಲ ತುಂಬಿಕೊಂಡಿದೆ. ಜೊತೆಗೆ ಮಳೆಯ ನೀರು ನಿಂತು ಸೊಳ್ಳೆಗಳ ಉತ್ಪಾದನಾ ಕೇಂದ್ರವಾಗಿ ಮಾರ್ಪಟ್ಟಿದೆ. ಟ್ಯಾಂಕ್ ಸಮೀಪದ ಜಾಗ ನಗರಸಭೆಗೆ ಸೇರಿದ್ದು ಕಸವನ್ನು ಮತ್ತು ಗಿಡ-ಗಂಟಿಗಳನ್ನು ತೆರವು ವಾಡಿ ಶುಚಿಗೊಳಿಸಿದರೆ ಆಟವಾಡಲು, ವಾುುಂ ವಿಹಾರ ವಾಡಲು ಅನುಕೂಲವಾಗಲಿದೆ. ಈ ಕುರಿತು ೧೦ನೇ ವಾರ್ಡ್ ಸದಸ್ಯರಾದ ಮನೋಜ್‌ಪಟೇಲ್ ಅವರು ಗಮನಹರಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.


ಟ್ಯಾಂಕ್ ಆವರಣದಲ್ಲಿ ಕಸ ಬಿದ್ದಿರುವ ಬಗ್ಗೆ ಸದಸ್ಯರಾದ ಮನೋಜ್‌ಪಟೇಲ್ ನಮ್ಮ ಗಮನಕ್ಕೆ ತಂದಿದ್ದಾರೆ. ನಗರಸಭೆಯ ಆರೋಗ್ಯ ನಿರೀಕ್ಷಕರಾದ ಸುಷ್ಮಾ ಅವರನ್ನು ಸ್ಥಳಕ್ಕೆ ಕಳುಹಿಸಿ ಪರಿಶೀಲಿಸಿ ಸ್ವಚ್ಛತೆಗೆ ಕ್ರಮ ವಹಿಸಲಾಗುವುದು.
ಗಿರಿಜಮ್ಮ, ಪರಿಸರ ಇಂಜಿನಿುಂರ್, ನಗರಸಭೆ. 


ಟ್ಯಾಂಕ್ ಆವರಣ ಶುಚಿಗೊಳಿಸುವಂತೆ ನಗರಸಭೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದೇನೆ. ಸದ್ಯವೇ ಸ್ವಚ್ಛಗೊಳಿಸಲಿದ್ದಾರೆ. ಸ್ಥಳೀಯರು ಕಸವನ್ನು ಟ್ಯಾಂಕ್ ಬಳಿ ಬಿಸಾಡದೆ ಆಟೋಗೆ ನೀಡಬೇಕು. ಇದರಿಂದ ವಾತಾವರಣ ಶುಚಿಯಾಗಿ ಇರಲಿದೆ.
ಮನೋಜ್ ಪಟೇಲ್, ೧೦ನೇ ವಾರ್ಡ್ ಸದಸ್ಯರು.


ಸುಮಾರು ೨-೩ ತಿಂಗಳಿಂದ ಕಸ ಬಿದ್ದಿದೆ. ವಾರಕ್ಕೆ ೨ ಬಾರಿ ಕಸದ ಆಟೋ ಟ್ಯಾಂಕ್ ಆಸುಪಾಸಿನ ಬಡಾವಣೆಗಳಿಗೆ ಬಂದಿದ್ದರೆ ಕಸ ಬೀದಿಗೆ ಬೀಳುತ್ತಿರಲಿಲ್ಲ. ಮನೆಗಳಲ್ಲಿ ಹೆಚ್ಚಿನ ಕಸವನ್ನು ಇಟ್ಟುಕೊಳ್ಳಲಾಗದೆ ಜನರು ಖಾಲಿ ನಿವೇಶನಕ್ಕೆ ಬಿಸಾಡುತ್ತಿದ್ದಾರೆ.

