ಜಿಲ್ಲೆಗಳು

ಸಮಸ್ಯೆ ನೋಡಿ ಪರಿಹಾರ ನೀಡಿ : ಕಸದ ತೊಟ್ಟಿಯಾಯ್ತು ಟ್ಯಾಂಕ್ ಆವರಣ

ಬಿದ್ದು ಒದ್ದಾಡುತ್ತಿರುವ ಕಸ ತುಂಬಿರುವ ಪ್ಲಾಸ್ಟಿಕ್ ಕೈಚೀಲ; ಅನೈರ್ಮಲ್ಯದಿಂದ ಕೂಡಿರುವ ಖಾಲಿ ಜಾಗ

ಪ್ರಸಾದ್ ಲಕ್ಕೂರು

ಚಾಮರಾಜನಗರ: ನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿರುವ ಬೃಹತ್ ನೀರಿನ ಟ್ಯಾಂಕ್ ಆವರಣ ಕಸದ ತೊಟ್ಟಿಯಾಗಿ ಪರಿವರ್ತಗೊಂಡಿದ್ದು, ಅನೈರ್ಮಲ್ಯ ತಾಂಡವವಾಡುತ್ತಿದೆ.
ಟ್ಯಾಂಕ್ ಸುತ್ತಲೂ ಕಸ ತುಂಬಿದ ಪ್ಲಾಸ್ಟಿಕ್ ಕೈಚೀಲಗಳು ಬಿದ್ದು ಒದ್ದಾಡುತ್ತಿವೆ. ಸಮೀಪವೇ ಮೈಸೂರು ವಿಶ್ವ ವಿದ್ಯಾನಿಲಯದ ಹಾಸ್ಟೆಲ್ ಇದೆ. ಕರಿನಂಜನಪುರ ಬಡಾವಣೆ, ಬುದ್ಧನಗರ, ಹೌಸಿಂಗ್‌ಬೋರ್ಡ್ ಕಾಲೋನಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಿದ್ದು ಓಡಾಡುವ ಜನರು ಕಸವನ್ನು ಎಸೆದು ಹೋಗುತ್ತಿದ್ದಾರೆ.


ನಗರಸಭೆಯ ೧೦ನೇ ವಾರ್ಡ್‌ಗೆ ಸೇರಿದ ಈ ಜಾಗದಲ್ಲಿ ಹಲವು ತಿಂಗಳುಗಳಿಂದ ಕಸದ ರಾಶಿ ರಾರಾಜಿಸುತ್ತಿದೆ. ಸಂಬಂಧಪಟ್ಟ ನಗರಸಭೆ ಅಧಿಕಾರಿಗಳಾಗಲಿ ಅಥವಾ ಈ ವಾರ್ಡ್ ಪ್ರತಿನಿಧಿಸುವ ಸದಸ್ಯರಾಗಲಿ ಇತ್ತ ಗಮನಿಸುತ್ತಿಲ್ಲ ಎಂದು ಸ್ಥಳೀಯರು ಅಸವಾಧಾನ ವ್ಯಕ್ತಪಡಿಸಿದ್ದಾರೆ.
ಬುದ್ಧನಗರ, ಕರಿನಂಜನಪುರ, ಹೌಸಿಂಗ್ ಬೋರ್ಡ್ ಕಾಲೋನಿಗಳಿಗೆ ಕಸ ಸಂಗ್ರಹದ ವಾಹನಗಳು ಆಗಮಿಸಿ ಕಸ ಸಂಗ್ರಹಿಸುತ್ತವೆ. ಈ ವಾಹನ ವಾರಕ್ಕೊಮ್ಮೆ ಬರುವುದು ಅಪರೂಪ. ಆದ್ದರಿಂದ ನಿವಾಸಿಗಳು ಕಸವನ್ನು ಟ್ಯಾಂಕ್ ಬಳಿಯ ಖಾಲಿ ಜಾಗಕ್ಕೆ ಬಿಸಾಡಿ ಹೋಗುತ್ತಾರೆ.
ಮನೆಮನೆಗಳಲ್ಲಿ ಆಟೋ ಮೂಲಕ ಕಸ ಸಂಗ್ರಹಿಸುವುದೇನು ಸರಿ. ಜೊತೆಗೆ ರಸ್ತೆ ಬದಿಗಳು, ಖಾಲಿ ನಿವೇಶನಗಳಲ್ಲಿ ಬಿದ್ದಿರುವ ಕಸ ತೆರವು ವಾಡುವುದು ಯಾವಾಗ? ಎಂದು ನಿವಾಸಿಗಳು ಪ್ರಶ್ನಿಸಿದ್ದಾರೆ.