ಕುಮಾರಸ್ವಾಮಿ, ಎಲ್‌ಐಸಿ ಲೇಔಟ್.

andolanait

Recent Posts

ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು: ದೇವರಾಜ ಅರಸು ಆಡಳಿತಕ್ಕೂ ಸಿದ್ದರಾಮಯ್ಯ ಆಡಳಿತಕ್ಕೂ ಹೋಲಿಕೆ ಮಾಡುವುದು ಬೇಡ. ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ ಎಂದು ಮಾಜಿ…

3 mins ago

ಪಿರಿಯಾಪಟ್ಟಣ| 10 ಲಕ್ಷ ಮೌಲ್ಯದ ಅಡಿಕೆ ದೋಚಿದ ಖದೀಮರು

ಪಿರಿಯಾಪಟ್ಟಣ: ತಾಲ್ಲೂಕಿನ ಬೈಲುಕುಪ್ಪೆಯಲ್ಲಿ ಖದೀಮರು 10 ಲಕ್ಷ ಮೌಲ್ಯದ ಅಡಿಕೆಯನ್ನು ಕಳ್ಳತನ ಮಾಡಿದ್ದು, ಟಿಬೆಟಿಯನ್‌ ರೈತರೊಬ್ಬರು ಕಂಗಾಲಾಗಿದ್ದಾರೆ. ಬೈಲಕುಪ್ಪೆಯ ತಿರುಮಲಾಪುರ…

30 mins ago

ಕೊಡಗು ಜಿಲ್ಲೆಯಲ್ಲಿ ಆದಾಯ ತೆರಿಗೆ ಪಾವತಿದಾರರಲ್ಲಿ ರಶ್ಮಿಕಾ ಮಂದಣ್ಣ ನಂಬರ್.‌1

ಮಡಿಕೇರಿ: ಕೊಡಗು  ಜಿಲ್ಲೆಯಲ್ಲಿ ಆದಾಯ ತೆರಿಗೆ ಪಾವತಿದಾರರಲ್ಲಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮೊದಲ ಸ್ಥಾನದಲ್ಲಿದ್ದಾರೆ. ಕಿರಿಕ್‌ ಪಾರ್ಟಿ ಮೂಲಕ…

38 mins ago

ಸಾಕ್ಷ್ಯ ಸಿಗಬಾರದೆಂದು ಮೃತ ರಾಜಶೇಖರ್‌ ದೇಹ ಸುಟ್ಟಿದ್ದಾರೆ: ಶ್ರೀರಾಮುಲು ಗಂಭೀರ ಆರೋಪ

ಬಳ್ಳಾರಿ: ಬಳ್ಳಾರಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಶ್ರೀರಾಮುಲು ಗಂಭೀರ ಆರೋಪ ಮಾಡಿದ್ದಾರೆ. ಪ್ರಕರಣ ಕುರಿತು ಮಾತನಾಡಿದ ಮಾಜಿ…

1 hour ago

ಬಸ್-ಲಾರಿ ಡಿಕ್ಕಿ: ಚಾಲಕ ಸಾವು, ಹಲವು ಪ್ರಯಾಣಿಕರಿಗೆ ಗಾಯ

ರಾಜೇಶ್ ಬೆಂಡರವಾಡಿ ಚಾಮರಾಜನಗರ: ತಾಲ್ಲೂಕಿನ ಬೆಂಡರವಾಡಿ ಗ್ರಾಮದ ಬಳಿ ಲಾರಿ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಮಂಗಳವಾರ ರಾತ್ರಿ ಮುಖಾಮುಖಿ…

5 hours ago

ಓದುಗರ ಪತ್ರ: ಕುಂಭೇಶ್ವರ ಕಾಲೋನಿ ರೈತರ ಜಮೀನು ವಿವಾದ ಪರಿಹರಿಸಿ

ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ದಿ.ಬಿ.ರಾಚಯ್ಯ ಅವರು ಸಚಿವರಾಗಿದ್ದಾಗ ಹರದನಹಳ್ಳಿ ಡಿಸ್ಟ್ರಿಕ್ಟ್ ಫಾರೆಸ್ಟ್ ಸರ್ವೆ ನಂ.೩ರಲ್ಲಿ…

5 hours ago