ಸಾಂಕ್ರಾಮಿಕ ರೋಗಗಳ ಭೀತಿ
ಮಳೆಗಾಲವಾಗಿದ್ದು ಕಸ ಕೊಳೆತು ಸೊಳ್ಳೆಗಳು ಹೆಚ್ಚುತ್ತಿವೆ. ಇದರಿಂದಾಗಿ ಸಾಂಕ್ರಾಮಿಕ ರೋಗಗಳಾದ ಮಲೇರಿಯಾ, ಡೆಂಗ್ಯೂ, ಚಿಕುನ್ ಗುನ್ಯಾ, ವೈರಲ್ ಫೀವರ್, ಹಂದಿಜ್ವರದ ಸೋಂಕು ಹರಡುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ಸ್ಥಳೀಯರು ಕಳವಳ ವ್ಯಕ್ತಪಡಿಸಿದ್ದಾರೆ.
ಟ್ಯಾಂಕ್ ಸಮೀಪವೇ ಚರಂಡಿಯಿದ್ದು ಕಸವೆಲ್ಲ ತುಂಬಿಕೊಂಡಿದೆ. ಜೊತೆಗೆ ಮಳೆಯ ನೀರು ನಿಂತು ಸೊಳ್ಳೆಗಳ ಉತ್ಪಾದನಾ ಕೇಂದ್ರವಾಗಿ ಮಾರ್ಪಟ್ಟಿದೆ. ಟ್ಯಾಂಕ್ ಸಮೀಪದ ಜಾಗ ನಗರಸಭೆಗೆ ಸೇರಿದ್ದು ಕಸವನ್ನು ಮತ್ತು ಗಿಡ-ಗಂಟಿಗಳನ್ನು ತೆರವು ವಾಡಿ ಶುಚಿಗೊಳಿಸಿದರೆ ಆಟವಾಡಲು, ವಾುುಂ ವಿಹಾರ ವಾಡಲು ಅನುಕೂಲವಾಗಲಿದೆ. ಈ ಕುರಿತು ೧೦ನೇ ವಾರ್ಡ್ ಸದಸ್ಯರಾದ ಮನೋಜ್‌ಪಟೇಲ್ ಅವರು ಗಮನಹರಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.


ಟ್ಯಾಂಕ್ ಆವರಣದಲ್ಲಿ ಕಸ ಬಿದ್ದಿರುವ ಬಗ್ಗೆ ಸದಸ್ಯರಾದ ಮನೋಜ್‌ಪಟೇಲ್ ನಮ್ಮ ಗಮನಕ್ಕೆ ತಂದಿದ್ದಾರೆ. ನಗರಸಭೆಯ ಆರೋಗ್ಯ ನಿರೀಕ್ಷಕರಾದ ಸುಷ್ಮಾ ಅವರನ್ನು ಸ್ಥಳಕ್ಕೆ ಕಳುಹಿಸಿ ಪರಿಶೀಲಿಸಿ ಸ್ವಚ್ಛತೆಗೆ ಕ್ರಮ ವಹಿಸಲಾಗುವುದು.
ಗಿರಿಜಮ್ಮ, ಪರಿಸರ ಇಂಜಿನಿುಂರ್, ನಗರಸಭೆ. 


ಟ್ಯಾಂಕ್ ಆವರಣ ಶುಚಿಗೊಳಿಸುವಂತೆ ನಗರಸಭೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದೇನೆ. ಸದ್ಯವೇ ಸ್ವಚ್ಛಗೊಳಿಸಲಿದ್ದಾರೆ. ಸ್ಥಳೀಯರು ಕಸವನ್ನು ಟ್ಯಾಂಕ್ ಬಳಿ ಬಿಸಾಡದೆ ಆಟೋಗೆ ನೀಡಬೇಕು. ಇದರಿಂದ ವಾತಾವರಣ ಶುಚಿಯಾಗಿ ಇರಲಿದೆ.
ಮನೋಜ್ ಪಟೇಲ್, ೧೦ನೇ ವಾರ್ಡ್ ಸದಸ್ಯರು.


ಸುಮಾರು ೨-೩ ತಿಂಗಳಿಂದ ಕಸ ಬಿದ್ದಿದೆ. ವಾರಕ್ಕೆ ೨ ಬಾರಿ ಕಸದ ಆಟೋ ಟ್ಯಾಂಕ್ ಆಸುಪಾಸಿನ ಬಡಾವಣೆಗಳಿಗೆ ಬಂದಿದ್ದರೆ ಕಸ ಬೀದಿಗೆ ಬೀಳುತ್ತಿರಲಿಲ್ಲ. ಮನೆಗಳಲ್ಲಿ ಹೆಚ್ಚಿನ ಕಸವನ್ನು ಇಟ್ಟುಕೊಳ್ಳಲಾಗದೆ ಜನರು ಖಾಲಿ ನಿವೇಶನಕ್ಕೆ ಬಿಸಾಡುತ್ತಿದ್ದಾರೆ.

ಕುಮಾರಸ್ವಾಮಿ, ಎಲ್‌ಐಸಿ ಲೇಔಟ್.

andolanait

Recent Posts

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

32 mins ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

1 hour ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

2 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

4 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

5 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

5 hours ago